AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು

Rajinikanth: ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ.

ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು
ಅಮೆರಿಕದಲ್ಲಿ ನಟ ರಜನಿಕಾಂತ್​
TV9 Web
| Edited By: |

Updated on:Jun 30, 2021 | 3:16 PM

Share

ಸೂಪರ್​ಸ್ಟಾರ್​ ರಜನೀಕಾಂತ್ ಆರೋಗ್ಯ ತಪಾಸಣೆಗೆಂದು ಕುಟುಂಬದವರೊಂದಿಗೆ ಯುಎಸ್​ಗೆ ತೆರಳಿದ್ದಾರೆ. 2016ರಲ್ಲಿ ಅವರು ಅಮೆರಿಕದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಅದಾದ ಬಳಿಕ ಆಗಾಗ ತಪಾಸಣೆಗೆಂದು ಯುಎಸ್​ಗೆ ತೆರಳುತ್ತಿರುತ್ತಾರೆ. ಹಾಗೇ ಈ ಬಾರಿಯೂ ಅಮೆರಿಕಕ್ಕೆ ಹೋಗಿರುವ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ರಜನೀಕಾಂತ್​ ಅವರು ಯುಎಸ್​​ನ ಪಶ್ಚಿಮ ವರ್ಜೀನಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಇರುವ ಫೋಟೋ ಇದು.

ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ. ಪದೇಪದೇ ಅಮೆರಿಕಕ್ಕೆ ಹೋಗುವ ರಜನೀಕಾಂತ್​ಗೆ ಅಲ್ಲಿಯೂ ಕೂಡ ದೊಡ್ಡ ಅಭಿಮಾನಿ ಬಳಗವಿದೆ. ಈ ಬಾರಿ ಹೋದಾಗ ರಜನೀಕಾಂತ್​ ಪಶ್ಚಿಮ ವರ್ಜೀನಿಯಾಕ್ಕೆ ಭೇಟಿ ಕೊಟ್ಟು ಅಲ್ಲಿರುವ ತಮ್ಮ ಅಭಿಮಾನಿಗಳೊಟ್ಟಿಗೆ ಮಾತುಕತೆ ನಡೆಸಿದ್ದಾರೆ. ಫೋಟೋಕ್ಕೆ ಪೋಸ್​ ಕೊಟ್ಟಿದ್ದಾರೆ.

Rajinikanth

ಅಭಿಮಾನಿಗಳೊಂದಿಗೆ ನಟ ರಜನಿಕಾಂತ್​

ಖ್ಯಾತ ಗೀತರಚನೆಕಾರ ವೈರಮುತ್ತು ರಜನೀಕಾಂತ್​ಗೆ ಫೋನ್​ ಮಾಡಿ ಆರೋಗ್ಯ ವಿಚಾರಿಸಿದ್ದಾಗಿ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ರಜನೀಕಾಂತ್​ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ. ಅವರು ಇನ್ನೇನು ಕೆಲವೇ ದಿನಗಳಲ್ಲಿ ಭಾರತಕ್ಕೆ ವಾಪಸ್ ಆಗುತ್ತಾರೆ ಎಂದೂ ತಿಳಿಸಿದ್ದಾರೆ. ರಜನೀಕಾಂತ್​ ಅಮೆರಿಕದಿಂದ ವಾಪಸ್​ ಆಗುತ್ತಿದ್ದಂತೆ ಮತ್ತೆ ತಮ್ಮ ಮುಂದಿನ ಸಿನಿಮಾ ಅಣ್ಣಾತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಸಿರುಥೈ ಸಿವಾ ನಿರ್ದೇಶನ ಮಾಡುತ್ತಿದ್ದು, ನಯನತಾರಾ, ಕೀರ್ತಿ ಸುರೇಶ್​, ಖುಷ್ಬು, ಮೀನಾ, ಪ್ರಕಾಶ್​ ರಾಜ್​ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

Superstar Rajinikanths latest Photos with fans from West Virginia goes Viral in Social Media

Published On - 3:15 pm, Wed, 30 June 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ