AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್

ಸೂರ್ಯ ನಟನೆಯ ‘ಕಂಗುವಾ’ ಚಿತ್ರದ ಬಿಡುಗಡೆ ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಚಿತ್ರದಿಂದಾಗಿ ಮುಂದೂಡಲ್ಪಟ್ಟಿತ್ತು. ಆದರೆ, ‘ಅಮರನ್’ ಚಿತ್ರದ ಯಶಸ್ಸಿನಿಂದಾಗಿ ಮತ್ತು ಕನ್ನಡದಲ್ಲಿ ‘ಭೈರತಿ ರಣಗಲ್’ ಚಿತ್ರದ ಸ್ಪರ್ಧೆಯಿಂದಾಗಿ ಕಂಗುವಾ ಚಿತ್ರಕ್ಕೆ ಥಿಯೇಟರ್‌ಗಳು ಸಿಗುವುದು ಕಷ್ಟವಾಗಿದೆ.

‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್
‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್
ರಾಜೇಶ್ ದುಗ್ಗುಮನೆ
|

Updated on: Nov 12, 2024 | 11:25 AM

Share

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನಟ ಸೂರ್ಯ ಅಭಿಯನತದ ತಮಿಳಿನ ‘ಕಂಗುವ’ ಸಿನಿಮಾ ಅಕ್ಟೋಬರ್ 10ರಂದೇ ರಿಲೀಸ್ ಆಗಬೇಕಿತ್ತು. ಆದರೆ, ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಬಿಡುಗಡೆ ಆಗುತ್ತದೆ ಎನ್ನುವ ಕಾರಣಕ್ಕೆ ಸಿನಿಮಾ ರಿಲೀಸ್​ನ ನವೆಂಬರ್ 14ಕ್ಕೆ ಮುಂದೂಡಿಕೊಳ್ಳಲಾಗಿತ್ತು. ಈಗ ಇದು ಕೂಡ ತಂಡಕ್ಕೆ ದುಬಾರಿ ಆಗುವ ಸೂಚನೆ ಸಿಕ್ಕಿದೆ. ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕದಲ್ಲೂ ಈ ಚಿತ್ರಕ್ಕೆ ಥಿಯೇಟರ್​ಗಳು ಸಿಗೋದು ಕಷ್ಟ ಆಗುತ್ತಿದೆ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಮೇಲಿನ ಭಯದಿಂದ ‘ಕಂಗುವ’ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳಲಾಗಿತ್ತು. ಆದರೆ, ‘ವೆಟ್ಟೈಯಾನ್’ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಪಡೆಯಲಿಲ್ಲ. ಆದರೆ, ಇತ್ತೀಚೆಗೆ ರಿಲೀಸ್ ಆದ ತಮಿಳಿನ ‘ಅಮರನ್’ ಸಿನಿಮಾ ಭರ್ಜರಿ ಸಕ್ಸಸ್ ಕಾಣುತ್ತಿದೆ. ಇದರಿಂದ ‘ಕಂಗುವ’ ಚಿತ್ರಕ್ಕೆ ಥಿಯೇಟರ್ ಸಿಗೋದು ಕಷ್ಟ ಆಗುತ್ತಿದೆ.

ಶಿವಕಾರ್ತಿಕೇಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ‘ಅಮರನ್’ ಸಿನಿಮಾ ಈಗಾಗಲೇ ತಮಿಳಿನಾದ್ಯಂತ ಭರ್ಜರಿ ಯಶಸ್ಸು ಕಾಣುತ್ತಿದೆ. ಹೀಗಾಗಿ, ಈ ಚಿತ್ರವನ್ನು ಥಿಯೇಟರ್​ನಿಂದ ತೆಗೆಯಲು ಯಾರೂ ಮುಂದಾಗುತ್ತಿಲ್ಲ. ಹೀಗಾಗಿ ತಮಿಳುನಾಡಿನಲ್ಲಿ ‘ಕಂಗುವ’ ಚಿತ್ರಕ್ಕೆ ಸಿಗೋದು ಕೇವಲ ಶೇ.50 ಥಿಯೇಟರ್​ಗಳು ಮಾತ್ರ. ಕೆಲವು ಕಡೆಗಳಲ್ಲಿ ‘ಕಂಗುವ’ ಚಿತ್ರಕ್ಕೆ ಎರಡು ಶೋ ಹಾಗೂ ‘ಅಮರನ್’ ಚಿತ್ರಕ್ಕೆ ಎರಡು ಶೋ ನೀಡಲಾಗುತ್ತಿದೆ.

ಇತ್ತ ಕರ್ನಾಟಕದಲ್ಲೂ ‘ಕಂಗುವ’ ಚಿತ್ರಕ್ಕೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಹೀಗಾಗಿ, ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ.

ಇದನ್ನೂ ಓದಿ: ‘ವೆಟ್ಟೈಯಾನ್’ ಚಿತ್ರಕ್ಕೆ ರಜನಿಕಾಂತ್ ಹಾಗೂ ಅಮಿತಾಭ್ ಸಂಭಾವನೆ ಎಷ್ಟು?

ಶಿವ ಅವರು ‘ಕಂಗುವ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಸೂರ್ಯ ಅವರು ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಇವರಲ್ಲದೆ, ಬಾಬಿ ಡಿಯೋಲ್, ದಿಶಾ ಪಟಾಣಿ, ಯೋಗಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿ ಇದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಗಮನ ಸೆಳೆದಿದೆ. ಸ್ಟುಡಿಯೋ ಗ್ರೀನ್ ಹಾಗೂ ಯುವಿ ಕ್ರಿಯೇಷನ್ ಇದನ್ನು ನಿರ್ಮಾಣ ಮಾಡಿದೆ. ಬಾಬಿ ಡಿಯೋಲ್ ಅವರು ಪವರ್​ಫುಲ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ