AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯನಾಡ್​ ದುರಂತ: ಸೂರ್ಯ ಫ್ಯಾಮಿಲಿ 50 ಲಕ್ಷ ರೂ. ದೇಣಿಗೆ; ಬೇರೆ ಕಲಾವಿದರು ನೀಡಿದ್ದೆಷ್ಟು?

ಕೇರಳದ ವಯನಾಡಿನಲ್ಲಿ ಭೂಕುಸಿತಕ್ಕೆ ಸಿಲುಕಿದ ಸಂತ್ರಸ್ತರಿಗೆ ಅನೇಕ ಸೆಲೆಬ್ರಿಟಿಗಳು ನೆರವಾಗಿದ್ದಾರೆ. ಸೂರ್ಯ, ಜ್ಯೋತಿಕಾ, ಕಾರ್ತಿ, ಮಮ್ಮುಟಿ, ವಿಕ್ರಮ್​, ಫಹಾದ್​ ಫಾಸಿಲ್​, ದುಲ್ಖರ್​ ಸಲ್ಮಾನ್​, ರಶ್ಮಿಕಾ ಮಂದಣ್ಣ ಮುಂತಾದವರು ಮುಖ್ಯಮಂತ್ರಿ ಪರಿಹಾರ ನಿಧಿಗೆ ಲಕ್ಷಾಂತರ ರೂಪಾಯಿ ನೀಡಿ ಮಾನವೀಯತೆ ಮೆರೆದಿದ್ದಾರೆ. ಯಾರು, ಎಷ್ಟು ದೇಣಿಗೆ ನೀಡಿದ್ದಾರೆ ಎಂಬ ವಿವರ ಇಲ್ಲಿದೆ..

ವಯನಾಡ್​ ದುರಂತ: ಸೂರ್ಯ ಫ್ಯಾಮಿಲಿ 50 ಲಕ್ಷ ರೂ. ದೇಣಿಗೆ; ಬೇರೆ ಕಲಾವಿದರು ನೀಡಿದ್ದೆಷ್ಟು?
ವಯನಾಡ್​ ದುರಂತಕ್ಕೆ ಮಿಡಿದ ಸೆಲೆಬ್ರಿಟಿಗಳು
ಮದನ್​ ಕುಮಾರ್​
|

Updated on: Aug 01, 2024 | 10:24 PM

Share

ವಯನಾಡ್​ ದುರಂತಕ್ಕೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದೆ. ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ 270ಕ್ಕೂ ಅಧಿಕ ಜನರು ಸಾವಿಗೆ ಈಡಾಗಿದ್ದಾರೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ರಕ್ಷಣಾ ಕಾರ್ಯ ನಡೆಯುತ್ತಿದ್ದು, ಈ ದುರಂತಕ್ಕೆ ಸೆಲೆಬ್ರಿಟಿಗಳು ಕೂಡ ಮರುಗಿದ್ದಾರೆ. ಕೇರಳ, ತಮಿಳುನಾಡು ಮುಂತಾದ ರಾಜ್ಯಗಳ ಸೆಲೆಬ್ರಿಟಿಗಳು ಲಕ್ಷಾಂತರ ರೂಪಾಯಿ ದೇಣಿಗೆ ನೀಡುವ ಮೂಲಕ ಸಂತ್ರಸ್ತರಿಗೆ ನೆರವಾಗುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

ತಮಿಳು ಚಿತ್ರರಂಗದ ಖ್ಯಾತ ನಟರಾದ ಸೂರ್ಯ ಅವರ ಕುಟುಂಬದವರು ವಯನಾಡು ಭೂಕುಸಿತದ ಸಂತ್ರಸ್ತರಿಗೆ ನೆರವಾಗಲಿ ಎಂದು 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಸೂರ್ಯ ಅವರ ಪತ್ನಿ ಜ್ಯೋತಿಕಾ, ಸಹೋದರ ಕಾರ್ತಿ ಅವರು ಈ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ. ಕಷ್ಟದಲ್ಲಿ ಇರುವ ಜನರಿಗೆ ಸಹಾಯ ಮಾಡಿದ್ದಕ್ಕಾಗಿ ಸೂರ್ಯ, ಜ್ಯೋತಿಕಾ, ಕಾರ್ತಿ ಅವರಿಗೆ ಜನರು ಭೇಷ್​ ಎಂದಿದ್ದಾರೆ. ಸಿಎಂ ಪರಿಹಾರ ನಿಧಿಗೆ ಸೂರ್ಯ ಫ್ಯಾಮಿಲಿಯವರು ಈ ಹಣವನ್ನು ನೀಡಿದ್ದಾರೆ.

ಮಲಯಾಳಂ ಚಿತ್ರರಂಗದ ಹಿರಿಯ ನಟ ಮಮ್ಮುಟ್ಟಿ ಅವರು ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ನೀಡಿದ್ದಾರೆ. ಮಮ್ಮುಟ್ಟಿ ಪುತ್ರ ದುಲ್ಕರ್​ ಸಲ್ಮಾನ್​ ಅವರು 15 ಲಕ್ಷ ರೂಪಾಯಿ ನೀಡಿದ್ದಾರೆ. ಮಮ್ಮುಟ್ಟಿ ಅವರ ಚಾರಿಟೆಬಲ್​ ಟ್ರಸ್ಟ್​ನಿಂದಲೂ ಪರಿಹಾರ ಕಾರ್ಯ ಕೈಕೊಳ್ಳಲಾಗಿದೆ. ಅಗತ್ಯ ಇರುವವರ ಸಹಾಯಕ್ಕೆ ಟ್ರಸ್ಟ್​ ಧಾವಿಸಿದೆ. ಆಹಾರ, ಔಷದಿ, ಬಟ್ಟೆ ಮುಂತಾದ ಅಗತ್ಯ ವಸ್ತುಗಳನ್ನು ಸಂತ್ರಸ್ತರಿಗೆ ನೀಡಲಾಗುತ್ತಿದೆ.

ಕನ್ನಡದ ನಟಿ ರಶ್ಮಿಕಾ ಮಂದಣ್ಣ ಅವರು ವಯನಾಡು ಭೂಕುಸಿತದ ಸಂತ್ರಸ್ತಿಗೆ ನೆರವಾಗುವ ಉದ್ದೇಶದಿಂದ ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ಪುಣ್ಯದ ಕಾರ್ಯ ಮಾಡಿದ್ದಾರೆ. ಅಲ್ಲದೇ, ಕಾಲಿವುಡ್​ನ ಸ್ಟಾರ್​ ನಟ ವಿಕ್ರಮ್​ ಅವರು 20 ಲಕ್ಷ ರೂಪಾಯಿ ನೀಡಿದ್ದಾರೆ. ಸೆಲೆಬ್ರಿಟಿಗಳ ಈ ಕಾರ್ಯದಿಂದಾಗಿ ಸಾಕಷ್ಟು ಸಹಾಯ ಆಗುತ್ತಿದೆ. ಇನ್ನೂ ಅನೇಕ ನಟ-ನಟಿಯರು ಸಹಾಯ ಹಸ್ತ ಚಾಚುತ್ತಿದ್ದಾರೆ.

ಇದನ್ನೂ ಓದಿ: ಕೇರಳ ಭೂಕುಸಿತ; ದುರಂತದಿಂದ ಪಾರಾಗಿದ್ದ ಚಾಮರಾಜನಗರದ 6 ಮಂದಿ ಸ್ವಗ್ರಾಮಗಳಿಗೆ ವಾಪಾಸ್​

ಮಾಲಿವುಡ್​ನ ಫಹಾದ್ ಫಾಸಿಲ್​ ಹಾಗೂ ಅವರ ಪತ್ನಿ ನಜ್ರಿಯಾ ನಜಿಮ್​ ಅವರು 25 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದ್ದಾರೆ. ಈಗಾಗಲೇ ಸಾವಿರಾರು ಜನರನ್ನು ರಕ್ಷಿಸಲಾಗಿದೆ. ಕೇಂದ್ರ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ವಯನಾಡಿಗೆ ಆಗಮಿಸಿದ್ದಾರೆ. ಅನೇಕರು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!