AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್ ಸಿಂಗ್ ರಜಪೂತ್ ಬಯೋಪಿಕ್​ಗೆ ವಿಘ್ನ; ಅಡ್ಡಗಾಲು ಹಾಕಿದ ನಟನ ತಂದೆ

ಸುಶಾಂತ್​ ಸಿಂಗ್​ ರಜಪೂತ್​ ಜೀವನಾಧಾರಿತ ಸಿನಿಮಾ ಮಾಡಲು ಸಕಲ ತಯಾರಿ ನಡೆದಿತ್ತು. ಆದರೆ ಈಗ ಸುಶಾಂತ್​​ ತಂದೆ ತಕರಾರು ತೆಗೆದಿರುವುದರಿಂದ ಆ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕುವುದು ಅನಿವಾರ್ಯ ಆಗಿದೆ.

ಸುಶಾಂತ್ ಸಿಂಗ್ ರಜಪೂತ್ ಬಯೋಪಿಕ್​ಗೆ ವಿಘ್ನ; ಅಡ್ಡಗಾಲು ಹಾಕಿದ ನಟನ ತಂದೆ
ಸುಶಾಂತ್​ ಸಿಂಗ್​ ರಜಪೂತ್​
ಮದನ್​ ಕುಮಾರ್​
|

Updated on: Apr 20, 2021 | 3:07 PM

Share

2020ರ ಜೂನ್​ 14ರಂದು ನಟ ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದರು. ಅಂದಿನಿಂದ ಇಂದಿನವರೆಗೂ ಅವರ ಸಾವಿನ ರಹಸ್ಯ ಬಯಲಾಗಿಲ್ಲ. ಕೆಲವರು ಅದನ್ನು ಕೊಲೆ ಎನ್ನುತ್ತಾರೆ. ಮತ್ತೆ ಕೆಲವರು ಆತ್ಮಹತ್ಯೆ ಎನ್ನುತ್ತಾರೆ. ಸಿಬಿಐ ಅಧಿಕಾರಿಗಳ ತನಿಖೆ ಇನ್ನೂ ಜಾರಿಯಲ್ಲಿದೆ. ಸುಶಾಂತ್​ ನಿಧನಕ್ಕೆ ಅಸಲಿ ಕಾರಣ ಏನು ಎಂಬುದು ಗೊತ್ತಾಗುವುದಕ್ಕಿಂತಲೂ ಮುನ್ನವೇ ಅವರ ಜೀವನವನ್ನು ಆಧರಿಸಿ ಸಿನಿಮಾ ಮಾಡಲು ಅನೇಕರು ಮುಂದೆ ಬಂದಿದ್ದರು. ಆದರೆ ಅವರಿಗೆಲ್ಲ ಸುಶಾಂತ್​ ಸಿಂಗ್​ ರಜಪೂತ್​ ತಂದೆ ಅಡ್ಡಗಾಲು ಹಾಕಿದ್ದಾರೆ.

ಸುಶಾಂತ್ ಜೀವನವನ್ನು ಆಧರಿಸಿ ಸಿನಿಮಾ ಮಾಡಿದರೆ ತಮ್ಮ ಖಾಸಗಿತನಕ್ಕೆ ಧಕ್ಕೆ ಆಗುತ್ತದೆ. ಹಾಗಾಗಿ ಈ ಬಯೋಪಿಕ್ ಮಾಡಲು ಯಾರಿಗೂ ಅವಕಾಶ ನೀಡಬಾರದು. ಸಿನಿಮಾವನ್ನು ಬ್ಯಾನ್​ ಮಾಡಬೇಕು ಎಂದು ವಿನಂತಿಸಿ ದೆಹಲಿ ಹೈಕೋರ್ಟ್​ಗೆ ಸುಶಾಂತ್​ ತಂದೆ ಕೆ.ಕೆ. ಸಿಂಗ್​ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ನ್ಯಾಯಾಲಯವು ಆದೇಶ ಹೊರಡಿಸಿದೆ. ಸೂಕ್ತ ಅನುಮತಿ ಪಡೆಯದೇ ಸುಶಾಂತ್​ ಜೀವನದ ಬಗ್ಗೆ ಸಿನಿಮಾ ಮಾಡಿದರೆ ಅದು ಖಾಸಗಿತನದ ಸ್ಪಷ್ಟ ಉಲ್ಲಂಘನೆ ಆಗುತ್ತದೆ ಎಂದು ನಿರ್ಮಾಪಕರಿಗೆ ನೋಟಿಸ್​ ನೀಡಲಾಗಿದೆ.

ಸುಶಾಂತ್​ ಸಿಂಗ್​ ರಜಪೂತ್​ ನಿಧನರಾದ ಕೆಲವೇ ದಿನಗಳ ಬಳಿಕ ಕೆಲವರು ಅವರ ಬದುಕನ್ನು ಆಧರಿಸಿ ಸಿನಿಮಾ ಮಾಡುವುದಾಗಿ ಘೋಷಿಸಿಕೊಂಡರು. ‘ನ್ಯಾಯ್​: ದ ಜಸ್ಟೀಸ್​’, ‘ಸೂಸೈಡ್​ ಆರ್​ ಮರ್ಡರ್​: ಎ ಸ್ಟಾರ್​ ವಾಸ್​ ಲಾಸ್ಟ್​’ ಹಾಗೂ ‘ಶಶಾಂಕ್​’ ಎಂಬ ಸಿನಿಮಾಗಳ ಶೀರ್ಷಿಕೆಗಳು ನೋಂದಣಿ ಆಗಿದ್ದವು. ಸಿನಿಮಾ ಮಾಡಲು ಸಕಲ ತಯಾರಿ ನಡೆದಿತ್ತು. ಆದರೆ ಈಗ ಸುಶಾಂತ್​ ಸಿಂಗ್​ ರಜಪೂತ್​ ತಂದೆ ತಕರಾರು ತೆಗೆದಿರುವುದರಿಂದ ಆ ಸಿನಿಮಾ ಕೆಲಸಗಳಿಗೆ ಬ್ರೇಕ್​ ಹಾಕುವುದು ಅನಿವಾರ್ಯ ಆಗಿದೆ.

ಬಾಲಿವುಡ್​ನಲ್ಲಿ ಬಾಳಿ ಬದುಕಬೇಕಾಗಿದ್ದ ನಟ ಸುಶಾಂತ್​ ಅವರು 2020ರ ಜೂನ್​ 14ರಂದು ನಿಧನರಾದರು. ಮುಂಬೈನ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆ ಆಯಿತು. ಅವರ ಪ್ರೇಯಸಿ ರಿಯಾ ಚಕ್ರವರ್ತಿ ಮೇಲೆ ಎಲ್ಲರ ಅನುಮಾನದ ದೃಷ್ಟಿ ಹರಿದಿದೆ. ಸಿಬಿಐ ವರದಿ ಸಲ್ಲಿಕೆ ಆದ ಬಳಿಕವೇ ಈ ಸಾವಿನ ಹಿಂದಿನ ಸತ್ಯ ಏನು ಎಂಬುದು ಬಹಿರಂಗ ಆಗಬೇಕಿದೆ. ಈ ಪ್ರಕರಣವನ್ನು ತನಿಖೆ ಮಾಡುತ್ತಿರುವಾಗಲೇ ಬಾಲಿವುಡ್​ನಲ್ಲಿ ಅಡಗಿದ್ದ ಡ್ರಗ್ಸ್​ ಜಾಲ ಕೂಡ ಬೆಳಕಿಗೆ ಬಂತು. ಹಿಂದಿ ಚಿತ್ರರಂಗದ ಅನೇಕರ ಮೇಲೆ ಮಾದಕ ವಸ್ತು ಸೇವನೆ ಆರೋಪ ಕೇಳಿಬಂದಿದ್ದು, ತನಿಖೆ ಜಾರಿಯಲ್ಲಿದೆ.

ಇದನ್ನೂ ಓದಿ: ಸುಶಾಂತ್​ ಸಾವಿನ ವಿಚಾರದಲ್ಲಿ ಕಂಗನಾ ರಣಾವತ್​ ಮುಖವಾಡ ಬಯಲು; ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಸುಶಾಂತ್​ ಪ್ರೇಯಸಿಯನ್ನು 2 ಬಾರಿ ಮಂಚಕ್ಕೆ ಕರೆದಿದ್ದ ಚಿತ್ರರಂಗದ ಕಾಮುಕರು! ಅಂಕಿತಾ ಬಾಯ್ಬಿಟ್ಟ ಕಹಿ ಸತ್ಯ

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ