AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಭ್ಯತೆ ಇರಲಿ: ‘ದಿ ರಣ್ವೀರ್ ಶೋ’ ಪ್ರಸಾರಕ್ಕೆ ಸುಪ್ರೀಂ ಕೋರ್ಟ್​ ಅನುಮತಿ

‘ಇಂಡಿಯಾಸ್ ಗಾಟ್ ಲೇಟೆಂಟ್’ ಕಾರ್ಯಕ್ರಮದಲ್ಲಿ ತಂದೆ-ತಾಯಿಯ ಲೈಂಗಿಕತೆ ಬಗ್ಗೆ ಅಸಭ್ಯವಾಗಿ ಮಾತನಾಡಿದ್ದ ಯೂಟ್ಯೂಬರ್ ರಣ್ವೀರ್ ಅಲಹಾಬಾದಿಯಾ ಅವರಿಗೆ ಈಗ ಸಣ್ಣ ರಿಲೀಫ್ ಸಿಕ್ಕಿದೆ. ಯೂಟ್ಯೂಬ್​ನಲ್ಲಿ ಹೊಸ ಎಪಿಸೋಡ್​ ಅಪ್​ಲೋಡ್ ಮಾಡಲು ಸುಪ್ರೀಂ ಕೋರ್ಟ್​ ಅವಕಾಶ ನೀಡಿದೆ. ಆ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಸಭ್ಯತೆ ಇರಲಿ: ‘ದಿ ರಣ್ವೀರ್ ಶೋ’ ಪ್ರಸಾರಕ್ಕೆ ಸುಪ್ರೀಂ ಕೋರ್ಟ್​ ಅನುಮತಿ
Ranveer Allahbadia
ಮದನ್​ ಕುಮಾರ್​
|

Updated on: Mar 03, 2025 | 6:19 PM

Share

ಜನಪ್ರಿಯ ಯೂಟ್ಯೂಬರ್​ ರಣ್ವೀರ್ ಅಲಹಾಬಾದಿಯಾ (Ranveer Allahbadia) ಅನೇಕರ ಕೆಂಗಣ್ಣಿಗೆ ಗುರಿ ಆಗಿದ್ದರು. ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ಅಶ್ಲೀಲವಾಗಿ ಮಾತನಾಡಿದ ಅವರ ವಿರುದ್ಧ ಹಲವು ದೂರುಗಳು ದಾಖಲಾಗಿದ್ದವು. ‘ದಿ ರಣ್ವೀರ್ ಶೋ’ ಯೂಟ್ಯೂಬ್ ಚಾನೆಲ್​ನಲ್ಲಿ ಹೊಸ ಸಂಚಿಕೆಗಳನ್ನು ಅಪ್​ಲೋಡ್ ಮಾಡದಂತೆ ತಡೆ ನೀಡಲಾಗಿತ್ತು. ಆದರೆ ಈಗ ರಣ್ವೀರ್ ಅಲಹಾಬಾದಿಯಾ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ‘ದಿ ರಣ್ವೀರ್ ಶೋ’ ಹೊಸ ಎಪಿಸೋಡ್​ಗಳನ್ನು ಪ್ರಸಾರ ಮಾಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೆ ಕೆಲವು ಷರತ್ತುಗಳನ್ನು ವಿಧಿಸಿದೆ. ಸಭ್ಯತೆ ಮತ್ತು ನೈತಿಕತೆ ಇರಬೇಕು ಎಂದು ಕೋರ್ಟ್​ ಸೂಚನೆ ನೀಡಿದೆ.

ಸಮಯ್ ರೈನಾ ಅವರ ‘ಇಂಡಿಯಾಸ್ ಗಾಟ್ ಲೇಟೆಂಟ್’ ಶೋನಲ್ಲಿ ರಣ್ವೀರ್​ ಅಲಹಾಬಾದಿಯಾ ಅತಿಥಿಯಾಗಿ ಹೋಗಿದ್ದಾಗ ತೀರ ಕೀಳುಮಟ್ಟದಲ್ಲಿ ಮಾತನಾಡಿದ್ದರು. ಸಭ್ಯ ಸಮಾಜ ತಲೆ ತಗ್ಗಿಸುವ ರೀತಿಯಲ್ಲಿತ್ತು ಅವರ ಹೇಳಿಕೆಗಳು. ಅದಕ್ಕಾಗಿ ದೇಶಾದ್ಯಂತ ಖಂಡನೆ ವ್ಯಕ್ತವಾಗಿತ್ತು. ಅವರ ಹೇಳಿಕೆಗಳನ್ನು ಕೋರ್ಟ್​ ಕೂಡ ಖಂಡಿಸಿದೆ.

‘ದಿ ರಣ್ವೀರ್​ ಶೋ’ ನಂಬಿಕೊಂಡೇ ತಮ್ಮ ಜೀವನ ಸಾಗುತ್ತಿದೆ. ಅಲ್ಲದೇ ತಾವು 280 ಜನರಿಗೆ ಇದರಿಂದ ಉದ್ಯೋಗ ನೀಡಿದ್ದು, ಅವರೆಲ್ಲರ ಜೀವನದ ದೃಷ್ಟಿಯಿಂದ ಶೋ ಮುಂದುವರಿಸಲು ಅವಕಾಶ ನೀಡಬೇಕು ಎಂದು ರಣ್ವೀರ್ ಅಲಹಾಬಾದಿಯಾ ಅವರು ಸುಪ್ರೀಂ ಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಕೆಲವು ಷರತ್ತುಗಳ ಜೊತೆ ಶೋ ಮುಂದುವರಿಸಲು ಅನುಮತಿ ಕೊಟ್ಟಿದೆ.

ಇದನ್ನೂ ಓದಿ
Image
ಒಟಿಟಿಯಲ್ಲಿ ಹೆಚ್ಚಿದೆ ಅಶ್ಲೀಲತೆ: ಎಚ್ಚರಿಕೆ ನೀಡಿದ ಕೇಂದ್ರ ಸರ್ಕಾರ
Image
ಅಶ್ಲೀಲ ಹೇಳಿಕೆ, ಬಂಧನ ಭೀತಿಯಿಂದ ಬಚಾವಾದ ರಣ್ವೀರ್
Image
ಇಂಡಿಯಾಸ್ ಗಾಟ್ ಲೇಟೆಂಟ್​ನ ಎಲ್ಲಾ ಎಪಿಸೋಡ್​ ಡಿಲೀಟ್; ಸಮಯ್ ದೊಡ್ಡ ನಿರ್ಧಾರ
Image
ಪೋಷಕರ ಲೈಂಗಿಕತೆ ಬಗ್ಗೆ ಅಶ್ಲೀಲ ಹೇಳಿಕೆ; ರಣವೀರ್ ಪ್ರೀತಿ ಕೊನೆ ಆಯ್ತಾ?

ಇದನ್ನೂ ಓದಿ: ಇಂಡಿಯಾ ಗಾಟ್ ಲೇಟೆಂಟ್ ವಿವಾದ, ರಾಖಿ ಸಾವಂತ್​ಗೂ ಸಮನ್ಸ್

ಈ ಶೋನಲ್ಲಿ ಪ್ರಸಾರ ಆಗುವ ವಿಷಯಗಳು ಎಲ್ಲ ವಯೋಮಾನದ ವೀಕ್ಷಕರು ನೋಡುವಂತೆ ನೈತಿಕತೆ ಮತ್ತು ಸಭ್ಯತೆಯನ್ನು ಹೊಂದಿರಬೇಕು ಎಂದು ಸುಪ್ರೀಂ ಕೋರ್ಟ್​ ಷರತ್ತು ವಿಧಿಸಿದೆ. ಅಲ್ಲದೇ ಈ ಎಪಿಸೋಡ್​ಗಳಲ್ಲಿ ಪ್ರಸ್ತುತ ನಡೆಯುತ್ತಿರುವ ಕೇಸ್ ಬಗ್ಗೆ ಯಾವುದೇ ಚರ್ಚೆ ಮಾಡುವಂತಿಲ್ಲ ಎಂದು ಕೂಡ ಆದೇಶಿಸಿದೆ. ಅಣ್ವೀರ್ ಅಲಹಾಬಾದಿಯಾಗೆ ನೀಡಿದ ನಿರೀಕ್ಷಣಾ ಜಾಮೀನಿನ ಅವಧಿಯನ್ನು ಮುಂದಿನ ಆದೇಶದ ತನಕ ವಿಸ್ತರಣೆ ಮಾಡಲಾಗಿದೆ. ಇದರಿಂದ ಅವರು ಸದ್ಯಕ್ಕೆ ನಿಟ್ಟುಸಿರು ಬಿಡುವಂತಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ