AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 24, 2021 | 8:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ