AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ನೆಲಕಚ್ಚಿದ್ದ ಈ ಚಿತ್ರ, ಜಪಾನ್​ನಲ್ಲಿ ಸೂಪರ್ ಹಿಟ್!

Rajinikanth: ಸೂಪರ್​ಸ್ಟಾರ್ ರಜನಿಕಾಂತ್ ಅವರ ಚಿತ್ರ ದೂರದ ಜಪಾನ್​ನಲ್ಲೂ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಇದನ್ನು ಸಂತಸದಿಂದ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಭಾರತದಲ್ಲಿ ನೆಲಕಚ್ಚಿದ್ದ ಈ ಚಿತ್ರ, ಜಪಾನ್​ನಲ್ಲಿ ಸೂಪರ್ ಹಿಟ್!
ದರ್ಬಾರ್ ಚಿತ್ರದಲ್ಲಿ ನಯನತಾರಾ, ರಜನಿಕಾಂತ್
TV9 Web
| Edited By: |

Updated on:Jul 20, 2021 | 5:45 PM

Share

ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಭಾರತದಲ್ಲಿ ಸಿಕ್ಕಾಪಟ್ಟೆ ಅಭಿಮಾನಿಗಳಿರುವುದು ವಿಶೇಷವಲ್ಲ ಬಿಡಿ. ಆದರೆ ತಮಿಳಿನ ಈ ಸೂಪರ್​ಸ್ಟಾರ್​ಗೆ ಜಪಾನ್​ನಲ್ಲಿ ಭರ್ಜರಿ ಫ್ಯಾನ್ಸ್​ಗಳಿರುವುದು ನಿಮಗೆ ಗೊತ್ತೇ? ಹೌದು. ರಜನಿಗೆ ಜಪಾನ್​ನಲ್ಲೂ ಸಿಕ್ಕಾಪಟ್ಟೆ ಅಭಿಮಾನಿಗಳಿದ್ದಾರೆ. ಎಷ್ಟೋ ಜನ ಅಭಿಮಾನಿಗಳು ರಜನಿ ಅವರ ಚಿತ್ರ ತಮಿಳುನಾಡಿನಲ್ಲಿ ಬಿಡುಗಡೆಯಾಗುವುದನ್ನು ನೋಡುವುದಕ್ಕಾಗಿಯೇ ಬಂದಿದ್ದು ಈ ಹಿಂದೆ ಬಹಳ ಸುದ್ದಿಯಾಗಿತ್ತು. ಇಂತಿಪ್ಪ ರಜನಿ ಪ್ರಭೆ, ಜಪಾನ್​ನಲ್ಲಿ ಪ್ರತೀ ಬಾರಿಯೂ ಅದ್ಭುತ ಕೆಲಸ ಮಾಡುತ್ತದೆ. ಉದಾಹರಣೆಗೆ ಈ ಹಿಂದಿನ ಮುತ್ತು, ಪಡಿಯಪ್ಪ, ಶಿವಾಜಿ ಸೇರಿದಂತೆ ಅನೇಕ ಚಿತ್ರಗಳು ಜಪಾನ್​ನಲ್ಲಿ ಭರ್ಜರಿ ಪ್ರದರ್ಶನ ಕಂಡಿದ್ದವು. ಈಗ ದರ್ಬಾರ್ ಚಿತ್ರದ ಸರದಿ.

ಕರೊನಾ ಕಾರಣದಿಂದಾಗಿ ದರ್ಬಾರ್ ಚಿತ್ರ ಜಪಾನಿ ಭಾಷೆಗೆ ಡಬ್ ಆಗಿ ಇತ್ತೀಚೆಗಷ್ಟೇ ಅಲ್ಲಿ ಬಿಡುಗಡೆಯಾಗಿದೆ. ಭಾರತದಲ್ಲಿ ನೆಲಕಚ್ಚಿದ್ದ ದರ್ಬಾರ್ ಚಿತ್ರ, ಜಪಾನ್​ನಲ್ಲಿ ಹೌಸ್​ಫುಲ್ ಪ್ರದರ್ಶನ ಕಾಣುತ್ತಿದೆ. ಜಪಾನ್​ನಲ್ಲಿರುವ ರಜನಿ ಅಭಿಮಾನಿಗಳು ಈ ಮಾಹಿತಿಯನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಭಾರತದಲ್ಲಿ 2020ರ ಜನವರಿಯಲ್ಲಿ ಬಿಡುಗಡೆಯಾಗಿತ್ತು. ಅಭಿಮಾನಿಗಳಿಂದ, ವಿಮರ್ಶಕರಿಂದ ಚಿತ್ರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆದರೆ ಜಪಾನ್​ನಲ್ಲಿ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಾಳೆ ಅಂದರೆ ಜುಲೈ 21ರ ತನಕ ಜಪಾನ್​ನ ಎಮ್​ಕೆಸಿ ಚಿತ್ರಮಂದಿರದಲ್ಲಿ ದರ್ಬಾರ್ ಚಿತ್ರ ಹೌಸ್​ಫುಲ್ ಶೋಗಳಾಗಿ ಬುಕ್ ಆಗಿವೆ. ಭಾರತದಲ್ಲಿ ಇದರ ಗಳಿಕೆ ಉತ್ತಮವಾಗಿರದಿದ್ದರೂ ಜಪಾನ್​ನಲ್ಲಿ ಒಳ್ಳೆಯ ಗಳಿಕೆ ಮಾಡುತ್ತಿರುವುದು ಅಚ್ಚರಿ ಮೂಡಿಸಿದೆ. ದರ್ಬಾರ್ ಚಿತ್ರವನ್ನು ಎ.ಆರ್.ಮುರುಗದಾಸ್ ನಿರ್ದೇಶಿಸಿದ್ದು, ಲೈಕಾ ಪ್ರೊಡಕ್ಷನ್ಸ್ ನಿರ್ಮಾಣ ಮಾಡಿದೆ.

ಹೌಸ್​ಫುಲ್ ಆದ ಕುರಿತು ಟ್ವಿಟರ್​ನಲ್ಲಿ ವೈರಲ್ ಆಗಿರುವ ವಿಡಿಯೊ:

ರಜನಿಕಾಂತ್ ‘ಅಣ್ಣಾತ್ತೆ’ ಚಿತ್ರದ ಚಿತ್ರೀಕರಣಕ್ಕಾಗಿ ಕೊಲ್ಕತ್ತಾಗೆ ತೆರಳಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಚಿತ್ರವನ್ನು ಸನ್ ಪಿಚ್ಚರ್ಸ್’ ನಿರ್ಮಿಸುತ್ತಿದ್ದು ಶಿವ ನಿರ್ದೇಶಿಸುತ್ತಿದ್ದಾರೆ. ಚಿತ್ರದಲ್ಲಿ ನಯನತಾರಾ, ಕೀರ್ತಿ ಸುರೇಶ್, ಮೀನಾ, ಖುಷ್ಬು, ಪ್ರಕಾಶ್ ರಾಜ್, ಸೂರಿ, ಸತೀಶ್ ಸೇರಿದಂತೆ ಬಹುದೊಡ್ಡ ತಾರಾ ಬಳಗವಿದೆ.

ಇದನ್ನೂ ಓದಿ:

ಖ್ಯಾತ ನಟಿ ಶಿಲ್ಪಾ ಶೆಟ್ಟಿಗೆ ರಾಜ್​ ಕುಂದ್ರಾ ಸಿಕ್ಕಿದ್ದು ಹೇಗೆ? ಆ ಬಗ್ಗೆ ರಾಜ್​ನ ಮೊದಲ ಪತ್ನಿ ಕವಿತಾ ಏನೆಂದಿದ್ದರು?

ನವರಸನಾಯಕ ಜಗ್ಗೇಶ್ ಅವರ ಬಾಳ ಪಯಣವನ್ನು ಚಿತ್ರಗಳಲ್ಲಿ ನೋಡುವ ಕುತೂಹಲವಿದೆಯೇ?; ಇಲ್ಲಿದೆ ನೋಡಿ

(Superstar Rajinikanth’s movie Darbar is running housefully in Japan)

Published On - 3:47 pm, Tue, 20 July 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ