AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 24, 2021 | 8:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ