AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಸೂರ್ಯಗಿಂತ ಮೂರು ಪಟ್ಟು ಜಾಸ್ತಿ ಸಂಬಳ ಪಡೆಯುತ್ತಿದ್ದ ಪತ್ನಿ ಜ್ಯೋತಿಕಾ

ಅದ್ದೂರಿ ಬಜೆಟ್​ನಲ್ಲಿ ‘ಕಂಗುವ’ ಸಿನಿಮಾ ತಯಾರಾಗಿದೆ. ನವೆಂಬರ್​ 14ಕ್ಕೆ ಈ ಸಿನಿಮಾ ತೆರೆಕಾಣಲಿದೆ. ಈ ಚಿತ್ರಕ್ಕೆ ಅವರು ಬಹುಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ. ಆದರೆ ಒಂದು ಕಾಲದಲ್ಲಿ ಸೂರ್ಯ ಅವರ ಸಂಬಳ ಪತ್ನಿ ಜ್ಯೋತಿಕಾಗಿಂತಲೂ ಕಡಿಮೆ ಇತ್ತು. ಆ ಕುರಿತು ಇತ್ತೀಚೆಗಿನ ಸಂದರ್ಶನದಲ್ಲಿ ಅವರು ಮಾತನಾಡಿದ್ದಾರೆ.

ನಟ ಸೂರ್ಯಗಿಂತ ಮೂರು ಪಟ್ಟು ಜಾಸ್ತಿ ಸಂಬಳ ಪಡೆಯುತ್ತಿದ್ದ ಪತ್ನಿ ಜ್ಯೋತಿಕಾ
ಸೂರ್ಯ, ಜ್ಯೋತಿಕಾ
ಮದನ್​ ಕುಮಾರ್​
|

Updated on: Nov 10, 2024 | 5:13 PM

Share

ಕಾಲಿವುಡ್ ನಟ ಸೂರ್ಯ ಅವರು ಬಹುನಿರೀಕ್ಷಿತ ‘ಕಂಗುವ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ನವೆಂಬರ್​ 14ರಂದು ಬಿಡುಗಡೆ ಆಗಲಿದೆ. ಈ ಸಿನಿಮಾದ ಪ್ರಚಾರದ ಸಲುವಾಗಿ ಮಾಧ್ಯಮಗಳಿಗೆ ಸೂರ್ಯ ಅವರು ಸಂದರ್ಶನ ನೀಡಿದ್ದಾರೆ. ಇತ್ತೀಚೆಗೆ ನೀಡಿದ ಸಂದರ್ಶನದಲ್ಲಿ ಅವರು ಪತ್ನಿ ಜ್ಯೋತಿಕಾ ಬಗ್ಗೆ ಮಾತನಾಡಿದ್ದಾರೆ. ಈಗ ಸೂರ್ಯ ಅವರು ಕೋಟ್ಯಂತರ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಆದರೆ ಒಂದು ಕಾಲದಲ್ಲಿ ಅವರ ಸಂಬಳ ಪತ್ನಿ ಜ್ಯೋತಿಕಾಗಿಂತ ಕಡಿಮೆ ಇತ್ತು. ಆ ದಿನಗಳನ್ನು ಸೂರ್ಯ ಅವರು ಈಗ ಮೆಲುಕು ಹಾಕಿದ್ದಾರೆ.

ಸೂರ್ಯ ಅವರು ಫಿಲ್ಮಿ ಕುಟುಂಬದಿಂದ ಬಂದವರು. ಅವರಿಗೆ ಅವಕಾಶ ಸುಲಭವಾಗಿ ಸಿಕ್ಕಿತ್ತು. ಅವರ ಮಾತೃಭಾಷೆ ತಮಿಳು ಆದ್ದರಿಂದ ಅವರಿಗೆ ಡೈಲಾಗ್ ಹೇಳುವುದು ಕೂಡ ಸುಲಭ ಆಗಿತ್ತು. ಆದರೆ ಜ್ಯೋತಿಕಾ ಅವರು ಪರಭಾಷೆಯವರು. ಹಾಗಿದ್ದರೂ ಕೂಡ ಅವರು ಸೂರ್ಯಗಿಂತ ಚೆನ್ನಾಗಿ ಡೈಲಾಗ್ ಕಲಿತು ಹೇಳುತ್ತಿದ್ದರು. ಆ ಸಂದರ್ಭದಲ್ಲಿ ಸೂರ್ಯ ಅವರಿಗಿಂತ ಜ್ಯೋತಿಕಾ 3 ಪಟ್ಟು ಹೆಚ್ಚು ಸಂಬಳ ಪಡೆಯುತ್ತಿದ್ದರು!

ಜ್ಯೋತಿಕಾ ಅವರು ಹೆಚ್ಚು ಸಂಬಳ ಪಡೆಯುತ್ತಿದ್ದ ಕಾಲದಲ್ಲೇ ಸೂರ್ಯ ಅವರನ್ನು ಮದುವೆ ಆದರು. ನಂತರ ಪತ್ನಿಗಿಂತಲೂ ಹೆಚ್ಚು ಸಂಬಳ ಪಡೆಯುವ ಮಟ್ಟಕ್ಕೆ ಸೂರ್ಯ ಅವರು ಬೆಳೆದರು. ಜ್ಯೋತಿಕಾ ಅವರು ಕುಟುಂಬಕ್ಕಾಗಿ ಹೆಚ್ಚು ಆದ್ಯತೆ ನೀಡಿದರು. ಬಳಿಕ ಅವರು ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಯಿತು. ಈಗ ಸಿನಿಮಾಗಳ ಆಯ್ಕೆಯಲ್ಲಿ ಜ್ಯೋತಿಕಾ ಅವರು ಚ್ಯೂಸಿ ಆಗಿದ್ದಾರೆ.

ಇದನ್ನೂ ಓದಿ: ಮೆಚ್ಚಿನ ನಟನಿಗೆ ಮೋಸ, ತಮಿಳು ನಿರ್ದೇಶಕನ ಮೇಲೆ ಸೂರ್ಯ ಅಭಿಮಾನಿಗಳು ಕಿಡಿ

ಪ್ರತಿ ಸಿನಿಮಾದಲ್ಲೂ ಸೂರ್ಯ ಅವರು ಸವಾಲಿನ ಪಾತ್ರಗಳನ್ನು ನಿಭಾಯಿಸುತ್ತಾರೆ. ಈಗ ಅವರು ‘ಕಂಗುವ’ ಸಿನಿಮಾದಲ್ಲೂ ಅಂತಹ ಒಂದು ಭಿನ್ನವಾದ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅವರ ಗೆಟಪ್ ಡಿಫರೆಂಟ್ ಆಗಿದೆ. ಈ ಸಿನಿಮಾದಲ್ಲಿ ದಿಶಾ ಪಟಾನಿ, ಬಾಬಿ ಡಿಯೋಲ್ ಮುಂತಾದವರು ನಟಿಸಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿ ಈ ಸಿನಿಮಾ ತೆರೆ ಕಾಣಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು