AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 24, 2021 | 8:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?