AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್​ ರಜಪೂತ್​ ಮನೆ ಕೆಲಸದವರಿಗೆ ಗೊತ್ತಿದೆಯಾ ಡ್ರಗ್ಸ್​ ಸತ್ಯ? ಎನ್​ಸಿಬಿಯಿಂದ ವಿಚಾರಣೆ

Sushant Singh Rajput: ಈ ಪ್ರಕರಣದಲ್ಲಿ ಅನೇಕ ಬಾಲಿವುಡ್​ ಸೆಲೆಬ್ರಿಟಿಗಳೂ ಸೇರಿದಂತೆ ಒಟ್ಟು 35ಕ್ಕೂ ಅಧಿಕ ಜನರನ್ನು ಇಲ್ಲಿಯವರೆಗೆ ವಿಚಾರಣೆಗೆ ಒಳಪಡಿಸಲಾಗಿದೆ. ಈಗ ಮನೆ ಕೆಲಸದವರಿಂದ ಮಹತ್ವದ ಮಾಹಿತಿ ಹೊರಬೀಳಲಿದೆಯೇ ಎಂಬ ಕುತೂಹಲ ಮೂಡಿದೆ.

ಸುಶಾಂತ್​ ಸಿಂಗ್​ ರಜಪೂತ್​ ಮನೆ ಕೆಲಸದವರಿಗೆ ಗೊತ್ತಿದೆಯಾ ಡ್ರಗ್ಸ್​ ಸತ್ಯ? ಎನ್​ಸಿಬಿಯಿಂದ ವಿಚಾರಣೆ
ಸುಶಾಂತ್ ಸಿಂಗ್ ರಜಪೂತ್
ಮದನ್​ ಕುಮಾರ್​
| Edited By: |

Updated on: May 31, 2021 | 4:32 PM

Share

ಕಳೆದ ವರ್ಷ ಜೂ.14ರಂದು ಬಾಲಿವುಡ್​ ಸ್ಟಾರ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಅವರು ನಿಧನರಾದ ಸುದ್ದಿ ಇಡೀ ಚಿತ್ರರಂಗಕ್ಕೆ ಆಘಾತ ಉಂಟು ಮಾಡಿತ್ತು. ಅವರು ಅನುಮಾನಾಸ್ಪದವಾಗಿ ಮೃತರಾಗಿ ಒಂದು ವರ್ಷ ಕಳೆಯುತ್ತಿದ್ದರೂ ಕೂಡ ಸಾವಿಗೆ ಅಸಲಿ ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಸುಶಾಂತ್​ ಸಾವಿನ ಬಗ್ಗೆ ತನಿಖೆ ಕೈಗೊಂಡ ಅಧಿಕಾರಿಗಳಿಗೆ ಮಾದಕವಸ್ತು ಜಾಲದ ನಂಟಿನ ಬಗ್ಗೆ ವಾಸನೆ ಬಡಿದಿತ್ತು. ಬಳಿಕ ಮಾದಕವಸ್ತು ನಿಯಂತ್ರಣ ಬ್ಯುರೋ (ಎನ್​ಸಿಬಿ) ಕೂಡ ತನಿಖೆ ಆರಂಭಿಸಿತ್ತು. ಈಗ ಸುಶಾಂತ್​ ಸಿಂಗ್​ ರಜಪೂತ್​ ಮನೆ ಕೆಲಸದವರನ್ನು ಎನ್​ಸಿಬಿ ವಿಚಾರಣೆಗೆ ಒಳಪಡಿಸಿದೆ.

ಸುಶಾಂತ್​ ಜೊತೆ ಫ್ಲಾಟ್​ಮೇಟ್​ ಆಗಿದ್ದ ಸಿದ್ಧಾರ್ಥ್​ ಪಿಠಾನಿಯನ್ನು ಇತ್ತೀಚೆಗೆ ಹೈದರಾಬಾದ್​ನಲ್ಲಿ ಬಂಧಿಸಲಾಗಿತ್ತು. ಆ ಸಂಬಂಧ ತನಿಖೆ ಮುಂದುವರಿದಿದ್ದು, ಹೆಚ್ಚಿನ ವಿಚಾರಣೆಗಾಗಿ ಸುಶಾಂತ್​ ಮನೆಕೆಲಸದವರಾಗಿದ್ದ ನೀರಜ್​ ಮತ್ತು ಕೇಶವ್​ ಎಂಬುವವರನ್ನು ಭಾನುವಾರ (ಮೇ 30) ಎನ್​ಸಿಬಿ ಕಚೇರಿಗೆ ಕರೆಸಿಕೊಂಡು ಹಲವು ಪ್ರಶ್ನೆಗಳನ್ನು ಕೇಳಲಾಗಿದೆ. ಭಾನುವಾರ ತಡರಾತ್ರಿವರೆಗೂ ವಿಚಾರಣೆ ಮುಂದುವರಿದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಈ ಪ್ರಕರಣದಲ್ಲಿ ಅನೇಕ ಬಾಲಿವುಡ್​ ಸೆಲೆಬ್ರಿಟಿಗಳೂ ಸೇರಿದಂತೆ 35ಕ್ಕೂ ಅಧಿಕ ಜನರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಈಗ ಮನೆ ಕೆಲಸದವರಿಂದ ಮಹತ್ವದ ಮಾಹಿತಿ ಹೊರಬೀಳಲಿದೆಯೇ ಎಂಬ ಕುತೂಹಲ ಮೂಡಿದೆ.

ಸುಶಾಂತ್​ ಸಿಂಗ್​ ರಜಪೂತ್​ಗೆ ಮಾದಕವಸ್ತು ಪೂರೈಕೆ ಮಾಡುತ್ತಿದ್ದ ಜಾಲದಲ್ಲಿ ಸಿದ್ಧಾರ್ಥ್​ ಪಿಠಾನಿ ಕೂಡ ಭಾಗಿಯಾಗಿದ್ದ ಎಂಬ ಆರೋಪ ಇದೆ. ಹಾಗಾಗಿ ಹೈದರಾಬಾದ್​ನಲ್ಲಿ ಆತನನ್ನು ಬಂಧಿಸಿ, ಮುಂಬೈಗೆ ಕರೆತರಲಾಯಿತು. ಕೋರ್ಟ್​ಗೆ ಹಾಜರುಪಡಿಸಿ, ಜೂನ್​ 1ರವರೆಗೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಒಂದು ವರ್ಷದಿಂದ ಈಚೆಗೆ ಹಲವು ಬಾಲಿವುಡ್​ ಕಲಾವಿದರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಸಿಬಿ ಅಧಿಕಾರಿಗಳಿಂದ ವಿಚಾರಣೆ ಎದುರಿಸಿದ್ದಾರೆ. ರಿಯಾ ಚಕ್ರವರ್ತಿ, ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್​, ಶ್ರದ್ಧಾ ಕಪೂರ್​, ರಾಕುಲ್​ ಪ್ರೀತ್​ ಸಿಂಗ್​ ಮುಂತಾದವರು ಎನ್​ಸಿಬಿ ಕಚೇರಿಯ ಮೆಟ್ಟಿಲು ಹತ್ತಿಬಂದಿದ್ದಾರೆ.

ಸುಶಾಂತ್​ ಸಾವಿನ ತನಿಖೆಯನ್ನು ಮೂರು ಆಯಾಮದಿಂದ ಮಾಡಲಾಗುತ್ತಿದೆ. ಕೊಲೆಗೆ ಕಾರಣ ಏನು ಎಂಬುದನ್ನು ಸಿಬಿಐ ತನಿಖಾ ತಂಡ ಕಂಡುಹಿಡಿಯುತ್ತಿದೆ. ಸುಶಾಂತ್​ಗೆ ಇದ್ದ ಡ್ರಗ್ಸ್​ ಜಾಲದ ನಂಟಿನ ಬಗ್ಗೆ ಎನ್​ಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸುಶಾಂತ್​ ಹಣಕಾಸು ವ್ಯವಹಾರದಲ್ಲಿ ಅನುಮಾನ ಕಂಡುಬಂದಿರುವ ಕಾರಣ ಜಾರಿ ನಿರ್ದೇಶನಾಲಯ ಕೂಡ ತನಿಖೆ ನಡೆಸುತ್ತಿದೆ. ಒಟ್ಟಾರೆ ಪ್ರಕರಣದ ಅಂತಿಮ ವರದಿಗಾಗಿ ಸುಶಾಂತ್​ ಅಭಿಮಾನಿಗಳು ಕಾದಿದ್ದಾರೆ. ಅವರ ಸಾವಿಗೆ ನ್ಯಾಯ ಸಿಗಬೇಕು ಎಂದು ಸೋಶಿಯಲ್​ ಮೀಡಿಯಾದಲ್ಲಿ ಇಂದಿಗೂ ಕೂಗು ಕೇಳಿಬರುತ್ತಿದೆ.

ಇದನ್ನೂ ಓದಿ:

ಸುಶಾಂತ್​ ಸಿಂಗ್​ ರಜಪೂತ್​ ಸಾವು ಪ್ರಕರಣ ಮತ್ತೆ ಜೀವಂತ; ಹೈದರಾಬಾದ್​​ನಲ್ಲಿ ನಟ ಸುಶಾಂತ್​ ಅಪಾರ್ಟ್​ಮೆಂಟ್​ ವಾಸಿ ಅರೆಸ್ಟ್

ಸುಶಾಂತ್​ ಸಿಂಗ್​ ರಜಪೂತ್ ರೀತಿಯೇ ಕಾರ್ತಿಕ್​ ಆರ್ಯನ್​ಗೆ ಅನ್ಯಾಯ ಆಗಲು ಕತ್ರಿನಾ ಕಾರಣವೇ?

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?