AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
ರಾಜೇಶ್ ದುಗ್ಗುಮನೆ
|

Updated on: Jun 24, 2021 | 8:34 PM

Share

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Follow Us
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಬೆಳಗಾವಿ ದಕ್ಷಿಣ ಶಾಸಕ ಅಭಯ್ ಪಾಟೀಲ್ ಕಾರು ದೆಹಲಿಯಲ್ಲಿ ಅಪಘಾತ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು SIR​​ ಪ್ರಕ್ರಿಯೆಯ ಮೊದಲ ಕರಡು ಮತದಾರರ ಪಟ್ಟಿ ಪ್ರಕಟ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ