AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಿತ್ರ ಕಾಯಿಲೆ ಹಾಗೂ ನಿರುದ್ಯೋಗಕ್ಕೆ ರೋಸಿಹೋದ ಕಿರುತೆರೆ ನಟಿ; ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ

ಸುಮೊನಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಎಲ್ಲವನ್ನೂ ವಿವರಿಸಿದ್ದಾರೆ. ನನಗೆ ನಿರುದ್ಯೋಗ ತುಂಬಾನೇ ಕಾಡುತ್ತಿದೆ ಎಂದಿದ್ದಾರೆ.

ವಿಚಿತ್ರ ಕಾಯಿಲೆ ಹಾಗೂ ನಿರುದ್ಯೋಗಕ್ಕೆ ರೋಸಿಹೋದ ಕಿರುತೆರೆ ನಟಿ; ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ
ಸುಮೋನಾ ಚಕ್ರವರ್ತಿ
ರಾಜೇಶ್ ದುಗ್ಗುಮನೆ
|

Updated on: May 15, 2021 | 9:55 PM

Share

ಸೆಲೆಬ್ರಿಟಿಗಳು ಎಂದಾಕ್ಷಣ ಅವರ ಬಳಿ ಸಾಕಷ್ಟು ಹಣ ಇರುತ್ತದೆ. ಅವರ ಲೈಫ್​ ಬಿಂದಾಸ್​ ಆಗಿರುತ್ತದೆ ಎಂಬುದು ಅನೇಕರ ನಂಬಿಕೆ. ಆದರೆ, ಎಲ್ಲಾ ಸೆಲೆಬ್ರಿಟಿಗಳ ಲೈಫ್​ ಅದೇ ರೀತಿ ಇರುವುದಿಲ್ಲ ಎಂಬುದು ಅನೇಕರಿಗೆ ಗೊತ್ತಿರುವುದಿಲ್ಲ. ಈಗ ಇದಕ್ಕೆ ತಾಜಾ ಉದಾಹರಣೆ ಹಿಂದಿ ಕಿರುತೆರೆ ನಟಿ ಸುಮೋನಾ ಚಕ್ರವರ್ತಿ. ‘ಕಪಿಲ್​ ಶರ್ಮಾ ಶೋ’ ಮೂಲಕ ಹೆಚ್ಚು ಪರಿಚಿತರಾದ ಇವರಿಗೆ ನಿರುದ್ಯೋಗ ಕಾಡುತ್ತಿದೆ. 2011ರಿಂದ ಎಂಡೊಮೆಟ್ರಿಯೊಸಿಸ್ ಹೆಸರಿನ ಅಪರೂಪದ ರೋಗದಿಂದ ಬಳಲುತ್ತಿರುವ ಬಗ್ಗೆ ಅವರು ಅಳಲು ತೋಡಿಕೊಂಡಿದ್ದಾರೆ.

ಸುಮೊನಾ ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್​ ಒಂದನ್ನು ಹಾಕಿದ್ದಾರೆ. ಈ ಪೋಸ್ಟ್​ನಲ್ಲಿ ಅವರು ಎಲ್ಲವನ್ನೂ ವಿವರಿಸಿದ್ದಾರೆ. ‘ನಾನು ನಿರುದ್ಯೋಗಿ ಇರಬಹುದು ಮತ್ತು ಸದ್ಯ, ನನ್ನ ಕುಟುಂಬವನ್ನು ನೋಡಿಕೊಳ್ಳಲು ಆಗುತ್ತಿರುಬಹುದು. ಆದರೆ, ಕೆಲವೊಮ್ಮೆ ನನಗೆ ತಪ್ಪಿತಸ್ಥ ಭಾವನೆ ಕಾಡುತ್ತದೆ. ನನಗಿರುವ ಸಮಸ್ಯೆಯಿಂದ ಮೂಡ್​ ಸ್ವಿಂಗ್​ ಆಗುತ್ತದೆ. ನಾನು ಎಂಡೊಮೆಟ್ರಿಯೊಸಿಸ್ ರೋಗದ ನಾಲ್ಕನೇ ಹಂತದಲ್ಲಿದ್ದೇನೆ. ಕಳೆದ 10 ವರ್ಷದಿಂದ ಇದೇ ರೋಗದಿಂದ ಬಳಲುತ್ತಿದ್ದೇನೆ. ಉತ್ತಮ ಆಹಾರ ಅಭ್ಯಾಸ, ವ್ಯಾಯಾಮ ಹಾಗೂ ಒತ್ತಡಕ್ಕೆ ಒಳಗಾಗದೆ ಇರುವುದು ನನ್ನ ಆರೋಗ್ಯವನ್ನು ಕಾಪಾಡುತ್ತಿದೆ’ ಎಂದಿದ್ದಾರೆ ಅವರು.

ಕೊರೊನಾ ಕಾರಣಕ್ಕೆ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಇದರಿಂದ ಸುಮೊನಾಗೆ ಸಮಸ್ಯೆ ಉಂಟಾಗುತ್ತಿದೆಯಂತೆ. ‘ಲಾಕ್‌ಡೌನ್​ನಿಂದ ನನಗೆ ಭಾವನಾತ್ಮಕವಾಗಿ ಕಷ್ಟವಾಗುತ್ತಿದೆ. COVID-19 ನಿಂದ ಉಂಟಾದ ಲಾಕ್‌ಡೌನ್‌ನಲ್ಲಿ ನಾನು ಕಳೆದ ವರ್ಷದಿಂದ ನಿರುದ್ಯೋಗಿಯಾಗಿದ್ದೇನೆ. ಯಾವುದೇ ಕೆಲಸವಿಲ್ಲದಿದ್ದರೂ, ನಿತ್ಯದ ಖರ್ಚಿಗೆ ಸಾಕಾಗುವಷ್ಟು ಹಣವಿದೆ ಎಂದಿದ್ದಾರೆ.

ಸುಮೋನಾ ಇತ್ತೀಚೆಗೆ ಅಂಡಮಾನ್​-ನಿಕೋಬಾರ್​ ಐಸ್​ಲೆಂಡ್​ಗೆ ತೆರಳಿದ್ದರು. ಅಲ್ಲಿನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅವರು ಹಂಚಿಕೊಂಡಿದ್ದರು. ಈ ಫೋಟೋ ಸಾಕಷ್ಟು ವೈರಲ್​ ಆಗಿತ್ತು. ಕಪಿಲ್​ ಶರ್ಮಾ ನಡೆಸಿಕೊಡುವ ‘ಕಪಿಲ್​ ಶರ್ಮಾ ಶೋ’ನಲ್ಲಿ ಸುಮೋನಾ ಕಾಣಿಸಿಕೊಂಡಿದ್ದರು. ಅವರಿಗೆ ಒಳ್ಳೆಯ ಫೇಮ್​ ತಂದುಕೊಟ್ಟಿತ್ತು. ‘ಬಡೇ ಅಚ್ಚೇ ಲಗ್ತೇ ಹೈ’ ಸೇರಿ ಸಾಕಷ್ಟು ಧಾರಾವಾಹಿಗಳಲ್ಲಿ ಸುಮೋನು ನಟಿಸಿದ್ದಾರೆ.

ಇದನ್ನೂ ಓದಿ: Remdesivir: ರೆಮಿಡಿಸಿವರ್ ಇಂಜೆಕ್ಷನ್​ಗೆ ಬಾಲಿವುಡ್ ಕೊರಿಯೋಗ್ರಾಫರ್​ ಹೆಸರು; ಫನ್ನಿ ವಿಡಿಯೋ ವೈರಲ್​

Follow Us
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಜೆವಾರ್‌ನಲ್ಲಿ ಅಂತಾರಾಷ್ಟ್ರೀಯ ಏರ್​ಪೋರ್ಟ್​ ಉದ್ಘಾಟನೆ ಮಾಡಿದ ಮೋದಿ!
ಕಾಫಿನಾಡಿನಲ್ಲಿ ವರುಣನ ಅಬ್ಬರ
ಕಾಫಿನಾಡಿನಲ್ಲಿ ವರುಣನ ಅಬ್ಬರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ತುಲಾಭಾರ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಇನ್ನೋವಾ ಕಾರು ಡಿಕ್ಕಿಯಾಗಿ ಗರ್ಭಿಣಿ ಇದ್ದ ಆಂಬುಲೆನ್ಸ್ ಪಲ್ಟಿ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬೆಂಗಳೂರಿನಲ್ಲಿ ಗ್ಯಾಸ್​​ ಸಿಲಿಂಡರ್​ ಲಾರಿ ಪಲ್ಟಿ: ತಪ್ಪಿದ ಭಾರಿ ಅನಾಹುತ
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಸಿಬ್ಬಂದಿಗೆ ಕ್ಲಾಸ್ ತಗೊಂಡ ಮಹಿಳೆಯರು!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
‘ಗೋ ಬ್ಯಾಕ್ ಜಮೀರ್​ ಅಹ್ಮದ್’: ಬಾಗಲಕೋಟೆಯಲ್ಲಿ ಮುಸ್ಲಿಂ ಮುಖಂಡರ ಆಕ್ರೋಶ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ಮುಸ್ಲಿಮ್ ವಿದ್ಯಾರ್ಥಿಗೆ 'ಟೆರರಿಸ್ಟ್' ಎಂದು ಕ್ಲಾಸ್​ನಲ್ಲೇ ಅವಮಾನ!
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಚಿತಾ ರಾಮ್​ಗೆ ಹಾಡಿನ ಮೂಲಕ ಪ್ರಪೋಸ್ ಮಾಡಿದ ಸಿದ್ದೇಗೌಡ್ರು
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!
ರಸ್ತೆ ಇಲ್ಲ, ವಿದ್ಯುತ್ ಇಲ್ಲ! ಮೂಲಭೂತ ಸೌಕರ್ಯವಿಲ್ಲದೆ ಜನರು ಕಂಗಾಲು!