AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣ, ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ

ಅಶ್ಲೀಲ ವೀಡಿಯೋಗಳನ್ನು ಹಂಚಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮತ್ತು ನಟರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅಶ್ಲೀಲ ವೀಡಿಯೋ ಹಂಚಿಕೆ ಪ್ರಕರಣ, ರಾಜ್ ಕುಂದ್ರಾಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ
Raj KundraImage Credit source: ThePrint
TV9 Web
| Edited By: |

Updated on: Dec 13, 2022 | 12:35 PM

Share

ದೆಹಲಿ: ಅಶ್ಲೀಲ ವೀಡಿಯೋಗಳನ್ನು ಹಂಚಿದ ಆರೋಪದ ಮೇಲೆ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಉದ್ಯಮಿ ರಾಜ್ ಕುಂದ್ರಾ ಮತ್ತು ನಟರಾದ ಶೆರ್ಲಿನ್ ಚೋಪ್ರಾ ಮತ್ತು ಪೂನಂ ಪಾಂಡೆ ಸೇರಿದಂತೆ ಇತರರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿಗಳಾದ ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರ ಪೀಠವು ಕುಂದ್ರಾ ಮತ್ತು ಇತರ ಆರೋಪಿಗಳಿಗೆ ತನಿಖೆಗೆ ಸಹಕರಿಸುವಂತೆ ಸೂಚಿಸಿದೆ. ಆರೋಪಿಗಳ ಪರ ವಕೀಲರ ವಾದವನ್ನು ಆಲಿಸಿದ ನಂತರ, ಅರ್ಜಿದಾರರಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಪೀಠ ಹೇಳಿದೆ.

ಅರ್ಜಿದಾರರೊಬ್ಬರ ಪರ ವಾದ ಮಂಡಿಸಿದ ಹಿರಿಯ ವಕೀಲ ಆರ್.ಬಸಂತ್, ಪ್ರಕರಣದಲ್ಲಿ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದ್ದು, ಆರೋಪಿಗಳು ತನಿಖೆಗೆ ಪೊಲೀಸರಿಗೆ ಸಹಕರಿಸುತ್ತಿದ್ದಾರೆ. ಈ ಪ್ರಕರಣದಲ್ಲಿ ಕುಂದ್ರಾ ಅವರನ್ನು ಬಂಧಿಸದಂತೆ ಈ ಹಿಂದೆ ಸುಪ್ರೀಂ ಕೋರ್ಟ್ ಮಧ್ಯಂತರ ರಕ್ಷಣೆ ನೀಡಿತ್ತು ಎಂದು ಹೇಳಿದೆ.

ಇದನ್ನು ಓದಿ:ಅಶ್ಲೀಲ ಚಿತ್ರ ಪ್ರಕರಣ; ರಾಜ್ ಕುಂದ್ರಾಗೆ ಬಂಧನದಿಂದ ತಾತ್ಕಾಲಿಕ ರಕ್ಷಣೆ ನೀಡಿದ ಸುಪ್ರೀಂ ಕೋರ್ಟ್

ಕುಂದ್ರಾ ವಿರುದ್ಧ ಭಾರತೀಯ ದಂಡ ಸಂಹಿತೆ, ಮಹಿಳೆಯರ ಅಸಭ್ಯ ಪ್ರಾತಿನಿಧ್ಯ (ತಡೆಗಟ್ಟುವಿಕೆ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಲೈಂಗಿಕವಾಗಿ ಅಶ್ಲೀಲ ವೀಡಿಯೊಗಳನ್ನು ಹಂಚುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಎಫ್‌ಐಆರ್‌ನಲ್ಲಿ ಚೋಪ್ರಾ ಮತ್ತು ಪಾಂಡೆಯನ್ನು ಸಹ ಆರೋಪಿಗಳೆಂದು ಹೆಸರಿಸಲಾಗಿದೆ.

ಸಹ-ಆರೋಪಿಗಳೆಂದು ಹೆಸರಿಸಲಾದ ನಟರು ವೀಡಿಯೊಗಳನ್ನು ಚಿತ್ರೀಕರಿಸಲು ಸಂಪೂರ್ಣ ಸಮ್ಮತಿಯನ್ನು ನೀಡಿದ್ದರೂ ಸಹ, ಕುಂದ್ರಾ ಅವರ ವಕೀಲರು ಅವರು ಯಾವುದೇ ರೀತಿಯಲ್ಲಿ ವಿಷಯ ರಚನೆ, ಪ್ರಕಟಣೆ ಅಥವಾ ಆಪಾದಿತ ಕಾನೂನುಬಾಹಿರ ವೀಡಿಯೊಗಳ ಪ್ರಸಾರಕ್ಕೆ ಅನುಮತಿ ನೀಡಿಲ್ಲ ಎಂದು ಪ್ರತಿಪಾದಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ