AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​

ಯಾವುದೇ ಸ್ಟಾರ್ ಸೆಲೆಬ್ರಿಟಿಗಳು ತಮ್ಮ ವೈವಾಹಿಕ ಸಂಬಂಧವನ್ನು ಕೊನೆಗಾಣಿಸಲು ಬಯಸಿದರೆ ಅವರು ಮೊದಲು ಮಾಡೋದು ಫೋಟೋ ಡಿಲೀಟ್ ಮಾಡುವ ಕೆಲಸ. ಸ್ವಾತಿ ರೆಡ್ಡಿ ಕೂಡ ಇದನ್ನೇ ಮಾಡಿದ್ದಾರೆ.

ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​
ವಿಕಾಸ್-ಸ್ವಾತಿ
ರಾಜೇಶ್ ದುಗ್ಗುಮನೆ
|

Updated on: Jul 18, 2023 | 12:36 PM

Share

ಕ್ರೈಮ್ ಥ್ರಿಲ್ಲರ್ ಸಿನಿಮಾಗಳಿಗೆ ಬರ ಇಲ್ಲ. ಬಹುತೇಕ ಕ್ರೈಮ್ ಥ್ರಿಲ್ಲರ್ ಸಿನಿಮಾಗಳಲ್ಲಿ ಕೊಲೆಗಾರ ಮಾಡುವ ಹತ್ಯೆಯ ಪ್ಯಾಟರ್ನ್ ಆಧರಿಸಿ ಇದೆಲ್ಲವನ್ನೂ ಮಾಡುತ್ತಿರುವುದು ಒಬ್ಬನೇ ವ್ಯಕ್ತಿ ಎಂಬುದನ್ನು ಕಂಡು ಹಿಡಿಯಲಾಗುತ್ತಿದೆ. ಅದೇ ರೀತಿ ಇತ್ತೀಚೆಗೆ ವಿಚ್ಛೇದನ ಪಡೆಯಲಿರುವ ಸೆಲೆಬ್ರಿಟಿಗಳು ಕೂಡ ಒಂದು ಪ್ಯಾಟರ್ನ್ ಫಾಲೋ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಮೊದಲು ಪತಿ ಜೊತೆ ಇರೋ ಫೋಟೋ ಡಿಲೀಟ್ ಮಾಡುವುದು, ಆ ಬಳಿಕ ವಿಚ್ಛೇದನದ ಬಗ್ಗೆ ಘೋಷಣೆ ಮಾಡುವುದು. ಈ ಸಾಲಿಗೆ ಈಗ ಟಾಲಿವುಡ್​ನ ನಟಿಯೊಬ್ಬರು ಸೇರ್ಪಡೆ ಆಗುತ್ತಿದ್ದಾರೆ. ಅವರು ಬೇರಾರೂ ಅಲ್ಲ ಸ್ವಾತಿ ರೆಡ್ಡಿ (Swathi Reddy).

ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿ ಸ್ವಾತಿ ಫೇಮಸ್ ಆಗಿದ್ದಾರೆ. 2014ರಲ್ಲಿ ರಿಲೀಸ್ ಆದ ‘ಕಾರ್ತಿಕೇಯ’ ಸಿನಿಮಾದಲ್ಲಿ ಅವರು ನಟಿಸಿದ್ದರು. 2018ರಲ್ಲಿ ಅವರು ವಿಕಾಸ್ ವಾಸು ಅವರನ್ನು ಮದುವೆ ಆದರು. ವಿವಾಹದ ಬಳಿಕ ಸ್ವಾತಿ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಮದುವೆ ಆಗಿ 5 ವರ್ಷಗಳು ಕಳೆದಿವೆ. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿ ಜೊತೆ ಇರುವ ಫೋಟೋ ಡಿಲೀಟ್ ಮಾಡಿಕೊಂಡಿದ್ದಾರೆ. ಇದನ್ನು ನೋಡಿದ ಅನೇಕರು ವಿಚ್ಛೇದನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಯಾವುದೇ ಸ್ಟಾರ್ ಸೆಲೆಬ್ರಿಟಿಗಳು ತಮ್ಮ ವೈವಾಹಿಕ ಸಂಬಂಧವನ್ನು ಕೊನೆಗಾಣಿಸಲು ಬಯಸಿದರೆ ಅವರು ಮೊದಲು ಮಾಡೋದು ಫೋಟೋ ಡಿಲೀಟ್ ಮಾಡುವ ಕೆಲಸ. ಸಮಂತಾ-ನಾಗ ಚೈತನ್ಯ ಮತ್ತು ನಿಹಾರಿಕಾ-ಚೈತನ್ಯ ಜೊನ್ನಲಗಡ್ಡ ವಿಚ್ಛೇದನಕ್ಕೂ ಮೊದಲು ಮಾಡಿದ್ದು ಇದನ್ನೇ. ಈಗ ಸ್ವಾತಿ ರೆಡ್ಡಿ ವಿಚಾರದಲ್ಲೂ ಹಾಗೆಯೇ ಆಗುತ್ತದೆ ಎಂದು ಕೆಲವರು ಊಹಿಸುತ್ತಿದ್ದಾರೆ.

ಇದನ್ನೂ ಓದಿ: Niharika Konidela: ಚಿರಂಜೀವಿ ಮನೆ ಮಗಳು ನಿಹಾರಿಕಾ ವಿಚ್ಛೇದನಕ್ಕೆ ಇದುವೇ ಕಾರಣ..

ಸ್ವಾತಿ ವಿಚ್ಛೇದನದ ಬಗ್ಗೆ ಈ ರೀತಿ ಸುದ್ದಿ ಹರಿದಾಡಿದ್ದು ಇದೇ ಮೊದಲಲ್ಲ. ಎರಡು ವರ್ಷಗಳ ಹಿಂದೆಯೂ ಸ್ವಾತಿ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ವೇಳೆ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದರು. ಈಗ ಮತ್ತದೇ ವಿಚಾರಕ್ಕೆ ಅವರು ಸುದ್ದಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ