AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್​; 67ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಲೈವಾ

Dadasaheb Phalke Award: ನಟ ರಜನಿಕಾಂತ್​ ಪಾಲಿಗೆ ಇಂದು (ಅ.25) ಮಹತ್ವದ ದಿನ. ದೆಹಲಿಯ ವಿಜ್ಞಾನ ಭವನದಲ್ಲಿ ಅವರು ‘ದಾದಾ ಸಾಹೇಬ್​ ಫಾಲ್ಕೆ’ ಪ್ರಶಸ್ತಿ ಸ್ವೀಕರಿಸಿದ್ದಾರೆ.

Rajinikanth: ದಾದಾಸಾಹೇಬ್​ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ರಜನಿಕಾಂತ್​; 67ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ತಲೈವಾ
67ನೇ ರಾಷ್ಟ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಜನಿಕಾಂತ್, ಧನುಶ್
TV9 Web
| Edited By: |

Updated on:Oct 25, 2021 | 1:04 PM

Share

ಭಾರತೀಯ ಚಿತ್ರರಂಗದ ‘ಸೂಪರ್​ ಸ್ಟಾರ್​’ ರಜನಿಕಾಂತ್ (Rajinikanth)​ ಅವರು ಇಂದು (ಅ.25) ಪ್ರತಿಷ್ಠಿತ ‘ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿ’ (Dadasaheb Phalke Award) ಸ್ವೀಕರಿಸಿದ್ದಾರೆ. ದೆಹಲಿಯ ವಿಜ್ಞಾನ ಭವನದಲ್ಲಿ ಈ ಸಮಾರಂಭ ನಡೆದಿದೆ. ಸಿನಿಮಾ ಕ್ಷೇತ್ರದಲ್ಲಿ ಸಾಧನೆಗಾಗಿ ರಜನಿಕಾಂತ್​ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ. 67ನೇ ರಾಷ್ಟ್ರ ಪ್ರಶಸ್ತಿ ಸಮಾರಂಭ (67th National Film Awards) ಇದಾಗಿದ್ದು, 2019ರಲ್ಲಿ ತೆರೆಕಂಡ ಸಿನಿಮಾಗಳಿಗೆ ಪ್ರಶಸ್ತಿ ನೀಡಲಾಗಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಈ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ಮಲಯಾಳಂ ಸಿನಿಮಾ ‘ಮರಕ್ಕರ್​: ಲಯನ್​ ಆಫ್​ ದಿ ಅರೇಬಿಯನ್​ ಸೀ’ ಅತ್ಯುತ್ತಮ ಚಿತ್ರ ಪ್ರಶಸ್ತಿ ಪಡೆದಿದೆ. ‘ಭೋಂಸ್ಲೆ’ ಚಿತ್ರಕ್ಕಾಗಿ ಮನೋಜ್​ ಬಾಜಪೇಯಿ ಹಾಗೂ ‘ಅಸುರನ್​’ ಚಿತ್ರಕ್ಕಾಗಿ ಧನುಶ್​ ಅವರು ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ್ದಾರೆ. ‘ಪಂಗಾ’ ಮತ್ತು ‘ಮಣಿಕರ್ಣಿಕಾ’ ಚಿತ್ರಗಳಿಗಾಗಿ ಕಂಗನಾ ರಣಾವತ್​ ಅವರಿಗೆ ‘ಅತ್ಯುತ್ತಮ ನಟಿ’ ಪ್ರಶಸ್ತಿ ಸಿಕ್ಕಿದೆ.

ಕನ್ನಡದ ಅತ್ಯುತ್ತಮ ಸಿನಿಮಾ ಎಂಬ ಖ್ಯಾತಿಗೆ ಈ ವರ್ಷ ‘ಅಕ್ಷಿ’ ಚಿತ್ರ ಪಾತ್ರವಾಗಿದೆ. ಇದಕ್ಕೆ ನಿರ್ದೇಶನ ಮಾಡಿರುವುದು ಹೊಸ ನಿರ್ದೇಶಕ ಮನೋಜ್​ ಕುಮಾರ್. ಹಲವಾರು ವರ್ಷಗಳಿಂದ ಚಿತ್ರರಂಗದಲ್ಲಿ ತೊಡಗಿಕೊಂಡಿರುವ​ ಅವರಿಗೆ ನಿರ್ದೇಶಕನಾಗಿ ‘ಅಕ್ಷಿ’ ಮೊದಲ ಸಿನಿಮಾ. ಚೊಚ್ಚಲ ಪ್ರಯತ್ನದಲ್ಲೇ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದು ತಂತಸದ ವಿಚಾರ.

ಪ್ರಶಸ್ತಿ ವಿಜೇತರ ಪಟ್ಟಿ

ಅತ್ಯುತ್ತಮ ಸಿನಿಮಾ: ಮರಕ್ಕರ್: ಲೈನ್​ ಆಫ್​ ದಿ ಅರೇಬಿಯನ್​ ಸೀ

ಅತ್ಯುತ್ತಮ ನಟಿ: ಕಂಗನಾ ರಣಾವತ್​ (ಮಣಿಕರ್ಣಿಕಾ, ಪಂಗಾ)

ಅತ್ಯುತ್ತಮ ನಟ: ಧನುಷ್​ (ಅಸುರನ್​) ಮನೋಜ್​ ಬಾಜಪಯ್​ (ಭೋನ್ಸ್​ಲೆ)

ಅತ್ಯುತ್ತಮ ಚಿತ್ರ ಕನ್ನಡ ಸಿನಿಮಾ: ಅಕ್ಷಿ

ಅತ್ಯುತ್ತಮ ಚಿತ್ರ ಸಾಹಸ ನಿರ್ದೇಶನ: ವಿಕ್ರಂ ಮೋರ್​ (ಅವನೇ ಶ್ರೀಮನ್ನಾರಾಯಣ)

ಅತ್ಯುತ್ತಮ ನಿರ್ದೇಶನ: ಬಹತಾರ್​ ಹುರೈನ್​

ಅತ್ಯುತ್ತಮ ಪೋಷಕ ನಟ: ವಿಜಯ್​​ ಸೇತುಪತಿ (ಸೂಪರ್​ ಡಿಲಕ್ಸ್​)

ಅತ್ಯುತ್ತಮ ಪೋಷಕ ನಟಿ: ಪಲ್ಲವಿ ಜೋಶಿ (ದಿ ತಾಷ್ಕೆಂಟ್​ ಫೈಲ್ಸ್​)

ಅತ್ಯುತ್ತಮ ನೃತ್ಯ ನಿರ್ದೇಶನ: ಮಹರ್ಷಿ (ತೆಲುಗು)

ಅತ್ಯುತ್ತಮ ಜನಪ್ರಿಯ ಮನರಂಜನೆ ಸಿನಿಮಾ: ಮಹರ್ಷಿ (ತೆಲುಗು)

ಅತ್ಯುತ್ತಮ ಗೀತ ಸಾಹಿತ್ಯ: ಪ್ರಭಾವರ್ಮಾ-ಕೊಲಾಂಬಿ (ಮಲಯಾಳಂ)

ಅತ್ಯುತ್ತಮ ಸಂಗೀತ ನಿರ್ದೇಶಕ: ಡಿ. ಇಮ್ಮಾನ್​-ವಿಶ್ವಾಸಮ್​(ತಮಿಳು)

ಅತ್ಯುತ್ತಮ ಸಂಕಲನ: ಜೆರ್ಸಿ (ತೆಲುಗು)

ಅತ್ಯುತ್ತಮ ಮೇಕಪ್​ ಆರ್ಟಿಸ್ಟ್​​: ರಂಜಿತ್​-ಹೆಲನ್​ (ಮಲಯಾಳಂ)

ಚೊಚ್ಚಲ ಅತ್ಯುತ್ತಮ ನಿರ್ದೇಶನ: ಮತ್ತುಕುಟ್ಟಿ (ಹೆಲನ್​ -ಮಲಯಾಳಂ)

ಅತ್ಯುತ್ತಮ ಮಕ್ಕಳ ಚಿತ್ರ: ಕಸ್ತೂರಿ (ಹಿಂದಿ)

ಸಾಮಾಜಿಕ ಸಮಸ್ಯೆಗಳ ಕುರಿತ ಅತ್ಯುತ್ತಮ ಚಿತ್ರ: ಆನಂದಿ ಗೋಪಾಲ್​ (ಮರಾಠಿ)

ಇದನ್ನೂ ಓದಿ:

National Film Awards 2019: ಅವನೇ ಶ್ರೀಮನ್ನಾರಾಯಣ ಚಿತ್ರಕ್ಕೆ ಒಲಿದ ರಾಷ್ಟ್ರ ಪ್ರಶಸ್ತಿ

‘ನಿನ್ನ ಸನಿಹಕೆ’ ಚಿತ್ರ ನೋಡಲಿರುವ ರಜನಿಕಾಂತ್​; ಧನ್ಯಾ ರಾಮ್​ಕುಮಾರ್​-ಸೂರಜ್​ಗೆ ತಲೈವಾ ಬೆಂಬಲ

ಎವರ್​ಗ್ರೀನ್​ ಹೀರೋ ರಜನಿಕಾಂತ್​ಗೆ ನಾಯಕಿಯಾಗಲಿದ್ದಾರೆ ಯಂಗ್​ ಬ್ಯೂಟಿ ದೀಪಿಕಾ ಪಡುಕೋಣೆ

Published On - 12:49 pm, Mon, 25 October 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ