AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಕಲಾವಿದರು ನಟಿಸಿದ ‘ಕೃಷ್ಣಾವತಾರಂ’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ

ಮೇ 7ರಂದು ಬಿಡುಗಡೆ ಆಗಿರುವ ‘ಕೃಷ್ಣಾವತಾರಂ’ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಾಣುತ್ತಿದೆ. ಈ ಸಿನಿಮಾಗೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ ನೀಡಲಾಗಿದೆ. ಯೋಗಿ ಆದಿತ್ಯನಾಥ್ ಸರ್ಕಾರದ ಈ ನಿರ್ಧಾರದಿಂದಾಗಿ ಈ ಚಿತ್ರವು ಹೆಚ್ಚಿನ ಜನರನ್ನು ತಲುಪುವ ನಿರೀಕ್ಷೆಯಿದೆ. ಆ ಬಗ್ಗೆ ಇಲ್ಲಿದೆ ವಿವರ..

ಕನ್ನಡದ ಕಲಾವಿದರು ನಟಿಸಿದ ‘ಕೃಷ್ಣಾವತಾರಂ’ ಚಿತ್ರಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ವಿನಾಯಿತಿ
Sushmitha Bhat, Karthik Jayaram
ಮದನ್​ ಕುಮಾರ್​
|

Updated on: May 11, 2026 | 4:36 PM

Share

ಪೌರಾಣಿಕ ಕಥಾಹಂದರ ಹೊಂದಿರುವ ‘ಕೃಷ್ಣಾವತಾರಂ’ (Krishnavataram) ಚಿತ್ರಕ್ಕೆ ಈಗ ದೊಡ್ಡ ಮನ್ನಣೆ ಸಿಕ್ಕಿದೆ. ಚಿತ್ರದ ಸಾಂಸ್ಕೃತಿಕ ಮಹತ್ವ ಮತ್ತು ಜನಪ್ರಿಯತೆಯನ್ನು ಪರಿಗಣಿಸಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಚಿತ್ರವನ್ನು ರಾಜ್ಯದಲ್ಲಿ ತೆರಿಗೆ ಮುಕ್ತ (Tax-Free) ಎಂದು ಘೋಷಿಸಿದ್ದಾರೆ. ಇದರಿಂದಾಗಿ ಚಿತ್ರತಂಡಕ್ಕೆ ದೊಡ್ಡ ಬೆಂಬಲ ಸಿಕ್ಕಂತೆ ಆಗಿದೆ. ಹಿಂದಿ, ತೆಲುಗು, ತಮಿಳಿನಲ್ಲಿ ಬಿಡುಗಡೆ ಆಗಿರುವ ಈ ಸಿನಿಮಾದಲ್ಲಿ ಕನ್ನಡದ ಕಲಾವಿದರಾದ ಕಾರ್ತಿಕ್ ಜಯರಾಮ್ (ಜೆಕೆ), ಸುಷ್ಮಿತಾ ಭಟ್ (Sushmitha Bhat) ಕೂಡ ನಟಿಸಿದ್ದಾರೆ ಎಂಬುದು ವಿಶೇಷ.

ಕೇವಲ ತೆರಿಗೆ ಮುಕ್ತಗೊಳಿಸುವುದು ಮಾತ್ರವಲ್ಲದೆ, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಈ ಚಿತ್ರದ ವಿಶೇಷ ಪ್ರದರ್ಶನಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿಗಳು ಮಾಹಿತಿ ಇಲಾಖೆಗೆ ಸೂಚನೆ ನೀಡಿದ್ದಾರೆ. ಇಂದಿನ ಮಕ್ಕಳು ಮತ್ತು ಯುವಜನತೆ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯೊಂದಿಗೆ ಬೆರೆಯುವಂತಾಗಲಿ ಎಂಬುದು ಅವರ ಈ ಆದೇಶದ ಹಿಂದಿನ ಉದ್ದೇಶವಾಗಿದೆ.

ಈ ಘೋಷಣೆಯ ಸಂದರ್ಭದಲ್ಲಿ ‘ಕೃಷ್ಣಾವತಾರಂ’ ಚಿತ್ರತಂಡದವರು ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ನಿರ್ಮಾಪಕರಾದ ಸಜ್ಜನ್ ರಾಜ್ ಕುರುಪ್, ಶೋಭಾ ಸಂತ ಹಾಗೂ ಪೂನಂ ಶ್ರಾಫ್ ಗಜ್ಜರ್, ನಿರ್ದೇಶಕ ಹಾರ್ದಿಕ್ ಗಜ್ಜರ್ ಮತ್ತು ಮುಖ್ಯ ಭೂಮಿಕೆಯ ನಟರಾದ ಸಿದ್ಧಾರ್ಥ್ ಗುಪ್ತಾ ಮತ್ತು ಸಂಸ್ಕೃತಿ ಜಯಾನ ಈ ವೇಳೆ ಉಪಸ್ಥಿತರಿದ್ದರು.

‘ಕೃಷ್ಣಾವತಾರಂ’ ಚಿತ್ರದ ಟ್ರೇಲರ್:

ಮೂರು ಭಾಗಗಳ ಸಿನಿಮಾ ಸರಣಿಯ ಮೊದಲ ಭಾಗವಾಗಿರುವ ‘ಕೃಷ್ಣಾವತಾರಂ: ಪಾರ್ಟ್ 1’ (ಹೃದಯ) ಸಿನಿಮಾ ಈಗಾಗಲೇ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಅದ್ದೂರಿ ದೃಶ್ಯವೈಭವ, ಸುಮಧುರ ಸಂಗೀತ ಮತ್ತು ಕಲಾವಿದರ ನಟನೆಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಚಿತ್ರದಲ್ಲಿ ಸಿದ್ಧಾರ್ಥ್ ಗುಪ್ತಾ, ಸಂಸ್ಕೃತಿ ಜಯಾನ, ಸುಷ್ಮಿತಾ ಭಟ್ ಮತ್ತು ನಿವಾಶಿನಿ ಕೃಷ್ಣನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ತ್ರಿಶಾಗೆ ಒಲಿದು ಬಂದ ಬಿಗ್ ಆಫರ್; ರಜನಿ-ಕಮಲ್ ಹೊಸ ಸಿನಿಮಾಗೆ ನಾಯಕಿ?

‘ಕೃಷ್ಣಾವತಾರಂ ಪಾರ್ಟ್ 1’ ಚಿತ್ರವು ಭಾನುವಾರ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ ಸುಮಾರು 3.25 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಚಿತ್ರದ ಮೊದಲ ವಾರಾಂತ್ಯದ ಒಟ್ಟು ಕಲೆಕ್ಷನ್ ಸುಮಾರು 6.75 ಕೋಟಿ ರೂಪಾಯಿ ತಲುಪಿದೆ. ಈ ಚಿತ್ರದ ತೆಲುಗು ಮತ್ತು ತಮಿಳು ಆವೃತ್ತಿಗಳು ಕೂಡ ಬಿಡುಗಡೆಯಾಗಿದ್ದು, ಅವುಗಳಿಂದ ಸುಮಾರು 50 ಲಕ್ಷ ರೂಪಾಯಿ ಗಳಿಕೆಯಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us