AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 24, 2021 | 8:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ