Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
Follow us
ರಾಜೇಶ್ ದುಗ್ಗುಮನೆ
|

Updated on: Jun 24, 2021 | 8:34 PM

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..