AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?

Sushant Singh Rajput: ಸುಶಾಂತ್​ ಸಿಂಗ್​ ಸಾಯುವುದಕ್ಕೂ ಮುನ್ನ ಎರಡು ಗಂಟೆ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರಂತೆ. ಯಾವಯಾವ ವೆಬ್​ಸೈಟ್​ಗಳಲ್ಲಿ ತಮ್ಮ ಬಗ್ಗೆ ಯಾವ ರೀತಿಯ ಸುದ್ದಿ ಪ್ರಕಟಿಸಿದ್ದಾರೆ ಎಂಬುದನ್ನು ಅವರು ನೋಡಿದ್ದರಂತೆ.

SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?
ಸುಶಾಂತ್ ಸಿಂಗ್ ರಜಪೂತ್
ರಾಜೇಶ್ ದುಗ್ಗುಮನೆ
| Edited By: |

Updated on:Jun 14, 2021 | 9:44 AM

Share

ಸುಶಾಂತ್​ ಸಿಂಗ್​ ರಜಪೂತ್​ ನಮ್ಮನ್ನು ಅಗಲಿ ಇಂದಿಗೆ (ಜೂನ್​ 14) ಒಂದು ವರ್ಷ ಕಳೆದಿದೆ. ಲಕ್ಷಾಂತರ ಅಭಿಮಾನಿಗಳನ್ನು ಸುಶಾಂತ್​ ಬಿಟ್ಟು ಹೋಗಿದ್ದಾರೆ. ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ತನಿಖೆ ಪ್ರಗತಿಯಲ್ಲಿದೆ. ಇನ್ನು, ಅವರು ಸಾವಿಗೂ ಮೊದಲು ತಮ್ಮ ಹೆಸರನ್ನೇ ತಾವು ಗೂಗಲ್​ ಮಾಡಿಕೊಂಡಿದ್ದರಂತೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸುಶಾಂತ್​ ಸಿಂಗ್ ಅವರ ಶವ ಬಾಂದ್ರಾ ಅಪಾರ್ಟ್​ಮೆಂಟ್​ನಲ್ಲಿ ಜೂನ್​ 14ರಂದು ಪತ್ತೆ ಆಗಿತ್ತು. ಅವರು ಮೃತಪಟ್ಟ ನಂತರದಲ್ಲಿ ಸಾಮಾಜಿಕ ಜಾಲತಾಣದಲ್ಲಿ, ಸುದ್ದಿ ವಾಹಿನಿಗಳಲ್ಲಿ ಸಾಕಷ್ಟು ವಿಚಾರಗಳು ಹರಿದಾಡಿದ್ದವು. ಇದರಲ್ಲಿ ಸುಶಾಂತ್​ ಜೂನ್​ 13ರ ರಾತ್ರಿ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರು ಎಂಬುದು ಕೂಡ ಒಂದಾಗಿತ್ತು.

ಸುಶಾಂತ್​ ಸಿಂಗ್​ ಸಾಯುವುದಕ್ಕೂ ಮುನ್ನ ಎರಡು ಗಂಟೆ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರಂತೆ. ಯಾವಯಾವ ವೆಬ್​ಸೈಟ್​ಗಳಲ್ಲಿ ತಮ್ಮ ಬಗ್ಗೆ ಯಾವ ರೀತಿಯ ಸುದ್ದಿ ಪ್ರಕಟಿಸಿದ್ದಾರೆ ಎಂಬುದನ್ನು ಅವರು ನೋಡಿದ್ದರಂತೆ. ಹೀಗೊಂದು ವಿಚಾರ ವೈರಲ್​ ಆಗಿತ್ತು. ಆದರೆ, ನಂತರ ಆಗಿದ್ದೇ ಬೇರೆ.

ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರದ್ದು ಕೊಲೆ ಎನ್ನುವ ಬಗ್ಗೆ ಚರ್ಚೆ ಜೋರಾಯಿತು. ಸುಶಾಂತ್​ ಸಾವಿಗೆ ಬಾಲಿವುಡ್​ ದಿಗ್ಗಜರೇ ಕಾರಣ ಎನ್ನುವ ಮಾತು ಕೇಳಿ ಬಂತು. ಆರಂಭದಲ್ಲಿ ಈ ಪ್ರಕರಣವನ್ನು ಮುಂಬೈ ಪೊಲೀಸರು ತೆಗೆದುಕೊಂಡಿದ್ದರು. ಸದ್ಯ, ಸಿಬಿಐ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಸುಶಾಂತ್​ ಸಿಂಗ್ ರಜಪೂತ್​ ಅವರನ್ನು ಇಂದು ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನೆನೆಯುತ್ತಿದ್ದಾರೆ. ಅವರ ಫೋಟೋ, ಸಿನಿಮಾದ ಡೈಲಾಗ್​, ಅವರ ನಟನೆಯ ಚಿತ್ರದ ಕ್ಲಿಪ್​ಗಳನ್ನು ಹಂಚಿಕೊಂಡು ಸುಶಾಂತ್​ ಅವರ ನೆನಪನ್ನು ಮಾಡಿಕೊಳ್ಳುತ್ತಿದ್ದಾರೆ. ಸುಶಾಂತ್​ ನಮ್ಮನ್ನು ಬಿಟ್ಟು ಹೋದರೂ, ಅವರ ಒಳ್ಳೆತನ ನಮ್ಮನ್ನೊಂದಿಗೆ ಇರುತ್ತದೆ ಅನ್ನೋದು ಅನೇಕರ ಭಾವನೆ.

ಇದನ್ನೂ ಓದಿ:

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

Published On - 7:17 am, Mon, 14 June 21

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ