ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ

|

Updated on: Jun 24, 2021 | 8:34 PM

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು.

ಸುಶಾಂತ್​ ಸಿಂಗ್ ಸಾವಿನ​ ಪ್ರಕರಣದ ತನಿಖೆ ಯಾವ ಹಂತದಲ್ಲಿದೆ? ಆರ್​ಟಿಐ ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಬಿಐ
ಸುಶಾಂತ್​ ಸಿಂಗ್​ ರಜಪೂತ್​
Follow us on

ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟು ಒಂದು ವರ್ಷ ಕಳೆದಿದೆ. ಆದಾಗ್ಯೂ ಅವರ ಸಾವಿನ ವಿಚಾರ ಗುಟ್ಟಾಗಿಯೇ ಇದೆ. ಅವರದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಈ ತನಿಖೆ ಯಾವ ಹಂತದಲ್ಲಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್​ಟಿಐ) ಅಡಿಯಲ್ಲಿ ಕೇಳಿದ ಪ್ರಶ್ನೆಗೆ ಸಿಬಿಐ ಉತ್ತರಿಸಿದೆ.

ಕೋರಿಯೋಗ್ರಾಫರ್​, ಸುಶಾಂತ್​ ಗೆಳೆಯ ಗಣೇಶ್​ ಹಿವಾರ್ಕರ್​ ಇತ್ತೀಚೆಗೆ ಆರ್​ಟಿಐ ಅಡಿಯಲ್ಲಿ ಪ್ರಶ್ನೆ ಕೇಳಿದ್ದರು. ‘ಸುಶಾಂತ್​ ಸಿಂಗ್​ ಸಾವಿನ ತನಿಖೆ ಯಾವ ಹಂತದಲ್ಲಿದೆ ಎಂಬುದನ್ನು ತಿಳಿಸಿ’ ಎಂದು ಕೋರಿದ್ದರು. ಇದಕ್ಕೆ, ಸಿಬಿಐ ಉತ್ತರ ಹೇಳಲು ನಿರಾಕರಿಸಿದೆ.

ಇತ್ತೀಚೆಗೆ ಟ್ವೀಟ್​ ಮಾಡಿದ್ದ ಗಣೇಶ್​, ‘ಸಿಬಿಐನಿಂದ ಸುಶಾಂತ್​ ಸಿಂಗ್ ತನಿಖೆ ಪೂರ್ಣಗೊಳಿಸಲು ಸಾಧ್ಯವಾಗುವುದಿಲ್ಲ ಎನಿಸುತ್ತಿದೆ. ಹೀಗಾಗಿ, ಪ್ರಧಾನಮಂತ್ರಿ ಕಚೇರಿಯವರು ನನಗೆ ಅಮೆರಿಕ ವಿಸಾ ಕೊಡಿಸಿ. ನನಗೆ ಇಲ್ಲಿ ಸುರಕ್ಷಿತವಲ್ಲ ಎನ್ನುವ ಭಾವನೆ ಬರುತ್ತಿದೆ’ ಎಂದಿದ್ದರು. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಬಳಿ ‘ಮಾನವ ಹಕ್ಕುಗಳ ಆಧಾರದ ಮೇಲೆ ಅಮೆರಿಕ ವೀಸಾ ಕೊಡುವಂತೆ’ ಮನವಿ ಮಾಡಿದ್ದರು.

ಮೇ 16ರಂದು ಆರ್​ಟಿಐ ಅಡಿಯಲ್ಲಿ ಗಣೇಶ್​ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಮನವಿ ಜೂನ್​ 14ರಂದು ಸಿಬಿಐ ಕೈ ಸೇರಿತ್ತು. ಈಗ ಇದಕ್ಕೆ ಸಿಬಿಐ ಉತ್ತರಿಸಿದೆ. ತನಿಖೆ ಪ್ರಗತಿಯಲ್ಲಿದೆ. ಈಗ ಅರ್ಧ ತನಿಖೆಯಲ್ಲಿ ಮಾಹಿತಿ ಬಿಡುಗಡೆ ಮಾಡವುದು ತನಿಖೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಿಬಿಐ ಹೇಳಿದೆ.

ಇದನ್ನೂ ಓದಿ: Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?