AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?

Sushant Singh Rajput Death Anniversary: ಸಮುದ್ರಕ್ಕೆ ಮುಖ ಮಾಡಿರುವ ಈ ಅಪಾರ್ಟ್​ಮೆಂಟ್​ನ ಎರಡು ಮಹಡಿಗಳನ್ನು ಸುಶಾಂತ್​ ಪಡೆದುಕೊಂಡಿದ್ದರು. ಅವರ ನಿಧನದ ಬಳಿಕ ಅದು ಖಾಲಿ ಉಳಿದುಕೊಂಡಿತ್ತು.

Sushant Singh Rajput: ಸುಶಾಂತ್​ ವಾಸವಾಗಿದ್ದ ಮನೆ ಈಗ ಬಾಡಿಗೆಗೆ ಲಭ್ಯ; ತಿಂಗಳ ಬಾಡಿಗೆ ಅಬ್ಬಬ್ಬಾ ಇಷ್ಟೊಂದಾ?
ಸುಶಾಂತ್​ ಸಿಂಗ್​ ರಜಪೂತ್​
ಮದನ್​ ಕುಮಾರ್​
|

Updated on: Jun 15, 2021 | 1:23 PM

Share

ನಟ ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆದಿದೆ. ಹಾಗಿದ್ದರೂ ಅಭಿಮಾನಿಗಳು ಅವರನ್ನು ಮರೆತಿಲ್ಲ. ಪ್ರತಿದಿನ ಒಂದಿಲ್ಲೊಂದು ರೀತಿಯಲ್ಲಿ ಅವರನ್ನು ನೆನಪು ಮಾಡಿಕೊಳ್ಳಲಾಗುತ್ತದೆ. ಜೂ.14ರಂದು ಸುಶಾಂತ್​ ಅವರ ಮೊದಲ ವರ್ಷದ ಪುಣ್ಯತಿಥಿ. ಸರಿಯಾಗಿ ಒಂದು ವರ್ಷದ ಹಿಂದೆ ಆ ಕರಾಳ ದಿನದಂದು ಮುಂಬೈನ ತಮ್ಮ ಅಪಾರ್ಟ್​ಮೆಂಟ್​ನಲ್ಲಿ ಸುಶಾಂತ್​ ನಿಧನರಾಗಿದ್ದರು. ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್​ ಮೃತದೇಹ ಪತ್ತೆಯಾಗಿತ್ತು. ಅಚ್ಚರಿ ಎಂದರೆ, ಈಗ ಅದೇ ಮನೆ ಬಾಡಿಗೆಗೆ ಲಭ್ಯವಿದೆ!

ಸಮುದ್ರಕ್ಕೆ ಮುಖ ಮಾಡಿರುವ ಈ ಅಪಾರ್ಟ್​ಮೆಂಟ್​ನ ಎರಡು ಮಹಡಿಗಳನ್ನು ಸುಶಾಂತ್​ ಪಡೆದುಕೊಂಡಿದ್ದರು. ಅವರ ನಿಧನದ ಬಳಿಕ ಅದು ಖಾಲಿ ಉಳಿದುಕೊಂಡಿತ್ತು. ಲಾಕ್​ಡೌನ್​ ಕಾರಣದಿಂದಾಗಿ ಹೊಸ ಬಾಡಿಗೆದಾರರು ಬಂದಿರಲಿಲ್ಲ. ಆ ಎರಡೂ ಫ್ಲೋರ್​ಗೆ ಸುಶಾಂತ್​ ಅವರು ನಾಲ್ಕೂವರೆ ಲಕ್ಷ ರೂ. ಬಾಡಿಗೆ ಕಟ್ಟುತ್ತಿದ್ದರು. 2022ರ ಡಿಸೆಂಬರ್​ ತಿಂಗಳವರೆಗೆ ಅವರು ಅಗ್ರೀಮೆಂಟ್​ ಮಾಡಿಕೊಂಡಿದ್ದರು.

ನಿಧನರಾಗುವುದಕ್ಕೂ ಮುನ್ನ ತನ್ನ ಸ್ನೇಹಿತರು ಹಾಗೂ ಪ್ರೇಯಸಿ ರಿಯಾ ಚಕ್ರವರ್ತಿ ಜೊತೆ ಈ ಮನೆಯಲ್ಲಿ ಸುಶಾಂತ್​ ವಾಸಿಸುತ್ತಿದ್ದರು. ಆಗಾಗ ಅವರ ಅಕ್ಕ, ಭಾವ ಕೂಡ ಬಂದು ಹೋಗುತ್ತಿದ್ದರು. ಸುಶಾಂತ್ ಸಾವಿನ ಸುದ್ದಿ ಹೊರಬಿದ್ದ ನಂತರ ಆ ಅಪಾರ್ಟ್​ಮೆಂಟ್​ ಇಡೀ ಪ್ರಕರಣದ ಕೇಂದ್ರ ಬಿಂದು ಆಗಿತ್ತು. ಪೊಲೀಸ್​ ತನಿಖೆ ನಡೆದಿತ್ತು. ಈಗ ಅದೇ ಮನೆ ಬಾಡಿಗೆಗೆ ಲಭ್ಯವಾಗಿದೆ. ತಿಂಗಳ ಬಾಡಿಗೆ 4 ಲಕ್ಷ ರೂ. ಎಂದು ತಿಳಿದುಬಂದಿದೆ.

ಸುಶಾಂತ್​ ಸಿಂಗ್​ ರಜಪೂತ್​ ಪುಣ್ಯ ಸ್ಮರಣೆ ಅಂಗವಾಗಿ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಅವರಿಗೆ ನಮನ ಸಲ್ಲಿಸಿದ್ದಾರೆ. ಸುಶಾಂತ್​ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಪ್ರೇಯಸಿ ರಿಯಾ ಚಕ್ರವರ್ತಿ ಕೂಡ ದೀರ್ಘವಾದ ಪೋಸ್ಟ್​ ಹಾಕಿಕೊಂಡಿದ್ದಾರೆ. ‘ನೀನು ಬಂದು ನನ್ನನ್ನು ಕರೆದುಕೊಂಡು ಹೋಗುತ್ತೀಯ ಎಂದು ನಾನು ಪ್ರತಿದಿನ ನಿನಗಾಗಿ ಕಾಯುತ್ತಿದ್ದೇನೆ’ ಎಂದು ಅವರು ಇನ್​​ಸ್ಟಾಗ್ರಾಮ್​ನಲ್ಲಿ ಬರೆದುಕೊಂಡಿದ್ದಾರೆ.

ಸುಶಾಂತ್​ ಇಹಲೋಕ ತ್ಯಜಿಸಿ ಒಂದು ವರ್ಷ ಕಳೆದರೂ ತನಿಖೆ ಇನ್ನೂ ಜಾರಿಯಲ್ಲಿದೆ. ಸಿಬಿಐ ಅಧಿಕಾರಿಗಳು ಅಂತಿಮ ವರದಿ ಸಲ್ಲಿಸುವುದು ಬಾಕಿ ಇದೆ. ಮಾದಕ ವಸ್ತು ಜಾಲದ ಜೊತೆ ಸುಶಾಂತ್​ ನಂಟು ಹೊಂದಿದ್ದರು ಎಂಬ ಅನುಮಾನ ಕೂಡ ಇರುವುದರಿಂದ ಎನ್​ಸಿಬಿ ಅಧಿಕಾರಿಗಳು ಆ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಸುಶಾಂತ್​ ಅವರ ಹಣಕಾಸಿನ ವ್ಯವಹಾರಗಳ ಬಗ್ಗೆ ಜಾರಿ ನಿರ್ದೇಶನಾಲಯ ತನಿಖೆ ಮಾಡಿದೆ.

ಇದನ್ನೂ ಓದಿ:

SSR Death Anniversary: ಸಾಯುವುದಕ್ಕೂ ಮೊದಲು ಎರಡು ಗಂಟೆಗಳ ಕಾಲ ತಮ್ಮ ಹೆಸರನ್ನೇ ಗೂಗಲ್​ ಮಾಡಿದ್ದ ಸುಶಾಂತ್​?

SSR Case: ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುವುದರೊಳಗೆ ಆದ 30 ಪ್ರಮುಖ ಘಟನೆಗಳೇನು?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?