ಸುಶಾಂತ್​ ಸಾವಿನ ವಿಚಾರದಲ್ಲಿ ಕಂಗನಾ ರಣಾವತ್​ ಮುಖವಾಡ ಬಯಲು; ತರಾಟೆಗೆ ತೆಗೆದುಕೊಂಡ ನೆಟ್ಟಿಗರು

ಕಂಗನಾ ರಣಾವತ್​ ಅವರಿಗೆ ‘ವರ್ಷದ ಬೂಟಾಟಿಕೆ ವ್ಯಕ್ತಿ’ ಎಂಬ ಪ್ರಶಸ್ತಿ ನೀಡಬೇಕು ಎಂದು ಅನೇಕರು ಕಾಮೆಂಟ್​ ಮಾಡಿದ್ದಾರೆ. ಕಾಂಟ್ರವರ್ಸಿ ಕ್ವೀನ್​ ವಿರುದ್ಧ ಸುಶಾಂತ್​ ಅಭಿಮಾನಿಗಳು ತಿರುಗಿ ಬಿದ್ದಿದ್ದಾರೆ.

ಸುಶಾಂತ್​ ಸಾವಿನ ವಿಚಾರದಲ್ಲಿ ಕಂಗನಾ ರಣಾವತ್​ ಮುಖವಾಡ ಬಯಲು; ತರಾಟೆಗೆ ತೆಗೆದುಕೊಂಡ ನೆಟ್ಟಿಗರು
ಸುಶಾಂತ್​ ಸಿಂಗ್​ ರಜಪೂತ್​ - ಕಂಗನಾ ರಣಾವತ್​
Follow us
|

Updated on: Apr 18, 2021 | 9:44 AM

ಇಲ್ಲಸಲ್ಲದ ಎಲ್ಲ ವಿಚಾರಗಳಿಗೆ ತಲೆ ಹಾಕುವುದು ನಟಿ ಕಂಗನಾ ರಣಾವತ್​ ಅವರ ಜಾಯಮಾನ. ಈ ಪ್ರಕ್ರಿಯೆಯಲ್ಲಿ ಅವರು ತಮ್ಮ ಮೇಲೆ ಅನೇಕ ವಿವಾದಗಳನ್ನು ಎಳೆದುಕೊಳ್ಳುತ್ತಾರೆ. ನಟ ಸುಶಾಂತ್​ ಸಿಂಗ್​ ರಜಪೂತ್​​ ನಿಧನರಾದ ಬಳಿಕ ಬಾಲಿವುಡ್​ನ ಅನೇಕರ ಮೇಲೆ ಕಂಗನಾ ಆರೋಪ ಮಾಡಿದ್ದರು. ಈಗ ಅವರು ಮತ್ತೆ ಸುಶಾಂತ್ ಸಾವಿನ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಆದರೆ ಈ ಬಾರಿ ಒಂದು ಎಡವಟ್ಟು ಮಾಡಿಕೊಂಡಿದ್ದಾರೆ. ಅದಕ್ಕಾಗಿ ನೆಟ್ಟಿಗರಿಂದ ತೀವ್ರ ಟೀಕೆಗೆ ಒಳಗಾಗುತ್ತಿದ್ದಾರೆ.

ಸುಶಾಂತ್​ ಅವರದ್ದು ಆತ್ಮಹತ್ಯೆ ಅಲ್ಲ. ಅವರನ್ನು ಪ್ಲ್ಯಾನ್​ ಮಾಡಿ ಕೊಲೆ ಮಾಡಲಾಯಿತು ಎಂದು 2020ರಲ್ಲಿ ಅನೇಕ ಬಾರಿ ಕಂಗನಾ ಹೇಳಿದ್ದರು. ಮಾಧ್ಯಮಗಳ ಮುಂದೆಯೂ ಇದೇ ಹೇಳಿಕೆ ನೀಡಿದ್ದರು. ಆದರೆ ಈಗ ಸುಶಾಂತ್​ ಅವರದ್ದು ಆತ್ಮಹತ್ಯೆ ಎಂಬ ರೀತಿಯಲ್ಲಿ ಟ್ವೀಟ್​ ಮಾಡಿದ್ದಾರೆ. ಅದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಇತ್ತೀಚೆಗೆ ಕರಣ್​ ಜೋಹರ್​ ಅವರ ಧರ್ಮ ಪ್ರೊಡಕ್ಷನ್ಸ್​ನಿಂದ ಹೊರದಬ್ಬಿಸಿಕೊಂಡ ನಟ ಕಾರ್ತಿಕ್​ ಆರ್ಯನ್​ಗೆ ಸಮಾಧಾನ ಮಾಡುವ ಭರದಲ್ಲಿ ಕಂಗನಾ ಅವರು ಸುಶಾಂತ್​ ಸಾವಿನ ವಿಚಾರವನ್ನು ಎಳೆದು ತಂದಿದ್ದರು.

‘ಕಾರ್ತಿಕ್​ ಸ್ವಂತವಾಗಿ ಇಲ್ಲಿಯವರಗೆ ಬೆಳೆದುಬಂದಿದ್ದಾರೆ. ಅದೇ ರೀತಿ ಅವರು ಮುಂದುವರಿಯಲಿದ್ದಾರೆ. ಕರಣ್​ ಜೋಹರ್​ ಮತ್ತು ಆತನ ನೆಪೋಟಿಸಂ ಗ್ಯಾಂಗ್​ಗೆ ನನ್ನದೊಂದು ಮನವಿ ಏನೆಂದರೆ, ದಯವಿಟ್ಟು ಕಾರ್ತಿಕ್​ರನ್ನು ಬಿಟ್ಟುಬಿಡಿ. ಸುಶಾಂತ್​ ರೀತಿ ಅವರ ಬೆನ್ನುಹತ್ತಬೇಡಿ. ನೇಣು ಹಾಕಿಕೊಳ್ಳುವಂತೆ ಒತ್ತಾಯ ಮಾಡಬೇಡಿ’ ಎಂದು ಕಂಗನಾ ಟ್ವೀಟ್​ ಮಾಡಿದ್ದರು. ಅದೇ ಈಗ ಚೆರ್ಚೆಗೆ ಕಾರಣ ಆಗಿದೆ.

ಕಳೆದ ವರ್ಷ ಸುಶಾಂತ್​ರದ್ದು ಕೊಲೆ ಎಂದು ಹೇಳಿ, ಈಗ ಆತ್ಮಹತ್ಯೆ ಎಂಬರ್ಥದಲ್ಲಿ ಟ್ವೀಟ್​ ಮಾಡಿರುವುದಕ್ಕೆ ಅನೇಕರು ಕಂಗನಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಬಾರಿಯೂ ನಿಮಗೆ ಜನರ ಗಮನ ಸೆಳೆದುಕೊಳ್ಳಲು ಸುಶಾಂತ್​ ಸಿಂಗ್​ ವಿಚಾರವೇ ಬೇಕಾ ಎಂದು ಸುಶಾಂತ್​ ಅಭಿಮಾನಿಗಳು ಕಂಗನಾ ವಿರುದ್ಧ ತಿರುಗಿ ಬಿದ್ದಿದ್ದಾರೆ. ಕಂಗನಾರ ಹಳೇ ಟ್ವೀಟ್​ಗಳ ಸ್ಕ್ರೀನ್​ ಶಾಟ್​ ತೆಗೆದು ಈಗ ಜನರು ಮತ್ತೆ ನೆನಪಿಸುತ್ತಿದ್ದಾರೆ. ಕಂಗನಾ ಮಾತು ಬದಲಿಸಿದ್ದಾರೆ ಎಂಬುದನ್ನು ಈ ಮೂಲಕ ನೆಟ್ಟಿಗರು ಒತ್ತಿಹೇಳುತ್ತಿದ್ದಾರೆ.

ಕಂಗನಾಗೆ ‘ವರ್ಷದ ಬೂಟಾಟಿಕೆ ವ್ಯಕ್ತಿ’ ಎಂದು ಪ್ರಶಸ್ತಿ ನೀಡಬೇಕು. ಅವರಿಗೆ ಮರೆವಿನ ಕಾಯಿಲೆ ಇರಬಹುದು ಎಂದು ಹಲವರು ಕಾಮೆಂಟ್​ ಮಾಡಿದ್ದಾರೆ. ‘ನನಗೆ ನಿಜಕ್ಕೂ ನಿರಾಸೆ ಆಗಿದೆ. ಸುಶಾಂತ್​ ಆತ್ಮಹತ್ಯೆ ಮಾಡಿಕೊಂಡಿಲ್ಲ. ನಿಮ್ಮ ಮಾತುಗಳನ್ನು ವಾಪಸ್​ ತೆಗೆದುಕೊಳ್ಳಿ. 10 ತಿಂಗಳಿಂದ ನಾವು ಸುಶಾಂತ್​ ಸಾವಿಗೆ ನ್ಯಾಯ ಕೊಡಿಸಲು ಹೋರಾಡುತ್ತಿರುವುದು ನಿಮಗೆ ಕಾಣುತ್ತಿಲ್ಲವೇ? ನೀವು ಸರಿಯಾಗಿದ್ದಾಗ ನಿಮ್ಮನ್ನು ಬೆಂಬಲಿಸಿದ್ದೇನೆ. ಆದರೆ ಈಗ ನೀವು ತಪ್ಪು ಮಾಡಿದ್ದೀರಿ’ ಎಂದು ಸುಶಾಂತ್​ ಅಭಿಮಾನಿಯೊಬ್ಬರು ಛಾಟಿ ಬೀಸಿದ್ದಾರೆ.

ಇದನ್ನೂ ಓದಿ: ಕಂಗನಾ ರಣಾವತ್​-ತಾಪ್ಸೀ ಪನ್ನು ಈಗ ಫ್ರೆಂಡ್ಸ್​! ಜಗಳ ಅಂತ್ಯ ಆಗಿದ್ದಕ್ಕೆ ಕಾರಣ ಏನು?

ದೊಡ್ಡ ಹೀರೋಗಳು ತಲೆಮರೆಸಿಕೊಂಡಿದ್ದಾರೆ, ಬಾಲಿವುಡ್​ ಉಳಿಯೋದು ನನ್ನಿಂದಲೇ: ಕಂಗನಾ

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ