ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು

Rajinikanth: ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ.

ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು
ಅಮೆರಿಕದಲ್ಲಿ ನಟ ರಜನಿಕಾಂತ್​
Follow us
| Updated By: Lakshmi Hegde

Updated on:Jun 30, 2021 | 3:16 PM

ಸೂಪರ್​ಸ್ಟಾರ್​ ರಜನೀಕಾಂತ್ ಆರೋಗ್ಯ ತಪಾಸಣೆಗೆಂದು ಕುಟುಂಬದವರೊಂದಿಗೆ ಯುಎಸ್​ಗೆ ತೆರಳಿದ್ದಾರೆ. 2016ರಲ್ಲಿ ಅವರು ಅಮೆರಿಕದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಅದಾದ ಬಳಿಕ ಆಗಾಗ ತಪಾಸಣೆಗೆಂದು ಯುಎಸ್​ಗೆ ತೆರಳುತ್ತಿರುತ್ತಾರೆ. ಹಾಗೇ ಈ ಬಾರಿಯೂ ಅಮೆರಿಕಕ್ಕೆ ಹೋಗಿರುವ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ರಜನೀಕಾಂತ್​ ಅವರು ಯುಎಸ್​​ನ ಪಶ್ಚಿಮ ವರ್ಜೀನಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಇರುವ ಫೋಟೋ ಇದು.

ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ. ಪದೇಪದೇ ಅಮೆರಿಕಕ್ಕೆ ಹೋಗುವ ರಜನೀಕಾಂತ್​ಗೆ ಅಲ್ಲಿಯೂ ಕೂಡ ದೊಡ್ಡ ಅಭಿಮಾನಿ ಬಳಗವಿದೆ. ಈ ಬಾರಿ ಹೋದಾಗ ರಜನೀಕಾಂತ್​ ಪಶ್ಚಿಮ ವರ್ಜೀನಿಯಾಕ್ಕೆ ಭೇಟಿ ಕೊಟ್ಟು ಅಲ್ಲಿರುವ ತಮ್ಮ ಅಭಿಮಾನಿಗಳೊಟ್ಟಿಗೆ ಮಾತುಕತೆ ನಡೆಸಿದ್ದಾರೆ. ಫೋಟೋಕ್ಕೆ ಪೋಸ್​ ಕೊಟ್ಟಿದ್ದಾರೆ.

Rajinikanth

ಅಭಿಮಾನಿಗಳೊಂದಿಗೆ ನಟ ರಜನಿಕಾಂತ್​

ಖ್ಯಾತ ಗೀತರಚನೆಕಾರ ವೈರಮುತ್ತು ರಜನೀಕಾಂತ್​ಗೆ ಫೋನ್​ ಮಾಡಿ ಆರೋಗ್ಯ ವಿಚಾರಿಸಿದ್ದಾಗಿ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ರಜನೀಕಾಂತ್​ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ. ಅವರು ಇನ್ನೇನು ಕೆಲವೇ ದಿನಗಳಲ್ಲಿ ಭಾರತಕ್ಕೆ ವಾಪಸ್ ಆಗುತ್ತಾರೆ ಎಂದೂ ತಿಳಿಸಿದ್ದಾರೆ. ರಜನೀಕಾಂತ್​ ಅಮೆರಿಕದಿಂದ ವಾಪಸ್​ ಆಗುತ್ತಿದ್ದಂತೆ ಮತ್ತೆ ತಮ್ಮ ಮುಂದಿನ ಸಿನಿಮಾ ಅಣ್ಣಾತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಸಿರುಥೈ ಸಿವಾ ನಿರ್ದೇಶನ ಮಾಡುತ್ತಿದ್ದು, ನಯನತಾರಾ, ಕೀರ್ತಿ ಸುರೇಶ್​, ಖುಷ್ಬು, ಮೀನಾ, ಪ್ರಕಾಶ್​ ರಾಜ್​ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

Superstar Rajinikanths latest Photos with fans from West Virginia goes Viral in Social Media

Published On - 3:15 pm, Wed, 30 June 21

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ