‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್

ಸೂರ್ಯ ನಟನೆಯ ‘ಕಂಗುವಾ’ ಚಿತ್ರದ ಬಿಡುಗಡೆ ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಚಿತ್ರದಿಂದಾಗಿ ಮುಂದೂಡಲ್ಪಟ್ಟಿತ್ತು. ಆದರೆ, ‘ಅಮರನ್’ ಚಿತ್ರದ ಯಶಸ್ಸಿನಿಂದಾಗಿ ಮತ್ತು ಕನ್ನಡದಲ್ಲಿ ‘ಭೈರತಿ ರಣಗಲ್’ ಚಿತ್ರದ ಸ್ಪರ್ಧೆಯಿಂದಾಗಿ ಕಂಗುವಾ ಚಿತ್ರಕ್ಕೆ ಥಿಯೇಟರ್‌ಗಳು ಸಿಗುವುದು ಕಷ್ಟವಾಗಿದೆ.

‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್
‘ವೆಟ್ಟೈಯಾನ್’ ಜೊತೆ ಕ್ಲ್ಯಾಶ್ ತಪ್ಪಿಸಿಕೊಂಡ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್

Updated on: Nov 12, 2024 | 11:25 AM

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನಟ ಸೂರ್ಯ ಅಭಿಯನತದ ತಮಿಳಿನ ‘ಕಂಗುವ’ ಸಿನಿಮಾ ಅಕ್ಟೋಬರ್ 10ರಂದೇ ರಿಲೀಸ್ ಆಗಬೇಕಿತ್ತು. ಆದರೆ, ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಬಿಡುಗಡೆ ಆಗುತ್ತದೆ ಎನ್ನುವ ಕಾರಣಕ್ಕೆ ಸಿನಿಮಾ ರಿಲೀಸ್​ನ ನವೆಂಬರ್ 14ಕ್ಕೆ ಮುಂದೂಡಿಕೊಳ್ಳಲಾಗಿತ್ತು. ಈಗ ಇದು ಕೂಡ ತಂಡಕ್ಕೆ ದುಬಾರಿ ಆಗುವ ಸೂಚನೆ ಸಿಕ್ಕಿದೆ. ತಮಿಳುನಾಡು ಮಾತ್ರವಲ್ಲದೆ, ಕರ್ನಾಟಕದಲ್ಲೂ ಈ ಚಿತ್ರಕ್ಕೆ ಥಿಯೇಟರ್​ಗಳು ಸಿಗೋದು ಕಷ್ಟ ಆಗುತ್ತಿದೆ.

ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಮೇಲಿನ ಭಯದಿಂದ ‘ಕಂಗುವ’ ರಿಲೀಸ್ ದಿನಾಂಕ ಮುಂದಕ್ಕೆ ಹಾಕಿಕೊಳ್ಳಲಾಗಿತ್ತು. ಆದರೆ, ‘ವೆಟ್ಟೈಯಾನ್’ ಹೇಳಿಕೊಳ್ಳುವಂಥ ದೊಡ್ಡ ಯಶಸ್ಸು ಪಡೆಯಲಿಲ್ಲ. ಆದರೆ, ಇತ್ತೀಚೆಗೆ ರಿಲೀಸ್ ಆದ ತಮಿಳಿನ ‘ಅಮರನ್’ ಸಿನಿಮಾ ಭರ್ಜರಿ ಸಕ್ಸಸ್ ಕಾಣುತ್ತಿದೆ. ಇದರಿಂದ ‘ಕಂಗುವ’ ಚಿತ್ರಕ್ಕೆ ಥಿಯೇಟರ್ ಸಿಗೋದು ಕಷ್ಟ ಆಗುತ್ತಿದೆ.

ಶಿವಕಾರ್ತಿಕೇಯ ಹಾಗೂ ಸಾಯಿ ಪಲ್ಲವಿ ಒಟ್ಟಾಗಿ ನಟಿಸಿರುವ ‘ಅಮರನ್’ ಸಿನಿಮಾ ಈಗಾಗಲೇ ತಮಿಳಿನಾದ್ಯಂತ ಭರ್ಜರಿ ಯಶಸ್ಸು ಕಾಣುತ್ತಿದೆ. ಹೀಗಾಗಿ, ಈ ಚಿತ್ರವನ್ನು ಥಿಯೇಟರ್​ನಿಂದ ತೆಗೆಯಲು ಯಾರೂ ಮುಂದಾಗುತ್ತಿಲ್ಲ. ಹೀಗಾಗಿ ತಮಿಳುನಾಡಿನಲ್ಲಿ ‘ಕಂಗುವ’ ಚಿತ್ರಕ್ಕೆ ಸಿಗೋದು ಕೇವಲ ಶೇ.50 ಥಿಯೇಟರ್​ಗಳು ಮಾತ್ರ. ಕೆಲವು ಕಡೆಗಳಲ್ಲಿ ‘ಕಂಗುವ’ ಚಿತ್ರಕ್ಕೆ ಎರಡು ಶೋ ಹಾಗೂ ‘ಅಮರನ್’ ಚಿತ್ರಕ್ಕೆ ಎರಡು ಶೋ ನೀಡಲಾಗುತ್ತಿದೆ.

ಇತ್ತ ಕರ್ನಾಟಕದಲ್ಲೂ ‘ಕಂಗುವ’ ಚಿತ್ರಕ್ಕೆ ಭರ್ಜರಿ ಸ್ಪರ್ಧೆ ಏರ್ಪಟ್ಟಿದೆ. ಶಿವರಾಜ್​ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ನವೆಂಬರ್ 15ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಇದೆ. ಹೀಗಾಗಿ, ಭರ್ಜರಿ ಸ್ಪರ್ಧೆ ಏರ್ಪಡುತ್ತಿದೆ.

ಇದನ್ನೂ ಓದಿ: ‘ವೆಟ್ಟೈಯಾನ್’ ಚಿತ್ರಕ್ಕೆ ರಜನಿಕಾಂತ್ ಹಾಗೂ ಅಮಿತಾಭ್ ಸಂಭಾವನೆ ಎಷ್ಟು?

ಶಿವ ಅವರು ‘ಕಂಗುವ’ ಚಿತ್ರ ನಿರ್ದೇಶನ ಮಾಡಿದ್ದಾರೆ. ಸೂರ್ಯ ಅವರು ದ್ವಿಪಾತ್ರದಲ್ಲಿ ನಟಿಸಿದ್ದಾರೆ. ಇವರಲ್ಲದೆ, ಬಾಬಿ ಡಿಯೋಲ್, ದಿಶಾ ಪಟಾಣಿ, ಯೋಗಿ ಬಾಬು ಮೊದಲಾದವರು ಪಾತ್ರವರ್ಗದಲ್ಲಿ ಇದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ರಿಲೀಸ್ ಆಗಿ ಗಮನ ಸೆಳೆದಿದೆ. ಸ್ಟುಡಿಯೋ ಗ್ರೀನ್ ಹಾಗೂ ಯುವಿ ಕ್ರಿಯೇಷನ್ ಇದನ್ನು ನಿರ್ಮಾಣ ಮಾಡಿದೆ. ಬಾಬಿ ಡಿಯೋಲ್ ಅವರು ಪವರ್​ಫುಲ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us