AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶಿವಾಜಿ’ ಸ್ಟೈಲ್​ನಲ್ಲಿ ರಜನಿಕಾಂತ್​ನ ಸ್ವಾಗತಿಸಿದ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ

ರಜನಿಕಾಂತ್ ಅವರು ಪಂಚೆ ಹಾಗೂ ಬಿಳಿ ಬಣ್ಣದ ಶರ್ಟ್ ಹಾಕಿ ಆಗಮಿಸಿದ್ದಾರೆ. ಅವರನ್ನು ಮಲೇಷ್ಯಾ ಪ್ರಧಾನಿ ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಪ್ರೀತಿಯಿಂದ ಅಪ್ಪುಗೆ ಕೊಟ್ಟಿದ್ದಾರೆ. ಬಳಿಕ ಇಬ್ಬರೂ ಕುಳಿತು ಹಲವು ಹೊತ್ತು ಮಾತನಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಶೇರ್ ಮಾಡಿಕೊಳ್ಳುತ್ತಿದ್ದಾರೆ.

‘ಶಿವಾಜಿ’ ಸ್ಟೈಲ್​ನಲ್ಲಿ ರಜನಿಕಾಂತ್​ನ ಸ್ವಾಗತಿಸಿದ ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ
ರಾಜೇಶ್ ದುಗ್ಗುಮನೆ
|

Updated on:Sep 12, 2023 | 11:46 AM

Share

ರಜನಿಕಾಂತ್ (Rajinikanth) ಅವರನ್ನು ಆರಾಧಿಸುವವರು ವಿಶ್ವಾದ್ಯಂತ ಇದ್ದಾರೆ. ಎಲ್ಲೇ ಹೋದರು ಅವರನ್ನು ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ವಿದೇಶಕ್ಕೆ ತೆರಳಿದರೆ ಅವರನ್ನು ಅನೇಕರು ತಮ್ಮದೇ ಶೈಲಿಯಲ್ಲಿ ಸ್ವಾಗತಿಸುತ್ತಾರೆ. ಈಗ ಸೂಪರ್ ಸ್ಟಾರ್ ರಜನಿಕಾಂತ್ ಅವರು ಮಲೇಷ್ಯಾಗೆ ಭೇಟಿ ನೀಡಿದ್ದಾರೆ. ಈ ವೇಳೆ ಅಲ್ಲಿನ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ‘ಶಿವಾಜಿ’ ಸಿನಿಮಾ ಸ್ಟೈಲ್​ನಲ್ಲಿ ರಜನಿಕಾಂತ್ ಅವರನ್ನು ಸ್ವಾಗತಿಸಿದ್ದಾರೆ. ಸದ್ಯ ಈ ವಿಡಿಯೋ ಅಭಿಮಾನಿಗಳ ಪೇಜ್​ನಲ್ಲಿ ವೈರಲ್ ಆಗಿದೆ.

ರಜನಿಕಾಂತ್ ನಟನೆಯ ‘ಶಿವಾಜಿ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ರಜನಿ ಬಾಲ್ಡ್ ಲುಕ್​ನಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಮಾಡಿದ್ದ ಒಂದು ಸ್ಟೈಲ್ ಗಮನ ಸೆಳೆದಿತ್ತು. ಬೋಳು ತಲೆಯ ಮೇಲೆ ರಜನಿ ತಮ್ಮ ಬೆರಳನ್ನು ಆಡಿಸುವ ರೀತಿಯಲ್ಲಿ ಅವರ ಸ್ಟೈಲ್ ಇತ್ತು. ಮಲೇಷ್ಯಾ ಪ್ರಧಾನಿ ಕೂಡ ಇದೇ ರೀತಿಯಲ್ಲಿ ಸ್ಟೈಲ್ ಮಾಡಿದ್ದಾರೆ.

ರಜನಿಕಾಂತ್ ಅವರು ಪಂಚೆ ಹಾಗೂ ಬಿಳಿ ಬಣ್ಣದ ಶರ್ಟ್ ಹಾಕಿ ಆಗಮಿಸಿದ್ದಾರೆ. ಅವರನ್ನು ಮಲೇಷ್ಯಾ ಪ್ರಧಾನಿ ಪ್ರೀತಿಯಿಂದ ಸ್ವಾಗತಿಸಿದ್ದಾರೆ. ಪ್ರೀತಿಯಿಂದ ಅಪ್ಪುಗೆ ಕೊಟ್ಟಿದ್ದಾರೆ. ಬಳಿಕ ಇಬ್ಬರೂ ಕುಳಿತು ಹಲವು ಹೊತ್ತು ಮಾತನಾಡಿದ್ದಾರೆ. ಈ ಫೋಟೋಗಳನ್ನು ಅಭಿಮಾನಿಗಳು ಶೇರ್ ಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: ‘ಜೈಲರ್’ ಬಳಿಕ ದೊಡ್ಡ ಘೋಷಣೆ ಮಾಡಿದ ರಜನಿಕಾಂತ್​; ಲೋಕೇಶ್​ ಕನಗರಾಜ್​ ಜತೆ ಸಿನಿಮಾ

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಗೆಲುವಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬರೋಬ್ಬರಿ 600 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಈ ಚಿತ್ರದ ಯಶಸ್ಸಿನ ಬೆನ್ನಲ್ಲೇ ಸನ್ ಪಿಕ್ಚರ್ಸ್​ ರಜನಿಕಾಂತ್ ಜೊತೆ ಹೊಸ ಸಿನಿಮಾ ಘೋಷಿಸಿದೆ. ಈ ಚಿತ್ರವನ್ನು ಲೋಕೇಶ್ ಕನಗರಾಜ್ ನಿರ್ದೇಶನ ಮಾಡಲಿದ್ದಾರೆ. ಇದು ರಜನಿಕಾಂತ್ ಅವರು 171ನೇ ಸಿನಿಮಾ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ ‘ತಲೈವರ್ 171’ ಎಂದು ಶೀರ್ಷಿಕೆ ಇಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:46 am, Tue, 12 September 23

ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?