AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಾವಿನ ವಿಚಾರದಲ್ಲಿ ಕಂಗನಾ ರಣಾವತ್​ ಮುಖವಾಡ ಬಯಲು; ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಕಂಗನಾ ರಣಾವತ್​ ಅವರಿಗೆ ‘ವರ್ಷದ ಬೂಟಾಟಿಕೆ ವ್ಯಕ್ತಿ’ ಎಂಬ ಪ್ರಶಸ್ತಿ ನೀಡಬೇಕು ಎಂದು ಅನೇಕರು ಕಾಮೆಂಟ್​ ಮಾಡಿದ್ದಾರೆ. ಕಾಂಟ್ರವರ್ಸಿ ಕ್ವೀನ್​ ವಿರುದ್ಧ ಸುಶಾಂತ್​ ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ.

ಸುಶಾಂತ್​ ಸಾವಿನ ವಿಚಾರದಲ್ಲಿ ಕಂಗನಾ ರಣಾವತ್​ ಮುಖವಾಡ ಬಯಲು; ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ಸುಶಾಂತ್​ ಸಿಂಗ್​ ರಜಪೂತ್​ - ಕಂಗನಾ ರಣಾವತ್​
ಮದನ್​ ಕುಮಾರ್​
|

Updated on: Apr 18, 2021 | 9:44 AM

Share

ಇಲ್ಲಸಲ್ಲದ ಎಲ್ಲ ವಿಚಾರಗಳಿಗೆ ತಲೆ ಹಾಕುವುದು ನಟಿ ಕಂಗನಾ ರಣಾವತ್​ ಅವರ ಜಾಯಮಾನ. ಈ ಪ್ರಕ್ರಿಯೆಯಲ್ಲಿ ಅವರು ತಮ್ಮ ಮೇಲೆ ಅನೇಕ ವಿವಾದಗಳನ್ನು ಎಳೆದುಕೊಳ್ಳುತ್ತಾರೆ. ನಟ ಸುಶಾಂತ್​ ಸಿಂಗ್​ ರಜಪೂತ್​​ ನಿಧನರಾದ ಬಳಿಕ ಬಾಲಿವುಡ್​ನ ಅನೇಕರ ಮೇಲೆ ಕಂಗನಾ ಆರೋಪ ಮಾಡಿದ್ದರು. ಈಗ ಅವರು ಮತ್ತೆ ಸುಶಾಂತ್ ಸಾವಿನ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಆದರೆ ಈ ಬಾರಿ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಅದಕ್ಕಾಗಿ ನೆಟ್ಟಿಗರಿಂದ ತೀವ್ರ ಟೀಕೆಗೆ ಒಳಗಾಗುತ್ತಿದ್ದಾರೆ.

ಸುಶಾಂತ್​ ಅವರದ್ದು ಆತ್ಮಹತ್ಯೆ ಅಲ್ಲ. ಅವರನ್ನು ಪ್ಲ್ಯಾನ್​ ಮಾಡಿ ಕೊಲೆ ಮಾಡಲಾಯಿತು ಎಂದು 2020ರಲ್ಲಿ ಅನೇಕ ಬಾರಿ ಕಂಗನಾ ಹೇಳಿದ್ದರು. ಮಾಧ್ಯಮಗಳ ಮುಂದೆಯೂ ಇದೇ ಹೇಳಿಕೆ ನೀಡಿದ್ದರು. ಆದರೆ ಈಗ ಸುಶಾಂತ್​ ಅವರದ್ದು ಆತ್ಮಹತ್ಯೆ ಎಂಬ ರೀತಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಅದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಇತ್ತೀಚೆಗೆ ಕರಣ್​ ಜೋಹರ್​ ಅವರ ಧರ್ಮ ಪ್ರೊಡಕ್ಷನ್ಸ್​ನಿಂದ ಹೊರದಬ್ಬಿಸಿಕೊಂಡ ನಟ ಕಾರ್ತಿಕ್​ ಆರ್ಯನ್​ಗೆ ಸಮಾಧಾನ ಮಾಡುವ ಭರದಲ್ಲಿ ಕಂಗನಾ ಅವರು ಸುಶಾಂತ್​ ಸಾವಿನ ವಿಚಾರವನ್ನು ಎಳೆದು ತಂದಿದ್ದರು.

‘ಕಾರ್ತಿಕ್​ ಸ್ವಂತವಾಗಿ ಇಲ್ಲಿಯವರಗೆ ಬೆಳೆದುಬಂದಿದ್ದಾರೆ. ಅದೇ ರೀತಿ ಅವರು ಮುಂದುವರಿಯಲಿದ್ದಾರೆ. ಕರಣ್​ ಜೋಹರ್​ ಮತ್ತು ಆತನ ನೆಪೋಟಿಸಂ ಗ್ಯಾಂಗ್​ಗೆ ನನ್ನದೊಂದು ಮನವಿ ಏನೆಂದರೆ, ದಯವಿಟ್ಟು ಕಾರ್ತಿಕ್​ರನ್ನು ಬಿಟ್ಟುಬಿಡಿ. ಸುಶಾಂತ್​ ರೀತಿ ಅವರ ಬೆನ್ನುಹತ್ತಬೇಡಿ. ನೇಣು ಹಾಕಿಕೊಳ್ಳುವಂತೆ ಒತ್ತಾಯ ಮಾಡಬೇಡಿ’ ಎಂದು ಕಂಗನಾ ಟ್ವೀಟ್​ ಮಾಡಿದ್ದರು. ಅದೇ ಈಗ ಚೆರ್ಚೆಗೆ ಕಾರಣ ಆಗಿದೆ.

ಕಳೆದ ವರ್ಷ ಸುಶಾಂತ್​ರದ್ದು ಕೊಲೆ ಎಂದು ಹೇಳಿ, ಈಗ ಆತ್ಮಹತ್ಯೆ ಎಂಬರ್ಥದಲ್ಲಿ ಟ್ವೀಟ್​ ಮಾಡಿರುವುದಕ್ಕೆ ಅನೇಕರು ಕಂಗನಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಬಾರಿಯೂ ನಿಮಗೆ ಜನರ ಗಮನ ಸೆಳೆದುಕೊಳ್ಳಲು ಸುಶಾಂತ್​ ಸಿಂಗ್​ ವಿಚಾರವೇ ಬೇಕಾ ಎಂದು ಸುಶಾಂತ್​ ಅಭಿಮಾನಿಗಳು ಕಂಗನಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕಂಗನಾರ ಹಳೇ ಟ್ವೀಟ್​ಗಳ ಸ್ಕ್ರೀನ್​ ಶಾಟ್​ ತೆಗೆದು ಈಗ ಜನರು ಮತ್ತೆ ನೆನಪಿಸುತ್ತಿದ್ದಾರೆ. ಕಂಗನಾ ಮಾತು ಬದಲಿಸಿದ್ದಾರೆ ಎಂಬುದನ್ನು ಈ ಮೂಲಕ ನೆಟ್ಟಿಗರು ಒತ್ತಿಹೇಳುತ್ತಿದ್ದಾರೆ.

ಕಂಗನಾಗೆ ‘ವರ್ಷದ ಬೂಟಾಟಿಕೆ ವ್ಯಕ್ತಿ’ ಎಂದು ಪ್ರಶಸ್ತಿ ನೀಡಬೇಕು. ಅವರಿಗೆ ಮರೆವಿನ ಕಾಯಿಲೆ ಇರಬಹುದು ಎಂದು ಹಲವರು ಕಾಮೆಂಟ್​ ಮಾಡಿದ್ದಾರೆ. ‘ನನಗೆ ನಿಜಕ್ಕೂ ನಿರಾಸೆ ಆಗಿದೆ. ಸುಶಾಂತ್​ ಆತ್ಮಹತ್ಯೆ ಮಾಡಿಕೊಂಡಿಲ್ಲ. ನಿಮ್ಮ ಮಾತುಗಳನ್ನು ವಾಪಸ್​ ತೆಗೆದುಕೊಳ್ಳಿ. 10 ತಿಂಗಳಿಂದ ನಾವು ಸುಶಾಂತ್​ ಸಾವಿಗೆ ನ್ಯಾಯ ಕೊಡಿಸಲು ಹೋರಾಡುತ್ತಿರುವುದು ನಿಮಗೆ ಕಾಣುತ್ತಿಲ್ಲವೇ? ನೀವು ಸರಿಯಾಗಿದ್ದಾಗ ನಿಮ್ಮನ್ನು ಬೆಂಬಲಿಸಿದ್ದೇನೆ. ಆದರೆ ಈಗ ನೀವು ತಪ್ಪು ಮಾಡಿದ್ದೀರಿ’ ಎಂದು ಸುಶಾಂತ್​ ಅಭಿಮಾನಿಯೊಬ್ಬರು ಛಾಟಿ ಬೀಸಿದ್ದಾರೆ.

ಇದನ್ನೂ ಓದಿ: ಕಂಗನಾ ರಣಾವತ್​-ತಾಪ್ಸೀ ಪನ್ನು ಈಗ ಫ್ರೆಂಡ್ಸ್​! ಜಗಳ ಅಂತ್ಯ ಆಗಿದ್ದಕ್ಕೆ ಕಾರಣ ಏನು?

ದೊಡ್ಡ ಹೀರೋಗಳು ತಲೆಮರೆಸಿಕೊಂಡಿದ್ದಾರೆ, ಬಾಲಿವುಡ್​ ಉಳಿಯೋದು ನನ್ನಿಂದಲೇ: ಕಂಗನಾ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!