AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 24, 2021 | 8:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!