AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ರಿಲೀಸ್ ಆಗ್ತಿದೆ ಸೂರ್ಯ ಸಿನಿಮಾ; ಈಗಾದ್ರೂ ಸಿಗುತ್ತಾ ಗೆಲುವು?

ತಮಿಳು ನಟ ಸೂರ್ಯ ಅವರ 'ಕರುಪ್ಪು' ಸಿನಿಮಾ ಹಲವು ವಿಳಂಬಗಳ ನಂತರ ಮೇ 15 ರಂದು ಬಿಡುಗಡೆಯಾಗಲಿದೆ. 2020ರ 'ಸೂರರೈ ಪೊಟ್ರು' ನಂತರ ಅವರಿಗೆ ದೊಡ್ಡ ಗೆಲುವು ಸಿಕ್ಕಿಲ್ಲ. RJ ಬಾಲಾಜಿ ನಿರ್ದೇಶನದ ಈ ಚಿತ್ರ ಸೂರ್ಯ ಅವರಿಗೆ ಬಾಕ್ಸ್ ಆಫೀಸ್ ಯಶಸ್ಸು ತರಲಿದೆ ಎಂಬ ನಿರೀಕ್ಷೆಯಿದೆ. ಈ ಮೂಲಕ ಅವರು ತಮ್ಮ ಹಿಂದಿನ ವೈಭವಕ್ಕೆ ಮರಳಲು ಅಭಿಮಾನಿಗಳು ಕಾಯುತ್ತಿದ್ದಾರೆ.

ಕೊನೆಗೂ ರಿಲೀಸ್ ಆಗ್ತಿದೆ ಸೂರ್ಯ ಸಿನಿಮಾ; ಈಗಾದ್ರೂ ಸಿಗುತ್ತಾ ಗೆಲುವು?
ಕರುಪ್ಪು
ರಾಜೇಶ್ ದುಗ್ಗುಮನೆ
|

Updated on: Mar 19, 2026 | 2:53 PM

Share

ತಮಿಳು ನಟ ಸೂರ್ಯ (Suriya) ಅವರು ಇತ್ತೀಚೆಗೆ ದೊಡ್ಡ ಗೆಲುವು ಕಂಡಿಲ್ಲ. ಅವರ ನಟನೆಯ ‘ಕರುಪ್ಪು’ ಚಿತ್ರ ಹಲವು ಸಮಯದಿಂದ ಮುಂದಕ್ಕೆ ಹೋಗುತ್ತಲೇ ಇತ್ತು. ಕೊನೆಗೂ ಅದಕ್ಕೆ ಬಿಡುಗಡೆ ಭಾಗ್ಯ ಸಿಕ್ಕಿದೆ. ‘ಕರುಪ್ಪು’ ಸಿನಿಮಾ ಮೇ 15ರಂದು ತೆರೆಗೆ ಬರುತ್ತಿದೆ. ಈಗ ಹೊಸ ಪೋಸ್ಟರ್ ಹಂಚಿಕೊಂಡು ಸಿನಿಮಾ ರಿಲೀಸ್ ದಿನಾಂಕವನ್ನು ರಿವೀಲ್ ಮಾಡಲಾಗಿದೆ. ಇದು ಅವರ ಅಭಿಮಾನಿಗಳ ಖುಷಿಗೆ ಕಾರಣ ಆಗಿದೆ.

2020ರಲ್ಲಿ ರಿಲೀಸ್ ಆದ ಸೂರ್ಯ ನಟನೆಯ ‘ಸೂರರೈ ಪೊಟ್ರು’ ಸಿನಿಮಾ ಮೆಚ್ಚುಗೆ ಪಡೆಯಿತು. ಇದಾದ ಬಳಿಕ ಅವರ ನಟನೆಯ ಯಾವ ಚಿತ್ರವೂ ಗೆದ್ದಿಲ್ಲ. ಹೀಗಾಗಿ ಅವರಿಗೆ ಒಂದು ದೊಡ್ಡ ಗೆಲುವಿನ ಅವಶ್ಯಕತೆ ಇದೆ. ಇದಕ್ಕಾಗಿ ಫ್ಯಾನ್ಸ್ ಕಾಯುತ್ತಿದ್ದಾರೆ. ‘ಕರುಪ್ಪು’ ಚಿತ್ರದ ಮೂಲಕ ಅವರಿಗೆ ಗೆಲುವು ಸಿಗುತ್ತದೆಯೇ ಎಂಬುದು ಸದ್ಯದ ಪ್ರಶ್ನೆ.ಈ ಸಿನಿಮಾ 2024ರಲ್ಲೇ ಘೋಷಣೆ ಆಗಿದೆ.

ಕಾಲಿವುಡ್​​ನಲ್ಲಿ ಸೂರ್ಯ ಅವರ ಹೈಪ್ ಕಡಿಮೆ ಆಗಿದೆ ಎಂಬ ಮಾತಿದೆ. ಈಗ ‘ಕರುಪ್ಪು’ ಸಿನಿಮಾ ಮೂಲಕ ಅವರು ಕಂಬ್ಯಾಕ್ ಮಾಡಿದರೆ ಬದಲಾವಣೆ ನಿರೀಕ್ಷಿಸಬಹುದು. ಆರ್​​ಜೆ ಬಾಲಾಜಿ ಅವರು ‘ಕರುಪ್ಪು’ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಪ್ರಕಾಶ್ ಬಾಬು ಹಾಗೂ ಎಸ್​​ಆರ್​ ಪ್ರಭು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅಶ್ವಿನ್ ರವಿಚಂದ್ರನ್, ರಾಹುಲ್ ರಾಜ್, ಗೋಪಿ ಕೃಷ್ಣನ್ ಮೊದಲಾದವರು ಸಿನಿಮಾಗೆ ಚಿತ್ರಕಥೆ ಬರೆದಿದ್ದಾರೆ. ಸಾಯಿ ಅಭಯಂಕರ್ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

ಇದನ್ನೂ ಓದಿ: ಹೊಳಪು ಕಳೆದುಕೊಂಡ ಸೂರ್ಯ? ಕೈಕೊಟ್ಟ ಮತ್ತೊಬ್ಬ ಸ್ಟಾರ್ ನಿರ್ದೇಶಕ ‘ಕರುಪ್ಪು’ ಸಿನಿಮಾ ರಿಲೀಸ್ ಆದ 20 ದಿನದ ಒಳಗೆ ‘ಟಾಕ್ಸಿಕ್’ ಸಿನಿಮಾ ತೆರೆಗೆ ಬರಲಿದೆ. ಹೀಗಾಗಿ, ಸಿನಿಮಾಗೆ ಸಿಕ್ಕ ಅವಧಿ ತುಂಬಾನೇ ಕಡಿಮೆ. ಅಷ್ಟು ಸಮಯದ ಒಳಗೆ ‘ಕರುಪ್ಪು’ ಚಿತ್ರ ಹಣವನ್ನು ಬಾಚಿಕೊಳ್ಳುವ ಅಗತ್ಯವಿದೆ. ಸೂರ್ಯ ಅವರ ಜೊತೆ ಲೋಕೇಶ್ ಕನಗರಾಜ್ ಸಿನಿಮಾ ಮಾಡಬೇಕಿತ್ತು. ಅದು ಸಾಧ್ಯವಾಗಿಲ್ಲ. ವೆಟ್ರಿಮಾರನ್ ಜೊತೆ ಕೂಡ ಸೂರ್ಯ ಚಿತ್ರ ಮಾಡಬೇಕಿತ್ತು. ಅದು ಕೂಡ ಸಾಧ್ಯವಾಗಿಲ್ಲ. ಈಗ ‘ಕರುಪ್ಪು’ ಸಿನಿಮಾ ವಿಳಂಬ ಆಗಿತ್ತು. ಕೊನೆಗೂ ಚಿತ್ರ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ