AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suvo Chakraborty: ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಕಿರುತೆರೆ ನಟ

Suvo Chakraborty Video: ಫೇಸ್​ಬುಕ್​ನಲ್ಲಿ ಇದನ್ನು ನೋಡುತ್ತಿದ್ದ ಅಭಿಮಾನಿಗಳಿಗೆ ಟೆನ್ಶನ್​ ಆಗಿದೆ. ಈ ವಿಚಾರವನ್ನು ಅಭಿಮಾನಿಗಳು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಪೊಲೀಸರು ಅವರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

Suvo Chakraborty: ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ ಕಿರುತೆರೆ ನಟ
ಸುವೋ ಚಕ್ರವರ್ತಿ
ರಾಜೇಶ್ ದುಗ್ಗುಮನೆ
| Edited By: |

Updated on:Jun 11, 2021 | 9:47 AM

Share

ಕೊರೊನಾ ವೈರಸ್​ ಎರಡನೇ ಅಲೆ ಜೋರಾದ ಹಿನ್ನೆಲೆಯಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಚಿತ್ರರಂಗದ ಕೆಲಸಗಳು ಅರ್ಧಕ್ಕೆ ನಿಂತಿದ್ದು, ಸಾಕಷ್ಟು ಕಲಾವಿದರು ಕೆಲಸ ಇಲ್ಲದೆ ಮನೆಯಲ್ಲಿ ಕೂರುವಂತಾಗಿದೆ. ಕೆಲ ಕಲಾವಿದರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಅದೇ ರೀತಿ ಕೆಲಸ ಇಲ್ಲದೆ, ಕಿರುತೆರೆ ನಟನೋರ್ವ ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಸುವೋ ಚಕ್ರವರ್ತಿ ಬೆಂಗಾಲಿ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಸರ್ಕಾರ ಹೇರಿರುವ ಲಾಕ್​ಡೌನ್​ನಿಂದ ಅವರಿಗೆ ಕೆಲಸ ಇಲ್ಲದಾಗಿದೆ. ಹೀಗಾಗಿ, ಆರ್ಥಿಕ ಮುಗ್ಗಟ್ಟು ಎದುರಿಸಲು ಸಾಧ್ಯವಾಗದೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಫೇಸ್​ಬುಕ್​ ಲೈವ್​ ಬಂದಿರುವ ಅವರು ನಿದ್ರೆ ಮಾತ್ರೆ ಸೇವನೆ ಮಾಡಿದ್ದಾರೆ.

‘ನನಗೆ ಕಟ್ಟಡದ ಮೇಲಿನಿಂದ ಜಿಗಿಯೋಕೆ ಬರುವುದಿಲ್ಲ. ಕೈ ಕತ್ತರಿಸಿಕೊಳ್ಳುವುದು, ನೇಣು ಹಾಕಿಕೊಳ್ಳುವುದೆಲ್ಲ ಇಷ್ಟವಾಗುವುದಿಲ್ಲ. ಕೊನೆಯದಾಗಿ ನನಗೆ ಸಿಕ್ಕಿದ್ದು ಈ ನಿದ್ರೆ ಮಾತ್ರೆಗಳು’ ಎಂದು ಅವರು ಲೈವ್​ನಲ್ಲಿ ಹೇಳಿದ್ದಾರೆ.

ಫೇಸ್​ಬುಕ್​ನಲ್ಲಿ ಇದನ್ನು ನೋಡುತ್ತಿದ್ದ ಅಭಿಮಾನಿಗಳಿಗೆ ಟೆನ್ಶನ್​ ಆಗಿದೆ. ಈ ವಿಚಾರವನ್ನು ಅಭಿಮಾನಿಗಳು ಪೊಲೀಸರಿಗೆ ತಿಳಿಸಿದ್ದಾರೆ. ತಕ್ಷಣ ಪೊಲೀಸರು ಸುವೋ ಅವರನ್ನು ಪತ್ತೆ ಹಚ್ಚಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಅವಕಾಶಗಳು ಇಲ್ಲದೆ, ಸುವೋ ಆತ್ಮಹತ್ಯೆಗೆ ಪ್ರಯತ್ನಿಸಿದ್ದರು ಎನ್ನಲಾಗಿದೆ.

ಕೊವಿಡ್​ನಿಂದ ಚಿತ್ರರಂಗದ ಸಾಕಷ್ಟು ಕಲಾವಿದರಿಗೆ ಕೆಲಸ ಇಲ್ಲದಂತಾಗಿದೆ. ‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸೀರಿಸ್​ನಲ್ಲಿ ಕೌನ್ಸಿಲರ್​ ಆಗಿ ಕಾಣಿಸಿಕೊಂಡಿದ್ದು ಆಸಿಫ್​ ಬಸ್ರಾ ಕಳೆದ ನವೆಂಬರ್​ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಟ ಆಸಿಫ್​ ಬಸ್ರಾರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಹಿಮಾಚಲ ಪ್ರದೇಶದ ಧರಮ್​ಶಾಲಾದ ಖಾಸಗಿ ಕಟ್ಟದವೊಂದರಲ್ಲಿ ನವೆಂಬರ್​ನಲ್ಲಿ ಪತ್ತೆಯಾಗಿತ್ತು. ಆಸಿಫ್​ ಬಸ್ರಾ ಹಲವು ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರದಲ್ಲಿ ನಟಿಸುವ ಮೂಲಕ ತಮ್ಮದೇ ವಿಭಿನ್ನ ಛಾಪು ಮೂಡಿಸಿದ್ದರು. ಲಾಕ್​ಡೌನ್ ತಂದೊಡ್ಡಿದ​ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಸುಂದರ ಸಂಸಾರಕ್ಕೆ ಕೊಳ್ಳಿ ಇಟ್ಟ ಆ ಒಂದು ವಿಷಯ.. ನಿರ್ಜನ ಪ್ರದೇಶದಲ್ಲಿ ಗಂಡನ ಆತ್ಮಹತ್ಯೆ, ಪತ್ನಿ ಆಸ್ಪತ್ರೆಗೆ ದಾಖಲು

Published On - 6:46 pm, Thu, 10 June 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್