AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಂಗುವ’ ಸಿನಿಮಾ ಬಿಡುಗಡೆ ದಿನಾಂಕ ಬದಲು, ಕಾರಣವೇನು?

Kanaguva release date: ನಟ ಸೂರ್ಯ, ನಟಿಸಿರುವ ಭಾರಿ ಬಜೆಟ್ ಸಿನಿಮಾ ‘ಕಂಗುವ’ ಬಿಡುಗಡೆ ದಿನಾಂಕ ಈ ಹಿಂದೆಯೇ ಘೋಷಿಸಲಾಗಿತ್ತು. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.

‘ಕಂಗುವ’ ಸಿನಿಮಾ ಬಿಡುಗಡೆ ದಿನಾಂಕ ಬದಲು, ಕಾರಣವೇನು?
ಮಂಜುನಾಥ ಸಿ.
|

Updated on:Sep 22, 2024 | 6:27 PM

Share

ತಮಿಳಿನ ಸ್ಟಾರ್ ನಟ ಸೂರ್ಯ ನಟಿಸಿರುವ ಭಾರಿ ಬಜೆಟ್ ಸಿನಿಮಾ ‘ಕಂಗುವ’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಅಕ್ಟೋಬರ್ 10 ಕ್ಕೆ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಬದಲಾಯಿಸಲಾಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿದಿದ್ದರೂ ಸಹ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲು ಕಾರಣವೇನೆಂದು ತಿಳಿದು ಬಂದಿಲ್ಲ.

ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ‘ಕಂಗುವ’ ಸಿನಿಮಾ ನಿರ್ಮಾಪಕ ಜ್ಞಾನವೇಲು, ‘ಕಲ್ಕಿ’ ಸಿನಿಮಾ ಹಿಟ್ ಆಗಲೆಂದು ನಾನು ಕಾಯುತ್ತಿದ್ದೆ. ಆ ಸಿನಿಮಾ ಇದೀಗ ಉತ್ತರ ಭಾರತದಲ್ಲಿ ದೊಡ್ಡ ಹಿಟ್ ಆಗಿದೆ. ಅದರಿಂದ ನಮ್ಮ ಸಿನಿಮಾಕ್ಕೆ ಸಹಾಯ ಆಗಲಿದೆ. ಅದೇ ಕಾರಣಕ್ಕೆ ‘ಕಲ್ಕಿ’ ಸಿನಿಮಾ ಹಿಟ್ ಎನಿಸಿಕೊಂಡ ದಿನವೇ ನಮ್ಮ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆವು’ ಎಂದಿದ್ದರು. ಆದರೆ ಈಗ ಬಿಡುಗಡೆ ದಿನಾಂಕವನ್ನು ಮತ್ತೆ ಮುಂದೂಡಿದ್ದು ಏಕೆ ಎಂದು ಜ್ಞಾನವೇಲು ಹೇಳಿಲ್ಲ.

ಇದನ್ನೂ ಓದಿ:‘ಬಡವ ರಾಸ್ಕಲ್’ ಡೈರೆಕ್ಟರ್ ಈಗ ನಿರ್ಮಾಪಕ; ಭಿನ್ನ ಟೈಟಲ್ ಚಿತ್ರಕ್ಕೆ ಒಂದಾದ ಅರ್ಜುನ್ ಸೂರ್ಯ-ನಿಧಿ ಹೆಗಡೆ

ಅಕ್ಟೋಬರ್ 10 ಕ್ಕೆ ಬಿಡುಗಡೆ ಆಗಬೇಕಿದ್ದ ‘ಕಂಗುವ’ ಸಿನಿಮಾದ ಮೊದಲ ಭಾಗ ಇದೀಗ ನವೆಂಬರ್ 14 ಕ್ಕೆ ಬಿಡುಗಡೆ ಆಗಲಿದೆ. ಸುಮಾರು ಒಂದು ತಿಂಗಳ ಕಾಲ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಬೇರೆ ಕೆಲವು ದೊಡ್ಡ ಬಜೆಟ್ ಸಿನಿಮಾಗಳ ಬಿಡುಗಡೆ ಇರುವ ಕಾರಣದಿಂದ ಈ ನಿರ್ಣಯ ಮಾಡಿರುವ ಸಾಧ್ಯತೆ ಇದೆ. ನಿರ್ಮಾಪಕ ಜ್ಞಾನವೇಲು, ಬಿಡುಗಡೆ ವಿಚಾರದಲ್ಲಿ ಜಾಣತನದ ನಿರ್ಧಾರ ತೆಗೆದುಕೊಳ್ಳುವುದಾಗಿ ಈ ಮೊದಲೇ ಹೇಳಿದ್ದರು. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕ, ಒಂದು ಸಿನಿಮಾದ ಯಶಸ್ಸಿನ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಸಹ ಹೇಳಿದ್ದರು. ಹಾಗಾಗಿ ಜ್ಞಾನವೇಲು, ಯೋಚಿಸಿಯೇ ಸಿನಿಮಾ ಬಿಡುಗಡೆ ಮುಂದೂಡಿದ್ದಾರೆ ಎನ್ನಬಹುದು.

ಇನ್ನು ‘ಕಂಗುವ’ ಸಿನಿಮಾ ಪೀರಿಯಡ್ ಡ್ರಾಮಾ ಆಗಿದೆ. ವನವಾಸಿ ಮನುಷ್ಯರ ನಡುವಿನ ಹೋರಾಟ, ಯುದ್ಧದ ಕತೆಯನ್ನು ಸಿನಿಮಾ ಒಳಗೊಂಡಿದೆ. ಜೊತೆಗೆ ಆಧುನಿಕ ಕಾಲದ ಕತೆಯೂ ಸಿನಿಮಾದಲ್ಲಿದೆ. ಸೂರ್ಯ ಎದುರು ವಿಲನ್ ಆಗಿ ಬಾಲಿವುಡ್​ನ ಸನ್ನಿ ಡಿಯೋಲ್ ವಿಲನ್ ಆಗಿದ್ದಾರೆ. ಸಿನಿಮಾದಲ್ಲಿ ದಿಶಾ ಪಟಾನಿ ನಾಯಕಿ. ಶಿವ ನಿರ್ದೇಶನ ಮಾಡಿರುವ ಈ ಸಿನಿಮಾದ ಮೊದಲ ಭಾಗವಷ್ಟೆ ಈಗ ಬಿಡುಗಡೆ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:56 am, Sun, 22 September 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್