AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಜೈಲರ್’ ಸಿನಿಮಾಕ್ಕೆ ಮೊದಲ ಆಯ್ಕೆ ರಜನೀಕಾಂತ್ ಅಲ್ಲ: ಮತ್ಯಾರು?

Rajinikanth: ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಸೂಪರ್-ಡೂಪರ್ ಹಿಟ್ ಆಗಿದೆ. ಆದರೆ ಸಿನಿಮಾದ ನಿರ್ದೇಶಕ ನೆಲ್ಸನ್, 'ಜೈಲರ್' ಕತೆಯನ್ನು ಮೊದಲು ಹೇಳಿದ್ದು ಬೇರೊಬ್ಬ ಸೂಪರ್ ಸ್ಟಾರ್​ಗೆ.

'ಜೈಲರ್' ಸಿನಿಮಾಕ್ಕೆ ಮೊದಲ ಆಯ್ಕೆ ರಜನೀಕಾಂತ್ ಅಲ್ಲ: ಮತ್ಯಾರು?
ಜೈಲರ್
ಮಂಜುನಾಥ ಸಿ.
|

Updated on:Sep 23, 2023 | 11:53 PM

Share

ತಮಿಳಿನ ಪ್ಯಾನ್ ಇಂಡಿಯಾ ಸಿನಿಮಾ ‘ಜೈಲರ್’ ಸೂಪರ್ ಡೂಪರ್ ಹಿಟ್ ಆಗಿದೆ. ಸೂಪರ್ ಸ್ಟಾರ್ ರಜನೀಕಾಂತ್ ಅವರ ವೃತ್ತಿ ಜೀವನದಲ್ಲಿಯೇ ಅತ್ಯಂತ ಹೆಚ್ಚು ಹಣ ಗಳಿಸಿದ ಸಿನಿಮಾ ಎಂಬ ಖ್ಯಾತಿಗೆ ಕಾರಣವಾಗಿದೆ. ಸಿನಿಮಾದ ಹಾಡುಗಳು, ಹಿನ್ನೆಲೆ ಸಂಗೀತವಂತೂ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ರಜನೀಕಾಂತ್​ಗಾಗಿಯೇ ರಚಿಸಿ, ಸಂಗೀತ ಸಂಯೋಜಿಸಿರುವ ಟೈಗರ್ ಕಾ ಹುಕುಂ ಹಾಡಂತೂ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿಬಿಟ್ಟಿದೆ. ನಿಜ ಕತೆ ಏನೆಂದರೆ ‘ಜೈಲರ್’ ಸಿನಿಮಾದ ಕತೆ ಬರೆದಿದ್ದು ಬೇರೊಬ್ಬ ನಟನಿಗಾಗಿ, ಆದರೆ ಆ ನಟ ಒಪ್ಪಲಿಲ್ಲವಾದ್ದರಿಂದ ಕತೆ ರಜನೀಕಾಂತ್ ಬಳಿ ಬಂತು.

‘ಜೈಲರ್’ ಸಿನಿಮಾನಲ್ಲಿ ರಜನೀಕಾಂತ್​ರನ್ನು ಭಿನ್ನ ರೀತಿಯಲ್ಲಿ ತೋರಿಸಲಾಗಿದೆ. ನಿವೃತ್ತ ಜೈಲರ್, ಪ್ರತಿದಿನ ಮಾರುಕಟ್ಟೆಗೆ ಹೋಗಿ ತರಕಾರಿ ತರುವವ, ಮನೆಯಲ್ಲಿ ಪತ್ನಿ, ಸೊಸೆ, ಮಗ, ಮೊಮ್ಮಗನ ಆಜ್ಞೆ ಪಾಲಿಸುವವ, ಜೋರಾಗಿ ಬರುವ ಗಾಡಿಗಳನ್ನು ನೋಡಿ ಭಯ ಪಡುವವ. ಫೈಟ್​ಗಳನ್ನು ಮಾಡದೆ, ನೂರಾರು ಗೂಂಡಾಗಳನ್ನು ಸೆದೆಬಡಿಯದೇ ಗೆಳೆಯರನ್ನು ಬಳಸಿಕೊಂಡು ಬುದ್ಧಿವಂತಿಕೆಯಿಂದ ಯುದ್ಧ ಗೆಲ್ಲುವ ಪಾತ್ರ ಅವರದ್ದು, ಅವರ ವಯಸ್ಸು ಗಮನದಲ್ಲಿಟ್ಟುಕೊಂಡು ಈ ರೀತಿಯಾಗಿ ಪಾತ್ರವನ್ನು ಡಿಸೈನ್ ಮಾಡಲಾಗಿದೆ. ಆದರೆ ಇದಕ್ಕೆ ಮೊದಲು ಸಿನಿಮಾದ ಕತೆ ಹೀಗೆ ಇರಲಿಲ್ಲ.

ಇದನ್ನೂ ಓದಿ: ರಜನೀಕಾಂತ್ ಹೊಸ ಸಿನಿಮಾದಲ್ಲಿ ಹಲವು ತಾರೆಯರು, ಈ ಬಾರಿ ಯುವಕರಿಗೆ ಮಣೆ

ಹೌದು, ‘ಜೈಲರ್’ ಸಿನಿಮಾದ ಕತೆ ಮೊದಲು ಆಫರ್ ಮಾಡಲಾಗಿದ್ದು ತೆಲುಗಿನ ಮೆಗಾಸ್ಟಾರ್ ನಟ ಚಿರಂಜೀವಿ ಅವರಿಗೆ. ಸಿನಿಮಾದಲ್ಲಿ ಹಾಡುಗಳಿಲ್ಲ, ಕಮರ್ಷಿಯಲ್ ಸಿನಿಮಾದ ಸಿದ್ಧ ಸೂತ್ರಕ್ಕೆ ಹೊಂದಿಕೆ ಆಗುವ ಕೆಲವು ಸೀನ್​ಗಳು, ಸನ್ನಿವೇಶಗಳು ಇಲ್ಲ. ಅಲ್ಲದೆ ತಾನು ವಯಸ್ಸಾದ, ನಿಶ್ಯಕ್ತನ ರೀತಿಯ ಪಾತ್ರ ಮಾಡುವುದು ಸರಿಯಲ್ಲ ಎಂಬ ಕಾರಣಕ್ಕೆ ಚಿರಂಜೀವಿ ಆ ಸಿನಿಮಾವನ್ನು ಒಪ್ಪಿಕೊಳ್ಳಲಿಲ್ಲ. ಅಲ್ಲದೆ ಅದೇ ಸಮಯದಲ್ಲಿ ಅವರು ತಮಿಳಿನ ‘ವೇದಾಲಂ’ ಸಿನಿಮಾದ ರೀಮೇಕ್ ‘ಭೋಲಾ ಶಂಕರ್’ ಒಪ್ಪಿಕೊಂಡಿದ್ದರು. ಹಾಗಾಗಿ ನೆಲ್ಸನ್, ಕತೆಯನ್ನು ರಜನೀಕಾಂತ್​ರ ಇಮೇಜು, ವಯಸ್ಸಿಗೆ ಅನುಗುಣವಾಗಿ ಬದಲಾಯಿಸಿ, ರಜನೀಕಾಂತ್​ ಅವರನ್ನು ಹಾಕಿಕೊಂಡು ಸಿನಿಮಾ ಮಾಡಿದರು. ಸಿನಿಮಾ ಸೂಪರ್-ಡೂಪರ್ ಹಿಟ್ ಆಯ್ತು.

‘ಜೈಲರ್’ ಸಿನಿಮಾವನ್ನು ನೆಲ್ಸನ್ ನಿರ್ದೇಶನ ಮಾಡಿದ್ದಾರೆ. ಸಿನಿಮಾನಲ್ಲಿ ರಜನೀಕಾಂತ್ ಜೊತೆಗೆ ಶಿವರಾಜ್ ಕುಮಾರ್, ಮಲಯಾಳಂನ ಮೋಹನ್​ಲಾಲ್, ಹಿಂದಿಯ ಜಾಕಿ ಶ್ರಾಫ್, ತೆಲುಗಿನ ಸುನಿಲ್ ಅವರುಗಳು ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ತಮನ್ನಾ ಐಟಂ ಹಾಡಿನಲ್ಲಿ ಕಾಣಿಸಿಕೊಂಡರೆ, ರಮ್ಯಾ ಕೃಷ್ಣ ರಜನೀಕಾಂತ್ ಪತ್ನಿ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:52 pm, Sat, 23 September 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ