AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್ ಕೋಲ್ಕತ್ತಾಗೆ ತೆರಳಿದ್ದಾರೆ. ಕೊನೆಯ ಹಂತದ ಶೂಟಿಂಗ್​ ಬಾಕಿ ಇದ್ದು ಈ ಕಾರಣಕ್ಕೆ ಅವರು ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದಾರೆ.

ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​
ಸೂಪರ್ ಸ್ಟಾರ್ ರಜನಿಕಾಂತ್
TV9 Web
| Edited By: |

Updated on: Jul 14, 2021 | 3:47 PM

Share

ನಟ ರಜನಿಕಾಂತ್​ ವೈದ್ಯಕೀಯ ಪರೀಕ್ಷೆಗಾಗಿ ಇತ್ತೀಚೆಗೆ ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಈಗ ಅವರು ಭಾರತಕ್ಕೆ ವಾಪಾಸಾಗಿದ್ದು, ಅಭಿಮಾನಿಗಳು ನಿಟ್ಟುಸಿರುಬಿಟ್ಟಿದ್ದಾರೆ. ಈ ಬೆನ್ನಲ್ಲೇ ರಜನಿ ಕೋಲ್ಕತ್ತಾಗೆ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಜನಿಕಾಂತ್​ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಅವರು ಪಶ್ಚಿಮ ಬಂಗಾಳದ ರಾಜಧಾನಿಗೆ ತೆರಳಿದ್ದೇಕೆ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್ ಕೋಲ್ಕತ್ತಾಗೆ ತೆರಳಿದ್ದಾರೆ. ಕೊನೆಯ ಹಂತದ ಶೂಟಿಂಗ್​ ಬಾಕಿ ಇದ್ದು ಈ ಕಾರಣಕ್ಕೆ ಅವರು ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದಾರೆ. ರಜನಿ ಜತೆಗೆ ಸಿನಿಮಾದ ತಾಂತ್ರಿಕ ವರ್ಗದವರೂ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಶೆಡ್ಯೂಲ್​ನಲ್ಲಿ ಕೆಲ ಮುಖ್ಯ ದೃಶ್ಯಗಳನ್ನು ಶೂಟ್​ ಮಾಡಲಾಗುತ್ತದೆಯಂತೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದಾರೆ. ನಂತರ ಅವರು ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಅಮೆರಿಕದ ಪ್ರತಿಷ್ಠಿತ ಆಸ್ಪತ್ರೆಯಾದ ಮೆಯೋ ಕ್ಲಿನಿಕ್​ ಎದುರು ರಜನಿಕಾಂತ್​ ನಡೆದುಬರುತ್ತಿರುವ ಫೋಟೋ ವೈರಲ್​ ಆಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಏನಿರಬಹುದು ಎಂದು ಕೂಡ ಅಭಿಮಾನಿಗಳು ಚಿಂತೆಗೀಡಾಗಿದ್ದರು. ‘ಅಷ್ಟು ತರಾತುರಿಯಲ್ಲಿ ವಿಮಾನ ಹತ್ತಲು ಅವರು ನಿರ್ಧರಿಸಿದ್ದು ಯಾಕೆ? ಕೊವಿಡ್​ ಸಂದರ್ಭದಲ್ಲೂ ವಿದೇಶಕ್ಕೆ ಪ್ರಯಾಣ ಮಾಡುವ ರಿಸ್ಕ್​ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ಅವರ ಆರೋಗ್ಯದಲ್ಲಿ ಏನೋ ಗಂಭೀರ ಸಮಸ್ಯೆ ಇರಬಹುದು’ ಎಂದು ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆತಂಕ ವ್ಯಕ್ತಪಡಿಸಿದ್ದರು.

‘ಅಣ್ಣಾಥೆ’ ಸಿನಿಮಾಗೆ ‘ವಿಶ್ವಾಸಮ್​’ ಖ್ಯಾತಿಯ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೀಪಾವಳಿ ನಿಮಿತ್ತ ನವೆಂಬರ್​ 4ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ರಾಜಕೀಯದಿಂದ ದೂರವಿರುವ ನಿರ್ಧಾರವನ್ನು ಮರುಪರಿಶೀಲಿಸುತ್ತೇನೆ: ರಜನಿಕಾಂತ್

ಆತಂಕದ ನಡುವೆ ಗುಡ್​ನ್ಯೂಸ್​; ಭಾರತಕ್ಕೆ ಮರಳಿದ ಸೂಪರ್​ ಸ್ಟಾರ್​ ರಜನಿಕಾಂತ್​

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ