SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?

Sushant Singh Rajput: ಸುಶಾಂತ್​ ಸಿಂಗ್​ ಸಾಯುವುದಕ್ಕೂ ಮುನ್ನ ಎರಡು ಗಂಟೆ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರಂತೆ. ಯಾವಯಾವ ವೆಬ್​ಸೈಟ್​ಗಳಲ್ಲಿ ತಮ್ಮ ಬಗ್ಗೆ ಯಾವ ರೀತಿಯ ಸುದ್ದಿ ಪ್ರಕಟಿಸಿದ್ದಾರೆ ಎಂಬುದನ್ನು ಅವರು ನೋಡಿದ್ದರಂತೆ.

SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?
ಸುಶಾಂತ್ ಸಿಂಗ್ ರಜಪೂತ್
Follow us
| Updated By: Digi Tech Desk

Updated on:Jun 14, 2021 | 9:44 AM

ಸುಶಾಂತ್​ ಸಿಂಗ್​ ರಜಪೂತ್​ ನಮ್ಮನ್ನು ಅಗಲಿ ಇಂದಿಗೆ (ಜೂನ್​ 14) ಒಂದು ವರ್ಷ ಕಳೆದಿದೆ. ಲಕ್ಷಾಂತರ ಅಭಿಮಾನಿಗಳನ್ನು ಸುಶಾಂತ್​ ಬಿಟ್ಟು ಹೋಗಿದ್ದಾರೆ. ಅವರದ್ದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವ ತನಿಖೆ ಪ್ರಗತಿಯಲ್ಲಿದೆ. ಇನ್ನು, ಅವರು ಸಾವಿಗೂ ಮೊದಲು ತಮ್ಮ ಹೆಸರನ್ನೇ ತಾವು ಗೂಗಲ್​ ಮಾಡಿಕೊಂಡಿದ್ದರಂತೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಸುಶಾಂತ್​ ಸಿಂಗ್ ಅವರ ಶವ ಬಾಂದ್ರಾ ಅಪಾರ್ಟ್​ಮೆಂಟ್​ನಲ್ಲಿ ಜೂನ್​ 14ರಂದು ಪತ್ತೆ ಆಗಿತ್ತು. ಅವರು ಮೃತಪಟ್ಟ ನಂತರದಲ್ಲಿ ಸಾಮಾಜಿಕ ಜಾಲತಾಣದಲ್ಲಿ, ಸುದ್ದಿ ವಾಹಿನಿಗಳಲ್ಲಿ ಸಾಕಷ್ಟು ವಿಚಾರಗಳು ಹರಿದಾಡಿದ್ದವು. ಇದರಲ್ಲಿ ಸುಶಾಂತ್​ ಜೂನ್​ 13ರ ರಾತ್ರಿ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರು ಎಂಬುದು ಕೂಡ ಒಂದಾಗಿತ್ತು.

ಸುಶಾಂತ್​ ಸಿಂಗ್​ ಸಾಯುವುದಕ್ಕೂ ಮುನ್ನ ಎರಡು ಗಂಟೆ ತಮ್ಮ ಹೆಸರನ್ನು ಸರ್ಚ್​ ಮಾಡಿದ್ದರಂತೆ. ಯಾವಯಾವ ವೆಬ್​ಸೈಟ್​ಗಳಲ್ಲಿ ತಮ್ಮ ಬಗ್ಗೆ ಯಾವ ರೀತಿಯ ಸುದ್ದಿ ಪ್ರಕಟಿಸಿದ್ದಾರೆ ಎಂಬುದನ್ನು ಅವರು ನೋಡಿದ್ದರಂತೆ. ಹೀಗೊಂದು ವಿಚಾರ ವೈರಲ್​ ಆಗಿತ್ತು. ಆದರೆ, ನಂತರ ಆಗಿದ್ದೇ ಬೇರೆ.

ಸುಶಾಂತ್​ ಸಿಂಗ್​ ಆತ್ಮಹತ್ಯೆ ಮಾಡಿಕೊಂಡಿಲ್ಲ. ಅವರದ್ದು ಕೊಲೆ ಎನ್ನುವ ಬಗ್ಗೆ ಚರ್ಚೆ ಜೋರಾಯಿತು. ಸುಶಾಂತ್​ ಸಾವಿಗೆ ಬಾಲಿವುಡ್​ ದಿಗ್ಗಜರೇ ಕಾರಣ ಎನ್ನುವ ಮಾತು ಕೇಳಿ ಬಂತು. ಆರಂಭದಲ್ಲಿ ಈ ಪ್ರಕರಣವನ್ನು ಮುಂಬೈ ಪೊಲೀಸರು ತೆಗೆದುಕೊಂಡಿದ್ದರು. ಸದ್ಯ, ಸಿಬಿಐ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಸುಶಾಂತ್​ ಸಿಂಗ್ ರಜಪೂತ್​ ಅವರನ್ನು ಇಂದು ಅಭಿಮಾನಿಗಳು ಹಾಗೂ ಸೆಲೆಬ್ರಿಟಿಗಳು ನೆನೆಯುತ್ತಿದ್ದಾರೆ. ಅವರ ಫೋಟೋ, ಸಿನಿಮಾದ ಡೈಲಾಗ್​, ಅವರ ನಟನೆಯ ಚಿತ್ರದ ಕ್ಲಿಪ್​ಗಳನ್ನು ಹಂಚಿಕೊಂಡು ಸುಶಾಂತ್​ ಅವರ ನೆನಪನ್ನು ಮಾಡಿಕೊಳ್ಳುತ್ತಿದ್ದಾರೆ. ಸುಶಾಂತ್​ ನಮ್ಮನ್ನು ಬಿಟ್ಟು ಹೋದರೂ, ಅವರ ಒಳ್ಳೆತನ ನಮ್ಮನ್ನೊಂದಿಗೆ ಇರುತ್ತದೆ ಅನ್ನೋದು ಅನೇಕರ ಭಾವನೆ.

ಇದನ್ನೂ ಓದಿ:

ಬಾಲಿವುಡ್​ನಲ್ಲಿ ಸ್ಟಾರ್​ ಆದಮೇಲೂ ಸುಶಾಂತ್​ ಧಾರಾವಾಹಿಯಲ್ಲಿ ನಟಿಸಬೇಕಾಯಿತು; ಕಾರಣ ಏನು?

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

Published On - 7:17 am, Mon, 14 June 21

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ