AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್

ಸೂರ್ಯ ನಟನೆಯ ‘ಕಂಗುವಾ’ ಚಿತ್ರದ ಬಿಡುಗಡೆ ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಚಿತ್ರದಿಂದಾಗಿ ಮುಂದೂಡಲ್ಪಟ್ಟಿತ್ತು. ಆದರೆ, ‘ಅಮರನ್’ ಚಿತ್ರದ ಯಶಸ್ಸಿನಿಂದಾಗಿ ಮತ್ತು ಕನ್ನಡದಲ್ಲಿ ‘ಭೈರತಿ ರಣಗಲ್’ ಚಿತ್ರದ ಸ್ಪರ್ಧೆಯಿಂದಾಗಿ ಕಂಗುವಾ ಚಿತ್ರಕ್ಕೆ ಥಿಯೇಟರ್‌ಗಳು ಸಿಗುವುದು ಕಷ್ಟವಾಗಿದೆ.

‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್
‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್
ರಾಜೇಶ್ ದುಗ್ಗುಮನೆ
|

Updated on: Nov 12, 2024 | 11:25 AM

Share

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನಟ ಸೂರ್ಯ ಅಭಿಯನತದ ತಮಿಳಿನ ‘ಕಂಗುವ’ ಸಿನಿಮಾ ಅಕ್ಟೋಬರ್ 10ರಂದೇ ರಿಲೀಸ್ ಆಗಬೇಕಿತ್ತು. ಆದರೆ, ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಬಿಡುಗಡೆ ಆಗುತ್ತದೆ ಎನ್ನುವ ಕಾರಣಕ್ಕೆ ಸಿನಿಮಾ ರಿಲೀಸ್​ನ ನವೆಂಬರ್ 14ಕ್ಕೆ ಮುಂದೂಡಿಕೊಳ್ಳಲಾಗಿತ್ತು. ಈಗ ಇದು ಕೂಡ ತಂಡಕ್ಕೆ ದುಬಾರಿ ಆಗುವ ಸೂಚನೆ ಸಿಕ್ಕಿದೆ. ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕದಲ್ಲೂ ಈ ಚಿತ್ರಕ್ಕೆ ಥಿಯೇಟರ್​ಗಳು ಸಿಗೋದು ಕಷ್ಟ ಆಗುತ್ತಿದೆ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಮೇಲಿನ ಭಯದಿಂದ ‘ಕಂಗುವ’ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳಲಾಗಿತ್ತು. ಆದರೆ, ‘ವೆಟ್ಟೈಯಾನ್’ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಪಡೆಯಲಿಲ್ಲ. ಆದರೆ, ಇತ್ತೀಚೆಗೆ ರಿಲೀಸ್ ಆದ ತಮಿಳಿನ ‘ಅಮರನ್’ ಸಿನಿಮಾ ಭರ್ಜರಿ ಸಕ್ಸಸ್ ಕಾಣುತ್ತಿದೆ. ಇದರಿಂದ ‘ಕಂಗುವ’ ಚಿತ್ರಕ್ಕೆ ಥಿಯೇಟರ್ ಸಿಗೋದು ಕಷ್ಟ ಆಗುತ್ತಿದೆ.

ಶಿವಕಾರ್ತಿಕೇಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ‘ಅಮರನ್’ ಸಿನಿಮಾ ಈಗಾಗಲೇ ತಮಿಳಿನಾದ್ಯಂತ ಭರ್ಜರಿ ಯಶಸ್ಸು ಕಾಣುತ್ತಿದೆ. ಹೀಗಾಗಿ, ಈ ಚಿತ್ರವನ್ನು ಥಿಯೇಟರ್​ನಿಂದ ತೆಗೆಯಲು ಯಾರೂ ಮುಂದಾಗುತ್ತಿಲ್ಲ. ಹೀಗಾಗಿ ತಮಿಳುನಾಡಿನಲ್ಲಿ ‘ಕಂಗುವ’ ಚಿತ್ರಕ್ಕೆ ಸಿಗೋದು ಕೇವಲ ಶೇ.50 ಥಿಯೇಟರ್​ಗಳು ಮಾತ್ರ. ಕೆಲವು ಕಡೆಗಳಲ್ಲಿ ‘ಕಂಗುವ’ ಚಿತ್ರಕ್ಕೆ ಎರಡು ಶೋ ಹಾಗೂ ‘ಅಮರನ್’ ಚಿತ್ರಕ್ಕೆ ಎರಡು ಶೋ ನೀಡಲಾಗುತ್ತಿದೆ.

ಇತ್ತ ಕರ್ನಾಟಕದಲ್ಲೂ ‘ಕಂಗುವ’ ಚಿತ್ರಕ್ಕೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಹೀಗಾಗಿ, ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ.

ಇದನ್ನೂ ಓದಿ: ‘ವೆಟ್ಟೈಯಾನ್’ ಚಿತ್ರಕ್ಕೆ ರಜನಿಕಾಂತ್ ಹಾಗೂ ಅಮಿತಾಭ್ ಸಂಭಾವನೆ ಎಷ್ಟು?

ಶಿವ ಅವರು ‘ಕಂಗುವ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಸೂರ್ಯ ಅವರು ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಇವರಲ್ಲದೆ, ಬಾಬಿ ಡಿಯೋಲ್, ದಿಶಾ ಪಟಾಣಿ, ಯೋಗಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿ ಇದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಗಮನ ಸೆಳೆದಿದೆ. ಸ್ಟುಡಿಯೋ ಗ್ರೀನ್ ಹಾಗೂ ಯುವಿ ಕ್ರಿಯೇಷನ್ ಇದನ್ನು ನಿರ್ಮಾಣ ಮಾಡಿದೆ. ಬಾಬಿ ಡಿಯೋಲ್ ಅವರು ಪವರ್​ಫುಲ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್