AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Sushant Singh Rajput Death Anniversary: ಸಮುದ್ರಕ್ಕೆ ಮುಖ ಮಾಡಿರುವ ಈ ಅಪಾರ್ಟ್​ಮೆಂಟ್​ನ ಎರಡು ಮಹಡಿಗಳನ್ನು ಸುಶಾಂತ್​ ಪಡೆದುಕೊಂಡಿದ್ದರು. ಅವರ ನಿಧನದ ಬಳಿಕ ಅದು ಖಾಲಿ ಉಳಿದುಕೊಂಡಿತ್ತು.

Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?
ಸುಶಾಂತ್​ ಸಿಂಗ್​ ರಜಪೂತ್​
ಮದನ್​ ಕುಮಾರ್​
|

Updated on: Jun 15, 2021 | 1:23 PM

Share

ನಟ ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆದಿದೆ. ಹಾಗಿದ್ದರೂ ಅಭಿಮಾನಿಗಳು ಅವರನ್ನು ಮರೆತಿಲ್ಲ. ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಅವರನ್ನು ನೆನಪು ಮಾಡಿಕೊಳ್ಳಲಾಗುತ್ತದೆ. ಜೂ.14ರಂದು ಸುಶಾಂತ್​ ಅವರ ಮೊದಲ ವರ್ಷದ ಪುಣ್ಯತಿಥಿ. ಸರಿಯಾಗಿ ಒಂದು ವರ್ಷದ ಹಿಂದೆ ಆ ಕರಾಳ ದಿನದಂದು ಮುಂಬೈನ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ಸುಶಾಂತ್​ ನಿಧನರಾಗಿದ್ದರು. ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್​ ಮೃತದೇಹ ಪತ್ತೆಯಾಗಿತ್ತು. ಅಚ್ಚರಿ ಎಂದರೆ, ಈಗ ಅದೇ ಮನೆ ಬಾಡಿಗೆಗೆ ಲಭ್ಯವಿದೆ!

ಸಮುದ್ರಕ್ಕೆ ಮುಖ ಮಾಡಿರುವ ಈ ಅಪಾರ್ಟ್​ಮೆಂಟ್​ನ ಎರಡು ಮಹಡಿಗಳನ್ನು ಸುಶಾಂತ್​ ಪಡೆದುಕೊಂಡಿದ್ದರು. ಅವರ ನಿಧನದ ಬಳಿಕ ಅದು ಖಾಲಿ ಉಳಿದುಕೊಂಡಿತ್ತು. ಲಾಕ್​ಡೌನ್​ ಕಾರಣದಿಂದಾಗಿ ಹೊಸ ಬಾಡಿಗೆದಾರರು ಬಂದಿರಲಿಲ್ಲ. ಆ ಎರಡೂ ಫ್ಲೋರ್​ಗೆ ಸುಶಾಂತ್​ ಅವರು ನಾಲ್ಕೂವರೆ ಲಕ್ಷ ರೂ. ಬಾಡಿಗೆ ಕಟ್ಟುತ್ತಿದ್ದರು. 2022ರ ಡಿಸೆಂಬರ್​ ತಿಂಗಳವರೆಗೆ ಅವರು ಅಗ್ರೀಮೆಂಟ್​ ಮಾಡಿಕೊಂಡಿದ್ದರು.

ನಿಧನರಾಗುವುದಕ್ಕೂ ಮುನ್ನ ತನ್ನ ಸ್ನೇಹಿತರು ಹಾಗೂ ಪ್ರೇಯಸಿ ರಿಯಾ ಚಕ್ರವರ್ತಿ ಜೊತೆ ಈ ಮನೆಯಲ್ಲಿ ಸುಶಾಂತ್​ ವಾಸಿಸುತ್ತಿದ್ದರು. ಆಗಾಗ ಅವರ ಅಕ್ಕ, ಭಾವ ಕೂಡ ಬಂದು ಹೋಗುತ್ತಿದ್ದರು. ಸುಶಾಂತ್ ಸಾವಿನ ಸುದ್ದಿ ಹೊರಬಿದ್ದ ನಂತರ ಆ ಅಪಾರ್ಟ್​ಮೆಂಟ್​ ಇಡೀ ಪ್ರಕರಣದ ಕೇಂದ್ರ ಬಿಂದು ಆಗಿತ್ತು. ಪೊಲೀಸ್​ ತನಿಖೆ ನಡೆದಿತ್ತು. ಈಗ ಅದೇ ಮನೆ ಬಾಡಿಗೆಗೆ ಲಭ್ಯವಾಗಿದೆ. ತಿಂಗಳ ಬಾಡಿಗೆ 4 ಲಕ್ಷ ರೂ. ಎಂದು ತಿಳಿದುಬಂದಿದೆ.

ಸುಶಾಂತ್​ ಸಿಂಗ್​ ರಜಪೂತ್​ ಪುಣ್ಯ ಸ್ಮರಣೆ ಅಂಗವಾಗಿ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಅವರಿಗೆ ನಮನ ಸಲ್ಲಿಸಿದ್ದಾರೆ. ಸುಶಾಂತ್​ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪ್ರೇಯಸಿ ರಿಯಾ ಚಕ್ರವರ್ತಿ ಕೂಡ ದೀರ್ಘವಾದ ಪೋಸ್ಟ್​ ಹಾಕಿಕೊಂಡಿದ್ದಾರೆ. ‘ನೀನು ಬಂದು ನನ್ನನ್ನು ಕರೆದುಕೊಂಡು ಹೋಗುತ್ತೀಯ ಎಂದು ನಾನು ಪ್ರತಿದಿನ ನಿನಗಾಗಿ ಕಾಯುತ್ತಿದ್ದೇನೆ’ ಎಂದು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಸುಶಾಂತ್​ ಇಹಲೋಕ ತ್ಯಜಿಸಿ ಒಂದು ವರ್ಷ ಕಳೆದರೂ ತನಿಖೆ ಇನ್ನೂ ಜಾರಿಯಲ್ಲಿದೆ. ಸಿಬಿಐ ಅಧಿಕಾರಿಗಳು ಅಂತಿಮ ವರದಿ ಸಲ್ಲಿಸುವುದು ಬಾಕಿ ಇದೆ. ಮಾದಕ ವಸ್ತು ಜಾಲದ ಜೊತೆ ಸುಶಾಂತ್​ ನಂಟು ಹೊಂದಿದ್ದರು ಎಂಬ ಅನುಮಾನ ಕೂಡ ಇರುವುದರಿಂದ ಎನ್​ಸಿಬಿ ಅಧಿಕಾರಿಗಳು ಆ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಸುಶಾಂತ್​ ಅವರ ಹಣಕಾಸಿನ ವ್ಯವಹಾರಗಳ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮಾಡಿದೆ.

ಇದನ್ನೂ ಓದಿ:

SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್