AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Cylinder: ಕೊರೊನಾದಿಂದ ಕಂಗಾಲಾದ ಬೆಂಗಳೂರಿಗೆ ಉಚಿತ ಆಕ್ಸಿಜನ್​ ನೀಡಲು ಮುಂದೆ ಬಂದ ಸುನೀಲ್​ ಶೆಟ್ಟಿ

Suniel Shetty: ಈ ಮಾಹಿತಿಯನ್ನು ಎಷ್ಟು ಸಾಧ್ಯವೋ ಅಷ್ಟು ಜನರಿಗೆ ತಲುಪಿಸಿ. ಸದ್ಯಕ್ಕೆ ಮುಂಬೈ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದೇವೆ’ ಎಂದು ಸುನೀಲ್​ ಶೆಟ್ಟಿ ಹೇಳಿದ್ದಾರೆ.

Oxygen Cylinder: ಕೊರೊನಾದಿಂದ ಕಂಗಾಲಾದ ಬೆಂಗಳೂರಿಗೆ ಉಚಿತ ಆಕ್ಸಿಜನ್​ ನೀಡಲು ಮುಂದೆ ಬಂದ ಸುನೀಲ್​ ಶೆಟ್ಟಿ
ಸುನೀಲ್​ ಶೆಟ್ಟಿ - ಆಕ್ಸಿಜನ್​ ಸಿಲಿಂಡರ್​​​
ಮದನ್​ ಕುಮಾರ್​
|

Updated on: Apr 29, 2021 | 11:48 AM

Share

ಭಾರತದಲ್ಲಿ ಕೊರನಾ ವೈರಸ್​ ಹಾವಳಿ ಮಿತಿ ಮೀರಿದೆ. ಈ ಸಂದರ್ಭದಲ್ಲಿ ಕೆಲವು ಸೆಲೆಬ್ರಿಟಿಗಳು ವಿದೇಶದಲ್ಲಿ ಎಂಜಾಯ್​ ಮಾಡುತ್ತಿದ್ದಾರೆ. ಬಹುತೇಕ ನಟ-ನಟಿಯರು ತಮ್ಮ ಐಷಾರಾಮಿ ಮನೆಗಳಲ್ಲಿ ಹಾಯಾಗಿ ಕಾಲ ಕಳೆಯುತ್ತಿದ್ದಾರೆ. ಆದರೆ ಕೆಲವರು ಮಾತ್ರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿದ್ದಾರೆ. ಮೊದಲಿನಿಂದಲೂ ಬಾಲಿವುಡ್​ ನಟ ಸೋನು ಸೂದ್​ ಅವರು ಜನರಿಗೆ ಸಹಾಯ ಮಾಡುತ್ತಲೇ ಬಂದಿದ್ದಾರೆ. ಈಗ ನಟ ಸುನೀಲ್​ ಶೆಟ್ಟಿ ಕೂಡ ಸಾಥ್​ ನೀಡುತ್ತಿದ್ದಾರೆ. ಅದರಲ್ಲೂ ಅವರು ಬೆಂಗಳೂರಿನ ಜನರ ಕಷ್ಟಕ್ಕೆ ಮಿಡಿಯುತ್ತಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಆಕ್ಸಿಜನ್​ ಕೊರತೆ ತೀವ್ರವಾಗಿ ಕಾಡುತ್ತಿದೆ. ಆಸ್ಪತ್ರೆಯಲ್ಲಿ ದಾಖಲಾಗುವ ಕೊವಿಡ್​ ಸೋಂಕಿತರಿಗೆ ಉಸಿರಾಟದ ತೊಂದರೆ ಆಗುತ್ತಿದೆ. ಸೂಕ್ತ ಕಾಲಕ್ಕೆ ಆಕ್ಸಿಜನ್​ ಸಿಲಿಂಡರ್​ಗಳು ಸಿಗದೇ ಅನೇಕರು ಮೃತಪಡುತ್ತಿದ್ದಾರೆ. ಈ ಸಂದರ್ಭದಲ್ಲಿ ಬೆಂಗಳೂರು ಮತ್ತು ಮುಂಬೈ ನಗರದ ಜನರಿಗೆ ಆಕ್ಸಿಜನ್​ ಸಿಗುವಂತೆ ಮಾಡಲು ಸುನೀಲ್​ ಶೆಟ್ಟಿ ಪಣತೊಟ್ಟಿದ್ದಾರೆ.

‘ಇದು ನಮ್ಮೆಲ್ಲರಿಗೂ ಪರೀಕ್ಷೆಯ ಕಾಲ. ಆದರೆ ಜನರು ಒಬ್ಬರಿಗೊಬ್ಬರು ಸಹಾಯ ಮಾಡಲು ಕೈ ಜೋಡಿಸುತ್ತಿರುವುದು ಭರವಸೆಯ ಕಿರಣದಂತೆ ಕಾಣಿಸಿದೆ. ಉಚಿತವಾಗಿ ಆಕ್ಸಿಜನ್​ ನೀಡುವ ಈ ಅಭಿಯಾನದಲ್ಲಿ ಭಾಗಿ ಆಗುತ್ತಿರುವದಕ್ಕೆ ನಾನು ಧನ್ಯ ಎನಿಸುತ್ತಿದೆ’ ಎಂದು ಸುನೀಲ್​ ಶೆಟ್ಟಿ ಟ್ವಿಟರ್​ ಮೂಲಕ ತಿಳಿಸಿದ್ದಾರೆ. ಕೆವಿನ್​ ಫೌಂಡೇಶನ್​ ಜೊತೆ ಸೇರಿ ಅವರು ಈ ಕಾರ್ಯವನ್ನು ಮಾಡುತ್ತಿದ್ದಾರೆ. ಫೀಡ್​ ಮೈ ಸಿಟಿ ಹೆಸರಿನ ಈ ಅಭಿಮಾನಕ್ಕೆ ಅನೇಕರು ಕೈ ಜೋಡಿಸುತ್ತಿದ್ದಾರೆ.

‘ಈ ಮೂಲಕ ತನ್ನ ಸ್ನೇಹಿತರು ಮತ್ತು ಅಭಿಮಾನಿಗಳಲ್ಲಿ ಮನವಿ ಮಾಡುತ್ತಿದ್ದೇನೆ. ನಿಮಗೆ ಸಹಾಯ ಬೇಕಾಗಿದ್ದರೆ ಅಥವಾ ಸಹಾಯದ ಅವಶ್ಯಕತೆ ಇರುವ ಯಾರಾದರೂ ನಿಮಗೆ ಗೊತ್ತಿದ್ದರೆ ನನಗೆ ಮೆಸೇಜ್​ ಮಾಡಿ. ಈ ಅಭಿಯಾನದಲ್ಲಿ ನೀವು ಭಾಗಿಯಾಗುವುದಾದರೆ, ಆ ಮೂಲಕ ಕೊಡುಗೆ ನೀಡುವುದಿದ್ದರೆ ನನಗೆ ಮೆಸೇಜ್​ ಕಳುಹಿಸಿ. ಈ ಮಾಹಿತಿಯನ್ನು ಎಷ್ಟು ಸಾಧ್ಯವೋ ಅಷ್ಟು ಜನರಿಗೆ ತಲುಪಿಸಿ. ಸದ್ಯಕ್ಕೆ ಮುಂಬೈ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದೇವೆ’ ಎಂದು ಸುನೀಲ್​ ಶೆಟ್ಟಿ ಟ್ವೀಟ್​ ಮಾಡಿದ್ದಾರೆ.

ಮೂಲತಃ ಕರ್ನಾಟಕದವರಾದ ಸುನೀಲ್​ ಶೆಟ್ಟಿ ಹೆಚ್ಚು ಮಿಂಚಿದ್ದು ಬಾಲಿವುಡ್​ನಲ್ಲಿ. ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಅವರು ಸುದೀಪ್​ ನಟನೆಯ ಪೈಲ್ವಾನ್​ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೂ ಕಾಲಿಟ್ಟರು. ಈಗ ಅವರು ಬೆಂಗಳೂರಿನ ಜನರ ಕಷ್ಟಕ್ಕೆ ಸ್ಪಂದಿಸುತ್ತಿರುವುದರಿಂದ ಎಲ್ಲರಿಂದ ಮೆಚ್ಚುಗೆ ಗಳಿಸುತ್ತಿದ್ದಾರೆ.

ಇದನ್ನೂ ಓದಿ: Oxygen Cylinder: ಆಸ್ಪತ್ರೆಗೆ ಆಕ್ಸಿಜನ್​ ನೀಡಲು ಮುಂದಾದ ನಟಿ ಸುಶ್ಮಿತಾ ಸೇನ್​​ಗೆ ತಪ್ಪಲಿಲ್ಲ ಟ್ರೋಲ್ ಕಾಟ

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್