AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ
ರಾಹುಲ್​ ಜತೆ ಆಥಿಯಾ
ರಾಜೇಶ್ ದುಗ್ಗುಮನೆ
|

Updated on: Apr 19, 2021 | 4:15 PM

Share

ನಟಿ ಆಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್​. ರಾಹುಲ್​ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಗುಸುಗುಸು ಸಾಮಾಜಿಕ ಜಾಲತಾಣದಲ್ಲಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಇದಕ್ಕೆ ಯಾರಿಂದಲೂ  ಉತ್ತರ ಸಿಕ್ಕಿಲ್ಲ. ಈಗ ರಾಹುಲ್​ ಜನ್ಮದಿನಕ್ಕೆ ಆಥಿಯಾ ಹಂಚಿಕೊಂಡ ಫೋಟೋ ಒಂದು ಸಾಕಷ್ಟು ವೈರಲ್​ ಆಗಿದೆ. ಇದರ ಜತೆಗೆ ಆಥಿಯಾ ತಂದೆ ಹಾಗೂ ನಟ ಸುನೀಲ್​ ಶೆಟ್ಟಿ ಇದಕ್ಕೆ ಹಾಕಿರುವ ಕಮೆಂಟ್​ ಕೂಡ ಎಲ್ಲರ ಗಮನಸೆಳೆಯುತ್ತಿದೆ. ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಈವರೆಗೆ ಅಧಿಕೃತ ಮಾಡಿಲ್ಲ.

ಏಪ್ರಿಲ್​ 18ರಂದು ರಾಹುಲ್​ ಜನ್ಮದಿನ. ಈ ವಿಶೇಷ ದಿನದಂದು ಆಥಿಯಾ ಶೆಟ್ಟಿ ರಾಹುಲ್​ ಜತೆ ಇರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕನ್ನಡಿ ಎದುರು ಇಬ್ಬರೂ ನಿಂತಿದ್ದಾರೆ. ಈ ಫೋಟೋ ನೋಡಿ ‘ನಿನಗೆ ಕೃತಜ್ಞನಾಗಿದ್ದೇನೆ. ಜನ್ಮದಿನದ ಶುಭಾಶಯಗಳು’ ಎಂದು ​ ಬರೆದುಕೊಂಡಿದ್ದಾರೆ. ಇದಕ್ಕೆ ಆಥಿಯಾ ತಂದೆ ಸುನೀಲ್​ ಶೆಟ್ಟಿ ಕಮೆಂಟ್​ ಮಾಡಿದ್ದು, ‘ನಿಜ’ ಎಂದಿದ್ದಾರೆ.

ಈ ಫೋಟೋ ನೋಡಿದ ಕ್ರಿಕೆಟಿಗರು ಕೂಡ ಸಾಕಷ್ಟು ಕಮೆಂಟ್​ ಮಾಡಿದ್ದಾರೆ. ಹಾರ್ದಿಕ್​ ಪಾಂಡ್ಯ ಮೈ ಕ್ಯೂಟೀಸ್​ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕೂಡ ಈ ಜೋಡಿ ಸಖತ್​ ಆಗಿದೆ ಎಂದು ಉತ್ತರಿಸಿದ್ದಾರೆ.

ರಾಹುಲ್​ ಸದ್ಯ ಐಪಿಎಲ್​ 14ನೇ ಸೀಸನ್​ನಲ್ಲಿ ಪಂಜಾಬ್​ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯದಲ್ಲಿ ಸೋಲು ಕಂಡು ಒಂದು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kichcha Sudeep: ಸುದೀಪ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪತ್ನಿ ಪ್ರಿಯಾ; ಈಗ ಹೇಗಿದ್ದಾರೆ ಕಿಚ್ಚ?

KL Rahul Birthday : ಪ್ರಿಯತಮೆ ಆಥಿಯಾ ಶೆಟ್ಟಿ ಜೊತೆ ಕೆ.ಎಲ್. ರಾಹುಲ್ ಕಾಣಿಸಿಕೊಂಡ 5 ಅಪರೂಪದ ಫೋಟೋಗಳು

Follow Us
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಡೆಲಿವರಿ ಬಾಯ್ಸ್ ಕೆಲಸ ಗೌರವಿಸಿ; ಸ್ವಂತ ಅನುಭವ ಹಂಚಿಕೊಂಡ ಧರ್ಮ ಕೀರ್ತಿರಾಜ್
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ