SSR Case: ಸಾಯುವುದಕ್ಕೂ ಮುನ್ನ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದ ಸುಶಾಂತ್; ಅವರು ಯೋಚಿಸಿದ್ದೇನು?

Sushant Singh Rajput Death Anniversary: ಸುಶಾಂತ್ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟವರು. ಅವರಿಗೆ ಸಿನಿಮಾ ರಂಗದಲ್ಲಿ ಯಶಸ್ಸು ಕೂಡ ಸಿಕ್ಕಿತ್ತು. ಅದ್ಭುತ ನಟನೆ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು.

SSR Case: ಸಾಯುವುದಕ್ಕೂ ಮುನ್ನ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದ ಸುಶಾಂತ್; ಅವರು ಯೋಚಿಸಿದ್ದೇನು?
ಸುಶಾಂತ್​ ಸಿಂಗ್​ ರಜಪೂತ್​
Follow us
| Updated By: ಮದನ್​ ಕುಮಾರ್​

Updated on: Jun 13, 2021 | 7:28 AM

ಸುಶಾಂತ್ ಸಿಂಗ್ ರಜಪೂತ್ ನಿಧನರಾಗಿ ಮೇ 14ಕ್ಕೆ ಒಂದು ವರ್ಷ ಆಗಲಿದೆ. ಅವರದು ಆತ್ಮಹತ್ಯೆಯೋ ಅಥವಾ ಸಾವಿಗೆ ಬೇರೆ ಏನಾದರೂ ಕಾರಣ ಇದೆಯೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಅಚ್ಚರಿ ಎಂದರೆ, ಸಾಯುವುದಕ್ಕೂ ಮೊದಲೇ ಸುಶಾಂತ್ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದರಂತೆ. ಈ ವಿಚಾರ ಈಗ ಹೊರಬಿದ್ದಿದೆ. ಸುಶಾಂತ್ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟವರು. ಅವರಿಗೆ ಸಿನಿಮಾ ರಂಗದಲ್ಲಿ ಯಶಸ್ಸು ಕೂಡ ಸಿಕ್ಕಿತ್ತು. ಅದ್ಭುತ ನಟನೆ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಒಂದು ಹಂತದಲ್ಲಿ ಅವರು ನಟನೆ ತೊರೆಯಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದರಂತೆ. ಇದಕ್ಕೆ ಕಾರಣವೂ ಇದೆ.

ಸುಶಾಂತ್ ವಿಜ್ಞಾನಿ ಆಗಬೇಕೆಂದು ಕನಸು ಕಂಡಿದ್ದರಂತೆ. ನಿರ್ದೇಶಕ ರುಮಿ ಜಫ್ರಾ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ‘ಸುಶಾಂತ್ ವಿಜ್ಞಾನಿ ಆಗಬೇಕು ಎಂದುಕೊಂಡಿದ್ದರು. ಒಂದಷ್ಟು ಹಣವನ್ನು ಅದಕ್ಕೆ ಹೂಡಿಕೆ ಮಾಡಿ ಲೋನಾವಾಲಾದಲ್ಲಿರುವ ಅವರ ಮನೆಗೆ ತೆರಳಿ ಒಬ್ಬಂಟಿಯಾಗಿರುವ ಉದ್ದೇಶ ಅವರದ್ದಾಗಿತ್ತು’ ಎಂದಿದ್ದಾರೆ ಅವರು.

‘ಸುಶಾಂತ್ ನನ್ನ ಬಳಿ ಖಿನ್ನತೆ ಬಗ್ಗೆ ಹೇಳಿಕೊಂಡಿದ್ದರು. ಆದರೆ, ನಾನು ಎಂದಿಗೂ ಅದರ ಹಿಂದಿನ ಕಾರಣ ಕೇಳಿಲ್ಲ. ಅವರನ್ನು ಚಿಯರಪ್ ಮಾಡೋಕೆ ಪ್ರಯತ್ನಿಸುತ್ತಿದ್ದೆ. ಆದರೆ, ಅವರು ನಿಧನರಾದರು. ನನ್ನ ಮುಂದಿನ ಸಿನಿಮಾದಲ್ಲಿ ಸುಶಾಂತ್ ಹಾಗೂ ರಿಯಾ ಒಟ್ಟಾಗಿ ನಟಿಸಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ’ ಎಂದಿದ್ದಾರೆ.

ಸುಶಾಂತ್ ಸಿಂಗ್ ‘ಕೈ ಪೊ ಚೆ’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ‘ಪಿಕೆ’, ‘ಎಂ.ಎಸ್ ಧೋನಿ: ದಿ ಅನ್ಟೋಲ್ಡ್ ಸ್ಟೋರಿ’ ಅಂತಹ ಹಿಟ್ ಚಿತ್ರಗಳಲ್ಲಿ ಸುಶಾಂತ್ ನಟಿಸಿದ್ದರು. ‘ದಿಲ್ ಬೇಚಾರಾ’ ಅವರ ನಟನೆಯ ಕೊನೆಯ ಸಿನಿಮಾ. ಸುಶಾಂತ್ ಸಾವಿನ ನಂತರದಲ್ಲಿ ಒಟಿಟಿಯಲ್ಲಿ ರಿಲೀಸ್ ಆದ ಈ ಚಿತ್ರ ಮೆಚ್ಚುಗೆ ಪಡೆದುಕೊಂಡಿತ್ತು. ಸುಶಾಂತ್ ಕಳೆದ ಜೂನ್ 14ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಫ್ಲ್ಯಾಟ್​ನಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಶವ ಸಿಕ್ಕಿತ್ತು. ಸದ್ಯ, ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ:

ಸುಶಾಂತ್​ ಸಾವಿನ ಘಟನೆ ಆಧಾರಿತ ಸಿನಿಮಾ ಟ್ರೇಲರ್ ರಿಲೀಸ್​​; ಅಭಿಮಾನಿಗಳಿಗೆ ಶಾಕ್​ ನೀಡಿದ ಡೈಲಾಗ್​​ಗಳು 

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್