ಸನ್ನಿ ಲಿಯೋನ್​ ಸಂಸಾರಕ್ಕೆ 10 ವರ್ಷ; ದಾಂಪತ್ಯದ 5 ಸೀಕ್ರೆಟ್​ ತೆರೆದಿಟ್ಟ ಮಾದಕ ನಟಿ

Sunny Leone: 2011ರಲ್ಲಿ ಡೇನಿಯಲ್​ ವೆಬರ್​ ಮತ್ತು ಸನ್ನಿ ಲಿಯೋನ್​ ಬಾಳ ಬಂಧನಕ್ಕೆ ಒಳಗಾದರು. ಅಂದಿನಿಂದ ಇಂದಿನವರೆಗೆ ಈ ಜೋಡಿಯ ಮಧ್ಯೆ ಯಾವುದೇ ಕಿರಿಕ್​ ಆಗಿಲ್ಲ.

ಸನ್ನಿ ಲಿಯೋನ್​ ಸಂಸಾರಕ್ಕೆ 10 ವರ್ಷ; ದಾಂಪತ್ಯದ 5 ಸೀಕ್ರೆಟ್​ ತೆರೆದಿಟ್ಟ ಮಾದಕ ನಟಿ
ಡೇನಿಯಲ್ ವೆಬರ್ ಮತ್ತು ಸನ್ನಿ ಲಿಯೋನ್
Follow us
| Updated By: ರಾಜೇಶ್ ದುಗ್ಗುಮನೆ

Updated on: May 01, 2021 | 5:27 PM

ಮಾದಕ ನಟಿ ಸನ್ನಿ ಲಿಯೋನ್​ ಅವರು ಹಲವು ಕಾರಣಗಳಿಗಾಗಿ ಸುದ್ದಿ ಆಗುತ್ತಲೇ ಇರುತ್ತಾರೆ. ಪಡ್ಡೆಗಳ ನಿದ್ದೆ ಕದಿಯುವ ಈ ಮಾಜಿ ನೀಲಿ ತಾರೆ ಈಗ ಹಿಂದಿ ಸಿನಿಮಾದಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಹಾಯಾಗಿ ದಾಂಪತ್ಯ ಜೀವನ ನಡೆಸುತ್ತಿರುವ ಸನ್ನಿ ಲಿಯೋನ್​ ಹಾಗೂ ಅವರ ಪತಿ ಡೇನಿಯಲ್​ ವೆಬರ್​ಗೆ ಈಗ 10ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ.

2011ರಲ್ಲಿ ಡೇನಿಯಲ್​ ವೆಬರ್​ ಮತ್ತು ಸನ್ನಿ ಲಿಯೋನ್​ ಬಾಳ ಬಂಧನಕ್ಕೆ ಒಳಗಾದರು. ಅಂದಿನಿಂದ ಇಂದಿನವರೆಗೆ ಈ ಜೋಡಿ ಮಧ್ಯೆ ಯಾವುದೇ ಕಿರಿಕ್​ ಆಗಿಲ್ಲ. ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಚೆನ್ನಾಗಿ ಸಂಸಾರ ನಡೆಸುತ್ತಿದ್ದಾರೆ. ಎಂತೆಂಥ ಸೆಲೆಬ್ರಿಟಿಗಳ ದಾಂಪತ್ಯದಲ್ಲಿ ಬಿರುಕು ಮೂಡಿದರೂ ಸನ್ನಿ ಲಿಯೋನ್​-ಡೇನಿಯಲ್​ ವೆಬರ್​ ಮಾತ್ರ ಅದಕ್ಕೆ ಆಸ್ಪದ ನೀಡಿಲ್ಲ. ಹಾಗಾದರೆ ಅವರ ಸುಖಿ ದಾಂಪತ್ಯದ ಗುಟ್ಟೇನು? ಈ ಬಗ್ಗೆ ಸ್ವತಃ ಸನ್ನಿ ಲಿಯೋನ್​ ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಸನ್ನಿ ಲಿಯೋನ್​ ಮತ್ತು ಡೇನಿಯಲ್​ ವೆಬರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಅದರಲ್ಲಿ ತಮ್ಮ ದಾಂಪತ್ಯದ 5 ಸೀಕ್ರೆಟ್​ಗಳನ್ನು ಬಹಿರಂಗ ಪಡಿಸಿದ್ದಾರೆ. ಪತಿ-ಪತ್ನಿಯ ಬಂಧ ಸದಾ ಗಟ್ಟಿಯಾಗಿರಬೇಕು ಎಂದರೆ ಏನು ಮಾಡಬೇಕು ಎಂದು ಅವರು ಹೇಳಿದ್ದಾರೆ.

ಅವರ ಪ್ರಕಾರ, 1) ಸದಾ ಮಾತನಾಡುತ್ತ ಇರಬೇಕು. 2) ನೈಟ್​ ಡೇಟಿಂಗ್​ ಪ್ಲ್ಯಾನ್​ ಮಾಡಬೇಕು. 3) ಒಟ್ಟಿಗೆ ಅಡುಗೆ ಮಾಡಬೇಕು. 4) ಒಬ್ಬರನ್ನೊಬ್ಬರು ನಗಿಸಬೇಕು. 5) ಪರಸ್ಪರರಿಗೆ ಮೆಚ್ಚುಗೆ ಸೂಚಿಸಬೇಕು.

View this post on Instagram

A post shared by Sunny Leone (@sunnyleone)

2011ರ ಏ.9ರಂದು ಡೇನಿಯಲ್​ ವೇಬರ್​ ಮತ್ತು ಸನ್ನಿ ಲಿಯೋನ್​ ಮದುವೆಯಾದರು. 2017ರಲ್ಲಿ ನಿಶಾ ಎಂಬ ಹೆಣ್ಣುಮಗುವನ್ನು ಈ ಜೋಡಿ ದತ್ತು ಪಡೆದುಕೊಂಡಿತು. ನಂತರ ಬಾಡಿಗೆ ತಾಯ್ತನದ ಮೂಲಕ ಅವಳಿ ಗಂಡುಮಕ್ಕಳನ್ನು ಪಡೆದುಕೊಂಡರು. ಬಾಲಿವುಡ್​ನ ಅನೇಕ ಐಟಂ ಸಾಂಗ್​ಗಳಲ್ಲಿ ಕಾಣಿಸಿಕೊಂಡಿರುವ ಸನ್ನಿ ಲಿಯೋನ್​ ಈಗಲೂ ಬೇಡಿಕೆ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕನ್ನಡ ಹಾಡಿಗೆ ಮತ್ತೆ ಸೊಂಟ ಬಳುಕಿಸೋಕೆ ಬಂದ ಸನ್ನಿ ಲಿಯೋನ್​..

Sunny Leone : ಮೂರನೆ ಚಿತ್ರದ ಶೂಟಿಂಗ್​ಗೆ ನಟಿ ಸನ್ನಿ ಲಿಯೋನ್ ಕೇರಳದಲ್ಲಿ…!

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ