AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು

Rajinikanth: ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ.

ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು
ಅಮೆರಿಕದಲ್ಲಿ ನಟ ರಜನಿಕಾಂತ್​
TV9 Web
| Updated By: Lakshmi Hegde|

Updated on:Jun 30, 2021 | 3:16 PM

Share

ಸೂಪರ್​ಸ್ಟಾರ್​ ರಜನೀಕಾಂತ್ ಆರೋಗ್ಯ ತಪಾಸಣೆಗೆಂದು ಕುಟುಂಬದವರೊಂದಿಗೆ ಯುಎಸ್​ಗೆ ತೆರಳಿದ್ದಾರೆ. 2016ರಲ್ಲಿ ಅವರು ಅಮೆರಿಕದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಅದಾದ ಬಳಿಕ ಆಗಾಗ ತಪಾಸಣೆಗೆಂದು ಯುಎಸ್​ಗೆ ತೆರಳುತ್ತಿರುತ್ತಾರೆ. ಹಾಗೇ ಈ ಬಾರಿಯೂ ಅಮೆರಿಕಕ್ಕೆ ಹೋಗಿರುವ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ರಜನೀಕಾಂತ್​ ಅವರು ಯುಎಸ್​​ನ ಪಶ್ಚಿಮ ವರ್ಜೀನಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಇರುವ ಫೋಟೋ ಇದು.

ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ. ಪದೇಪದೇ ಅಮೆರಿಕಕ್ಕೆ ಹೋಗುವ ರಜನೀಕಾಂತ್​ಗೆ ಅಲ್ಲಿಯೂ ಕೂಡ ದೊಡ್ಡ ಅಭಿಮಾನಿ ಬಳಗವಿದೆ. ಈ ಬಾರಿ ಹೋದಾಗ ರಜನೀಕಾಂತ್​ ಪಶ್ಚಿಮ ವರ್ಜೀನಿಯಾಕ್ಕೆ ಭೇಟಿ ಕೊಟ್ಟು ಅಲ್ಲಿರುವ ತಮ್ಮ ಅಭಿಮಾನಿಗಳೊಟ್ಟಿಗೆ ಮಾತುಕತೆ ನಡೆಸಿದ್ದಾರೆ. ಫೋಟೋಕ್ಕೆ ಪೋಸ್​ ಕೊಟ್ಟಿದ್ದಾರೆ.

Rajinikanth

ಅಭಿಮಾನಿಗಳೊಂದಿಗೆ ನಟ ರಜನಿಕಾಂತ್​

ಖ್ಯಾತ ಗೀತರಚನೆಕಾರ ವೈರಮುತ್ತು ರಜನೀಕಾಂತ್​ಗೆ ಫೋನ್​ ಮಾಡಿ ಆರೋಗ್ಯ ವಿಚಾರಿಸಿದ್ದಾಗಿ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ರಜನೀಕಾಂತ್​ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ. ಅವರು ಇನ್ನೇನು ಕೆಲವೇ ದಿನಗಳಲ್ಲಿ ಭಾರತಕ್ಕೆ ವಾಪಸ್ ಆಗುತ್ತಾರೆ ಎಂದೂ ತಿಳಿಸಿದ್ದಾರೆ. ರಜನೀಕಾಂತ್​ ಅಮೆರಿಕದಿಂದ ವಾಪಸ್​ ಆಗುತ್ತಿದ್ದಂತೆ ಮತ್ತೆ ತಮ್ಮ ಮುಂದಿನ ಸಿನಿಮಾ ಅಣ್ಣಾತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಸಿರುಥೈ ಸಿವಾ ನಿರ್ದೇಶನ ಮಾಡುತ್ತಿದ್ದು, ನಯನತಾರಾ, ಕೀರ್ತಿ ಸುರೇಶ್​, ಖುಷ್ಬು, ಮೀನಾ, ಪ್ರಕಾಶ್​ ರಾಜ್​ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

Superstar Rajinikanths latest Photos with fans from West Virginia goes Viral in Social Media

Published On - 3:15 pm, Wed, 30 June 21

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು