AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSR Case: ಸಾಯುವುದಕ್ಕೂ ಮುನ್ನ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದ ಸುಶಾಂತ್; ಅವರು ಯೋಚಿಸಿದ್ದೇನು?

Sushant Singh Rajput Death Anniversary: ಸುಶಾಂತ್ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟವರು. ಅವರಿಗೆ ಸಿನಿಮಾ ರಂಗದಲ್ಲಿ ಯಶಸ್ಸು ಕೂಡ ಸಿಕ್ಕಿತ್ತು. ಅದ್ಭುತ ನಟನೆ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು.

SSR Case: ಸಾಯುವುದಕ್ಕೂ ಮುನ್ನ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದ ಸುಶಾಂತ್; ಅವರು ಯೋಚಿಸಿದ್ದೇನು?
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on: Jun 13, 2021 | 7:28 AM

Share

ಸುಶಾಂತ್ ಸಿಂಗ್ ರಜಪೂತ್ ನಿಧನರಾಗಿ ಮೇ 14ಕ್ಕೆ ಒಂದು ವರ್ಷ ಆಗಲಿದೆ. ಅವರದು ಆತ್ಮಹತ್ಯೆಯೋ ಅಥವಾ ಸಾವಿಗೆ ಬೇರೆ ಏನಾದರೂ ಕಾರಣ ಇದೆಯೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಅಚ್ಚರಿ ಎಂದರೆ, ಸಾಯುವುದಕ್ಕೂ ಮೊದಲೇ ಸುಶಾಂತ್ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದರಂತೆ. ಈ ವಿಚಾರ ಈಗ ಹೊರಬಿದ್ದಿದೆ. ಸುಶಾಂತ್ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟವರು. ಅವರಿಗೆ ಸಿನಿಮಾ ರಂಗದಲ್ಲಿ ಯಶಸ್ಸು ಕೂಡ ಸಿಕ್ಕಿತ್ತು. ಅದ್ಭುತ ನಟನೆ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಒಂದು ಹಂತದಲ್ಲಿ ಅವರು ನಟನೆ ತೊರೆಯಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದರಂತೆ. ಇದಕ್ಕೆ ಕಾರಣವೂ ಇದೆ.

ಸುಶಾಂತ್ ವಿಜ್ಞಾನಿ ಆಗಬೇಕೆಂದು ಕನಸು ಕಂಡಿದ್ದರಂತೆ. ನಿರ್ದೇಶಕ ರುಮಿ ಜಫ್ರಾ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ‘ಸುಶಾಂತ್ ವಿಜ್ಞಾನಿ ಆಗಬೇಕು ಎಂದುಕೊಂಡಿದ್ದರು. ಒಂದಷ್ಟು ಹಣವನ್ನು ಅದಕ್ಕೆ ಹೂಡಿಕೆ ಮಾಡಿ ಲೋನಾವಾಲಾದಲ್ಲಿರುವ ಅವರ ಮನೆಗೆ ತೆರಳಿ ಒಬ್ಬಂಟಿಯಾಗಿರುವ ಉದ್ದೇಶ ಅವರದ್ದಾಗಿತ್ತು’ ಎಂದಿದ್ದಾರೆ ಅವರು.

‘ಸುಶಾಂತ್ ನನ್ನ ಬಳಿ ಖಿನ್ನತೆ ಬಗ್ಗೆ ಹೇಳಿಕೊಂಡಿದ್ದರು. ಆದರೆ, ನಾನು ಎಂದಿಗೂ ಅದರ ಹಿಂದಿನ ಕಾರಣ ಕೇಳಿಲ್ಲ. ಅವರನ್ನು ಚಿಯರಪ್ ಮಾಡೋಕೆ ಪ್ರಯತ್ನಿಸುತ್ತಿದ್ದೆ. ಆದರೆ, ಅವರು ನಿಧನರಾದರು. ನನ್ನ ಮುಂದಿನ ಸಿನಿಮಾದಲ್ಲಿ ಸುಶಾಂತ್ ಹಾಗೂ ರಿಯಾ ಒಟ್ಟಾಗಿ ನಟಿಸಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ’ ಎಂದಿದ್ದಾರೆ.

ಸುಶಾಂತ್ ಸಿಂಗ್ ‘ಕೈ ಪೊ ಚೆ’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ‘ಪಿಕೆ’, ‘ಎಂ.ಎಸ್ ಧೋನಿ: ದಿ ಅನ್ಟೋಲ್ಡ್ ಸ್ಟೋರಿ’ ಅಂತಹ ಹಿಟ್ ಚಿತ್ರಗಳಲ್ಲಿ ಸುಶಾಂತ್ ನಟಿಸಿದ್ದರು. ‘ದಿಲ್ ಬೇಚಾರಾ’ ಅವರ ನಟನೆಯ ಕೊನೆಯ ಸಿನಿಮಾ. ಸುಶಾಂತ್ ಸಾವಿನ ನಂತರದಲ್ಲಿ ಒಟಿಟಿಯಲ್ಲಿ ರಿಲೀಸ್ ಆದ ಈ ಚಿತ್ರ ಮೆಚ್ಚುಗೆ ಪಡೆದುಕೊಂಡಿತ್ತು. ಸುಶಾಂತ್ ಕಳೆದ ಜೂನ್ 14ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಫ್ಲ್ಯಾಟ್​ನಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಶವ ಸಿಕ್ಕಿತ್ತು. ಸದ್ಯ, ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ:

ಸುಶಾಂತ್​ ಸಾವಿನ ಘಟನೆ ಆಧಾರಿತ ಸಿನಿಮಾ ಟ್ರೇಲರ್ ರಿಲೀಸ್​​; ಅಭಿಮಾನಿಗಳಿಗೆ ಶಾಕ್​ ನೀಡಿದ ಡೈಲಾಗ್​​ಗಳು 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!