AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ರಜನಿಕಾಂತ್​ಗೆ ಆದಾಯ ತೆರಿಗೆ ಇಲಾಖೆ ಮೆಚ್ಚುಗೆ; ತಂದೆ ಪರವಾಗಿ ಪ್ರಶಸ್ತಿ ಪಡೆದ ಪುತ್ರಿ ಐಶ್ವರ್ಯಾ

Aishwaryaa Rajinikanth: ತೆರಿಗೆ ಪಾವತಿಸುವ ವಿಚಾರದಲ್ಲಿ ರಜನಿಕಾಂತ್ ಪ್ರಶಸ್ತಿ ಪಡೆದಿದ್ದಾರೆ. ಅವರಿಗೆ ಗೌರವ ಸಲ್ಲಿಸಿದ್ದಕ್ಕಾಗಿ ತಮಿಳುನಾಡು ಹಾಗೂ ಪಾಂಡಿಚೆರಿ ಆದಾಯ ತೆರಿಗೆ ಇಲಾಖೆಗೆ ಐಶ್ವರ್ಯಾ ರಜನಿಕಾಂತ್​ ಧನ್ಯವಾದ ತಿಳಿಸಿದ್ದಾರೆ.

Rajinikanth: ರಜನಿಕಾಂತ್​ಗೆ ಆದಾಯ ತೆರಿಗೆ ಇಲಾಖೆ ಮೆಚ್ಚುಗೆ; ತಂದೆ ಪರವಾಗಿ ಪ್ರಶಸ್ತಿ ಪಡೆದ ಪುತ್ರಿ ಐಶ್ವರ್ಯಾ
ರಜನಿಕಾಂತ್, ಐಶ್ವರ್ಯಾ ರಜನಿಕಾಂತ್,
TV9 Web
| Edited By: |

Updated on: Jul 25, 2022 | 12:03 PM

Share

ನಟ ರಜನಿಕಾಂತ್​ (Rajinikanth) ಅವರು ಚಿತ್ರರಂಗದಲ್ಲಿ ಈಗಲೂ ಸಖತ್ ಬೇಡಿಕೆ ಹೊಂದಿದ್ದಾರೆ. ತಮಿಳು ನಾಡಿನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟ ಎಂಬ ಖ್ಯಾತಿ ಅವರಿಗೆ ಇದೆ. ಹಣ ಗಳಿಸುವುದು ಮಾತ್ರವಲ್ಲ, ತೆರಿಗೆ ಪಾವತಿಸುವುದರಲ್ಲೂ ಅವರೇ ನಂಬರ್​ ಒನ್​. ಹೌದು, ತಮಿಳುನಾಡಿನಲ್ಲಿ ಅತಿ ಹೆಚ್ಚು ಟ್ಯಾಕ್ಸ್​ ಕಟ್ಟಿದ ವ್ಯಕ್ತಿ ರಜನಿಕಾಂತ್ ಎಂದು ಆದಾಯ ತೆರಿಗೆ ಇಲಾಖೆ (Income Tax Department) ಹೇಳಿದೆ. ಸೂಕ್ತ ಸಮಯದಲ್ಲಿ ತೆರಿಗೆ ಪಾವತಿಸಿದ ಅವರಿಗೆ ಇಲಾಖೆ ಕಡೆಯಿಂದ ಮೆಚ್ಚುಗೆ ಸೂಚಿಸಲಾಗಿದೆ. ರಜನಿಕಾಂತ್​ ಪರವಾಗಿ ಅವರ ಪುತ್ರಿ ಐಶ್ವರ್ಯಾ (Aishwaryaa Rajinikanth) ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಪ್ರಶಸ್ತಿ ಪಡೆದ ಬಳಿಕ ಆ ಫೋಟೋವನ್ನು ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವರಿಗೆ ಅಭಿಮಾನಿಗಳು ಕಮೆಂಟ್​ಗಳ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಜುಲೈ 24ರಂದು ಚೆನ್ನೈನಲ್ಲಿ ‘ಆದಾಯ ತೆರಿಗೆ ದಿನ’ ಆಚರಿಸಲಾಯಿತು. ಈ ವೇಳೆ ಅತಿ ಹೆಚ್ಚು ತೆರಿಗೆ ಪಾವತಿಸುವ ಮತ್ತು ಸೂಕ್ತ ಸಮಯದಲ್ಲಿ ತೆರಿಗೆ ಪಾವತಿಸುವ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲಾಯಿತು. ತೆಲಂಗಾಣ ಗವರ್ನರ್​ ತಮಿಳಿಸಾಯಿ ಸುಂದರರಾಜನ್​ ಅವರು ಪ್ರಶಸ್ತಿ ನೀಡಿದರು. ‘ಸೂಪರ್​ ಸ್ಟಾರ್​’ ರಜನಿಕಾಂತ್​ ಅವರ ಪರವಾಗಿ ಪ್ರಶಸ್ತಿ ಪಡೆದ ಐಶ್ವರ್ಯಾ ಅವರು, ‘ಅತಿ ಹೆಚ್ಚು ತೆರಿಗೆ ಪಾವತಿಸುವ ತಂದೆಯ ಹೆಮ್ಮೆಯ ಮಗಳು ನಾನು. ಅಪ್ಪನಿಗೆ ಗೌರವ ಸಲ್ಲಿಸಿದ್ದಕ್ಕಾಗಿ ತಮಿಳುನಾಡು ಹಾಗೂ ಪಾಂಡಿಚೆರಿ ಆದಾಯ ತೆರಿಗೆ ಇಲಾಖೆಗೆ ಧನ್ಯವಾದಗಳು’ ಎಂದು ಪೋಸ್ಟ್​ ಮಾಡಿದ್ದಾರೆ.

ರಜನಿಕಾಂತ್​ ಅವರಿಗೆ ಈಗ 71 ವರ್ಷ ವಯಸ್ಸು. ಈಗಲೂ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅವರು ನಟಿಸಿದ ‘ಅಣ್ಣಾತೆ’ ಸಿನಿಮಾ 2021ರಲ್ಲಿ ತೆರೆಕಂಡು ಯಶಸ್ಸು ಗಳಿಸಿತು. ಈಗ ಅವರು ‘ಜೈಲರ್​’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ‘ಬೀಸ್ಟ್​’ ಖ್ಯಾತಿಯ ನೆಲ್ಸನ್​ ದಿಲೀಪ್​ ಕುಮಾರ್​ ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ
Image
Jailer: ಶಿವಣ್ಣ-ರಜನಿಕಾಂತ್​ ಸಿನಿಮಾಗೆ ‘ಜೈಲರ್​’ ಶೀರ್ಷಿಕೆ: ಅಭಿಮಾನಿಗಳಲ್ಲಿ ಕ್ರೇಜ್​ ಹೆಚ್ಚಿಸಿದ ಪೋಸ್ಟರ್​
Image
ರಜನಿಕಾಂತ್​ಗೆ ನಾಯಕಿ ಆದ ಐಶ್ವರ್ಯಾ ರೈ; ಹೊಸ ಸಿನಿಮಾ ಬಗ್ಗೆ ಇಲ್ಲಿದೆ ಮಾಹಿತಿ
Image
ಡಿವೋರ್ಸ್​ ಬಳಿಕ ರಜನಿ ಪುತ್ರಿಗೆ ಮತ್ತೆ ಕಂಟಕ; ಆಸ್ಪತ್ರೆಗೆ ದಾಖಲಾದ ಐಶ್ವರ್ಯಾ ರಜನಿಕಾಂತ್​
Image
ಕೋಟ್ಯಂತರ ರೂ. ಸಂಭಾವನೆ ಪಡೆಯುವ ರಜನಿಕಾಂತ್​ ಎಷ್ಟು ಆಸ್ತಿ ಹೊಂದಿದ್ದಾರೆ? ಇಲ್ಲಿದೆ ವಿವರ..

ಅಕ್ಷಯ್​ ಕುಮಾರ್​​ಗೂ ಆದಾಯ ತೆರಿಗೆ ಇಲಾಖೆ ಮೆಚ್ಚುಗೆ:

ಬಾಲಿವುಡ್​ನಲ್ಲಿ ಅತಿ ಹೆಚ್ಚು ಟ್ಯಾಕ್ಸ್​ ಪಾವತಿಸುವ ಸೆಲೆಬ್ರಿಟಿ ಎಂಬ ಖ್ಯಾತಿಗೆ ಅಕ್ಷಯ್​ ಕುಮಾರ್ ಅವರು ಪಾತ್ರರಾಗಿದ್ದಾರೆ. ಇದಕ್ಕಾಗಿ ಆದಾಯ ತೆರಿಗೆ ಇಲಾಖೆಯಿಂದ ಮೆಚ್ಚುಗೆ ಪತ್ರ ನೀಡಲಾಗಿದೆ. ಇಂಗ್ಲೆಂಡ್​ಗೆ ತೆರಳಿರುವ ಅಕ್ಷಯ್​ ಕುಮಾರ್ ಶೂಟಿಂಗ್​ನಲ್ಲಿ ಬ್ಯುಸಿ ಇರುವ ಕಾರಣ ಅವರ ತಂಡದವರು ಈ ಮೆಚ್ಚುಗೆ ಪತ್ರವನ್ನು ಸ್ವೀಕರಿಸಿದ್ದಾರೆ. ಅಕ್ಕಿ ಫ್ಯಾನ್ಸ್ ವಲಯದಲ್ಲಿ ಇದರ ಫೋಟೋ ವೈರಲ್​ ಆಗುತ್ತಿದೆ.

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ