AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್ ಕೋಲ್ಕತ್ತಾಗೆ ತೆರಳಿದ್ದಾರೆ. ಕೊನೆಯ ಹಂತದ ಶೂಟಿಂಗ್​ ಬಾಕಿ ಇದ್ದು ಈ ಕಾರಣಕ್ಕೆ ಅವರು ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದಾರೆ.

ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​
ಸೂಪರ್ ಸ್ಟಾರ್ ರಜನಿಕಾಂತ್
TV9 Web
| Edited By: |

Updated on: Jul 14, 2021 | 3:47 PM

Share

ನಟ ರಜನಿಕಾಂತ್​ ವೈದ್ಯಕೀಯ ಪರೀಕ್ಷೆಗಾಗಿ ಇತ್ತೀಚೆಗೆ ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಈಗ ಅವರು ಭಾರತಕ್ಕೆ ವಾಪಾಸಾಗಿದ್ದು, ಅಭಿಮಾನಿಗಳು ನಿಟ್ಟುಸಿರುಬಿಟ್ಟಿದ್ದಾರೆ. ಈ ಬೆನ್ನಲ್ಲೇ ರಜನಿ ಕೋಲ್ಕತ್ತಾಗೆ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಜನಿಕಾಂತ್​ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಅವರು ಪಶ್ಚಿಮ ಬಂಗಾಳದ ರಾಜಧಾನಿಗೆ ತೆರಳಿದ್ದೇಕೆ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್ ಕೋಲ್ಕತ್ತಾಗೆ ತೆರಳಿದ್ದಾರೆ. ಕೊನೆಯ ಹಂತದ ಶೂಟಿಂಗ್​ ಬಾಕಿ ಇದ್ದು ಈ ಕಾರಣಕ್ಕೆ ಅವರು ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದಾರೆ. ರಜನಿ ಜತೆಗೆ ಸಿನಿಮಾದ ತಾಂತ್ರಿಕ ವರ್ಗದವರೂ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಶೆಡ್ಯೂಲ್​ನಲ್ಲಿ ಕೆಲ ಮುಖ್ಯ ದೃಶ್ಯಗಳನ್ನು ಶೂಟ್​ ಮಾಡಲಾಗುತ್ತದೆಯಂತೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದಾರೆ. ನಂತರ ಅವರು ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಅಮೆರಿಕದ ಪ್ರತಿಷ್ಠಿತ ಆಸ್ಪತ್ರೆಯಾದ ಮೆಯೋ ಕ್ಲಿನಿಕ್​ ಎದುರು ರಜನಿಕಾಂತ್​ ನಡೆದುಬರುತ್ತಿರುವ ಫೋಟೋ ವೈರಲ್​ ಆಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಏನಿರಬಹುದು ಎಂದು ಕೂಡ ಅಭಿಮಾನಿಗಳು ಚಿಂತೆಗೀಡಾಗಿದ್ದರು. ‘ಅಷ್ಟು ತರಾತುರಿಯಲ್ಲಿ ವಿಮಾನ ಹತ್ತಲು ಅವರು ನಿರ್ಧರಿಸಿದ್ದು ಯಾಕೆ? ಕೊವಿಡ್​ ಸಂದರ್ಭದಲ್ಲೂ ವಿದೇಶಕ್ಕೆ ಪ್ರಯಾಣ ಮಾಡುವ ರಿಸ್ಕ್​ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ಅವರ ಆರೋಗ್ಯದಲ್ಲಿ ಏನೋ ಗಂಭೀರ ಸಮಸ್ಯೆ ಇರಬಹುದು’ ಎಂದು ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆತಂಕ ವ್ಯಕ್ತಪಡಿಸಿದ್ದರು.

‘ಅಣ್ಣಾಥೆ’ ಸಿನಿಮಾಗೆ ‘ವಿಶ್ವಾಸಮ್​’ ಖ್ಯಾತಿಯ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೀಪಾವಳಿ ನಿಮಿತ್ತ ನವೆಂಬರ್​ 4ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ರಾಜಕೀಯದಿಂದ ದೂರವಿರುವ ನಿರ್ಧಾರವನ್ನು ಮರುಪರಿಶೀಲಿಸುತ್ತೇನೆ: ರಜನಿಕಾಂತ್

ಆತಂಕದ ನಡುವೆ ಗುಡ್​ನ್ಯೂಸ್​; ಭಾರತಕ್ಕೆ ಮರಳಿದ ಸೂಪರ್​ ಸ್ಟಾರ್​ ರಜನಿಕಾಂತ್​

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್