AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ
ರಾಹುಲ್​ ಜತೆ ಆಥಿಯಾ
ರಾಜೇಶ್ ದುಗ್ಗುಮನೆ
|

Updated on: Apr 19, 2021 | 4:15 PM

Share

ನಟಿ ಆಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್​. ರಾಹುಲ್​ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಗುಸುಗುಸು ಸಾಮಾಜಿಕ ಜಾಲತಾಣದಲ್ಲಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಇದಕ್ಕೆ ಯಾರಿಂದಲೂ  ಉತ್ತರ ಸಿಕ್ಕಿಲ್ಲ. ಈಗ ರಾಹುಲ್​ ಜನ್ಮದಿನಕ್ಕೆ ಆಥಿಯಾ ಹಂಚಿಕೊಂಡ ಫೋಟೋ ಒಂದು ಸಾಕಷ್ಟು ವೈರಲ್​ ಆಗಿದೆ. ಇದರ ಜತೆಗೆ ಆಥಿಯಾ ತಂದೆ ಹಾಗೂ ನಟ ಸುನೀಲ್​ ಶೆಟ್ಟಿ ಇದಕ್ಕೆ ಹಾಕಿರುವ ಕಮೆಂಟ್​ ಕೂಡ ಎಲ್ಲರ ಗಮನಸೆಳೆಯುತ್ತಿದೆ. ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಈವರೆಗೆ ಅಧಿಕೃತ ಮಾಡಿಲ್ಲ.

ಏಪ್ರಿಲ್​ 18ರಂದು ರಾಹುಲ್​ ಜನ್ಮದಿನ. ಈ ವಿಶೇಷ ದಿನದಂದು ಆಥಿಯಾ ಶೆಟ್ಟಿ ರಾಹುಲ್​ ಜತೆ ಇರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕನ್ನಡಿ ಎದುರು ಇಬ್ಬರೂ ನಿಂತಿದ್ದಾರೆ. ಈ ಫೋಟೋ ನೋಡಿ ‘ನಿನಗೆ ಕೃತಜ್ಞನಾಗಿದ್ದೇನೆ. ಜನ್ಮದಿನದ ಶುಭಾಶಯಗಳು’ ಎಂದು ​ ಬರೆದುಕೊಂಡಿದ್ದಾರೆ. ಇದಕ್ಕೆ ಆಥಿಯಾ ತಂದೆ ಸುನೀಲ್​ ಶೆಟ್ಟಿ ಕಮೆಂಟ್​ ಮಾಡಿದ್ದು, ‘ನಿಜ’ ಎಂದಿದ್ದಾರೆ.

ಈ ಫೋಟೋ ನೋಡಿದ ಕ್ರಿಕೆಟಿಗರು ಕೂಡ ಸಾಕಷ್ಟು ಕಮೆಂಟ್​ ಮಾಡಿದ್ದಾರೆ. ಹಾರ್ದಿಕ್​ ಪಾಂಡ್ಯ ಮೈ ಕ್ಯೂಟೀಸ್​ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕೂಡ ಈ ಜೋಡಿ ಸಖತ್​ ಆಗಿದೆ ಎಂದು ಉತ್ತರಿಸಿದ್ದಾರೆ.

ರಾಹುಲ್​ ಸದ್ಯ ಐಪಿಎಲ್​ 14ನೇ ಸೀಸನ್​ನಲ್ಲಿ ಪಂಜಾಬ್​ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯದಲ್ಲಿ ಸೋಲು ಕಂಡು ಒಂದು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kichcha Sudeep: ಸುದೀಪ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪತ್ನಿ ಪ್ರಿಯಾ; ಈಗ ಹೇಗಿದ್ದಾರೆ ಕಿಚ್ಚ?

KL Rahul Birthday : ಪ್ರಿಯತಮೆ ಆಥಿಯಾ ಶೆಟ್ಟಿ ಜೊತೆ ಕೆ.ಎಲ್. ರಾಹುಲ್ ಕಾಣಿಸಿಕೊಂಡ 5 ಅಪರೂಪದ ಫೋಟೋಗಳು

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ