‘ಕಂಗುವ’ ಸಿನಿಮಾ ಬಿಡುಗಡೆ ದಿನಾಂಕ ಬದಲು, ಕಾರಣವೇನು?

Kanaguva release date: ನಟ ಸೂರ್ಯ, ನಟಿಸಿರುವ ಭಾರಿ ಬಜೆಟ್ ಸಿನಿಮಾ ‘ಕಂಗುವ’ ಬಿಡುಗಡೆ ದಿನಾಂಕ ಈ ಹಿಂದೆಯೇ ಘೋಷಿಸಲಾಗಿತ್ತು. ಇದೀಗ ಸಿನಿಮಾದ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.

‘ಕಂಗುವ’ ಸಿನಿಮಾ ಬಿಡುಗಡೆ ದಿನಾಂಕ ಬದಲು, ಕಾರಣವೇನು?
Follow us
|

Updated on: Sep 22, 2024 | 7:56 AM

ತಮಿಳಿನ ಸ್ಟಾರ್ ನಟ ಸೂರ್ಯ ನಟಿಸಿರುವ ಭಾರಿ ಬಜೆಟ್ ಸಿನಿಮಾ ‘ಕಂಗುವ’ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಹಿಂದೆ ಅಕ್ಟೋಬರ್ 10 ಕ್ಕೆ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಲಾಗಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಬದಲಾಯಿಸಲಾಗಿದೆ. ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿದಿದ್ದರೂ ಸಹ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲು ಕಾರಣವೇನೆಂದು ತಿಳಿದು ಬಂದಿಲ್ಲ.

ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ‘ಕಂಗುವ’ ಸಿನಿಮಾ ನಿರ್ಮಾಪಕ ಜ್ಞಾನವೇಲು, ‘ಕಲ್ಕಿ’ ಸಿನಿಮಾ ಹಿಟ್ ಆಗಲೆಂದು ನಾನು ಕಾಯುತ್ತಿದ್ದೆ. ಆ ಸಿನಿಮಾ ಇದೀಗ ಉತ್ತರ ಭಾರತದಲ್ಲಿ ದೊಡ್ಡ ಹಿಟ್ ಆಗಿದೆ. ಅದರಿಂದ ನಮ್ಮ ಸಿನಿಮಾಕ್ಕೆ ಸಹಾಯ ಆಗಲಿದೆ. ಅದೇ ಕಾರಣಕ್ಕೆ ‘ಕಲ್ಕಿ’ ಸಿನಿಮಾ ಹಿಟ್ ಎನಿಸಿಕೊಂಡ ದಿನವೇ ನಮ್ಮ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆವು’ ಎಂದಿದ್ದರು. ಆದರೆ ಈಗ ಬಿಡುಗಡೆ ದಿನಾಂಕವನ್ನು ಮತ್ತೆ ಮುಂದೂಡಿದ್ದು ಏಕೆ ಎಂದು ಜ್ಞಾನವೇಲು ಹೇಳಿಲ್ಲ.

ಇದನ್ನೂ ಓದಿ:‘ಬಡವ ರಾಸ್ಕಲ್’ ಡೈರೆಕ್ಟರ್ ಈಗ ನಿರ್ಮಾಪಕ; ಭಿನ್ನ ಟೈಟಲ್ ಚಿತ್ರಕ್ಕೆ ಒಂದಾದ ಅರ್ಜುನ್ ಸೂರ್ಯ-ನಿಧಿ ಹೆಗಡೆ

ಅಕ್ಟೋಬರ್ 10 ಕ್ಕೆ ಬಿಡುಗಡೆ ಆಗಬೇಕಿದ್ದ ‘ಕಂಗುವ’ ಸಿನಿಮಾದ ಮೊದಲ ಭಾಗ ಇದೀಗ ನವೆಂಬರ್ 14 ಕ್ಕೆ ಬಿಡುಗಡೆ ಆಗಲಿದೆ. ಸುಮಾರು ಒಂದು ತಿಂಗಳ ಕಾಲ ಸಿನಿಮಾದ ಬಿಡುಗಡೆ ಮುಂದೂಡಲಾಗಿದೆ. ಅಕ್ಟೋಬರ್ ತಿಂಗಳಲ್ಲಿ ಬೇರೆ ಕೆಲವು ದೊಡ್ಡ ಬಜೆಟ್ ಸಿನಿಮಾಗಳ ಬಿಡುಗಡೆ ಇರುವ ಕಾರಣದಿಂದ ಈ ನಿರ್ಣಯ ಮಾಡಿರುವ ಸಾಧ್ಯತೆ ಇದೆ. ನಿರ್ಮಾಪಕ ಜ್ಞಾನವೇಲು, ಬಿಡುಗಡೆ ವಿಚಾರದಲ್ಲಿ ಜಾಣತನದ ನಿರ್ಧಾರ ತೆಗೆದುಕೊಳ್ಳುವುದಾಗಿ ಈ ಮೊದಲೇ ಹೇಳಿದ್ದರು. ಜೊತೆಗೆ ಸಿನಿಮಾದ ಬಿಡುಗಡೆ ದಿನಾಂಕ, ಒಂದು ಸಿನಿಮಾದ ಯಶಸ್ಸಿನ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ ಎಂದು ಸಹ ಹೇಳಿದ್ದರು. ಹಾಗಾಗಿ ಜ್ಞಾನವೇಲು, ಯೋಚಿಸಿಯೇ ಸಿನಿಮಾ ಬಿಡುಗಡೆ ಮುಂದೂಡಿದ್ದಾರೆ ಎನ್ನಬಹುದು.

ಇನ್ನು ‘ಕಂಗುವ’ ಸಿನಿಮಾ ಪೀರಿಯಡ್ ಡ್ರಾಮಾ ಆಗಿದೆ. ವನವಾಸಿ ಮನುಷ್ಯರ ನಡುವಿನ ಹೋರಾಟ, ಯುದ್ಧದ ಕತೆಯನ್ನು ಸಿನಿಮಾ ಒಳಗೊಂಡಿದೆ. ಜೊತೆಗೆ ಆಧುನಿಕ ಕಾಲದ ಕತೆಯೂ ಸಿನಿಮಾದಲ್ಲಿದೆ. ಸೂರ್ಯ ಎದುರು ವಿಲನ್ ಆಗಿ ಬಾಲಿವುಡ್​ನ ಸನ್ನಿ ಡಿಯೋಲ್ ವಿಲನ್ ಆಗಿದ್ದಾರೆ. ಸಿನಿಮಾದಲ್ಲಿ ದಿಶಾ ಪಟಾನಿ ನಾಯಕ. ಶಿವ ನಿರ್ದೇಶನ ಮಾಡಿರುವ ಈ ಸಿನಿಮಾದ ಮೊದಲ ಭಾಗವಷ್ಟೆ ಈಗ ಬಿಡುಗಡೆ ಆಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ