AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​

ಯಾವುದೇ ಸ್ಟಾರ್ ಸೆಲೆಬ್ರಿಟಿಗಳು ತಮ್ಮ ವೈವಾಹಿಕ ಸಂಬಂಧವನ್ನು ಕೊನೆಗಾಣಿಸಲು ಬಯಸಿದರೆ ಅವರು ಮೊದಲು ಮಾಡೋದು ಫೋಟೋ ಡಿಲೀಟ್ ಮಾಡುವ ಕೆಲಸ. ಸ್ವಾತಿ ರೆಡ್ಡಿ ಕೂಡ ಇದನ್ನೇ ಮಾಡಿದ್ದಾರೆ.

ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​
ವಿಕಾಸ್-ಸ್ವಾತಿ
ರಾಜೇಶ್ ದುಗ್ಗುಮನೆ
|

Updated on: Jul 18, 2023 | 12:36 PM

Share

ಕ್ರೈಮ್ ಥ್ರಿಲ್ಲರ್ ಸಿನಿಮಾಗಳಿಗೆ ಬರ ಇಲ್ಲ. ಬಹುತೇಕ ಕ್ರೈಮ್ ಥ್ರಿಲ್ಲರ್ ಸಿನಿಮಾಗಳಲ್ಲಿ ಕೊಲೆಗಾರ ಮಾಡುವ ಹತ್ಯೆಯ ಪ್ಯಾಟರ್ನ್ ಆಧರಿಸಿ ಇದೆಲ್ಲವನ್ನೂ ಮಾಡುತ್ತಿರುವುದು ಒಬ್ಬನೇ ವ್ಯಕ್ತಿ ಎಂಬುದನ್ನು ಕಂಡು ಹಿಡಿಯಲಾಗುತ್ತಿದೆ. ಅದೇ ರೀತಿ ಇತ್ತೀಚೆಗೆ ವಿಚ್ಛೇದನ ಪಡೆಯಲಿರುವ ಸೆಲೆಬ್ರಿಟಿಗಳು ಕೂಡ ಒಂದು ಪ್ಯಾಟರ್ನ್ ಫಾಲೋ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಮೊದಲು ಪತಿ ಜೊತೆ ಇರೋ ಫೋಟೋ ಡಿಲೀಟ್ ಮಾಡುವುದು, ಆ ಬಳಿಕ ವಿಚ್ಛೇದನದ ಬಗ್ಗೆ ಘೋಷಣೆ ಮಾಡುವುದು. ಈ ಸಾಲಿಗೆ ಈಗ ಟಾಲಿವುಡ್​ನ ನಟಿಯೊಬ್ಬರು ಸೇರ್ಪಡೆ ಆಗುತ್ತಿದ್ದಾರೆ. ಅವರು ಬೇರಾರೂ ಅಲ್ಲ ಸ್ವಾತಿ ರೆಡ್ಡಿ (Swathi Reddy).

ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿ ಸ್ವಾತಿ ಫೇಮಸ್ ಆಗಿದ್ದಾರೆ. 2014ರಲ್ಲಿ ರಿಲೀಸ್ ಆದ ‘ಕಾರ್ತಿಕೇಯ’ ಸಿನಿಮಾದಲ್ಲಿ ಅವರು ನಟಿಸಿದ್ದರು. 2018ರಲ್ಲಿ ಅವರು ವಿಕಾಸ್ ವಾಸು ಅವರನ್ನು ಮದುವೆ ಆದರು. ವಿವಾಹದ ಬಳಿಕ ಸ್ವಾತಿ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಮದುವೆ ಆಗಿ 5 ವರ್ಷಗಳು ಕಳೆದಿವೆ. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿ ಜೊತೆ ಇರುವ ಫೋಟೋ ಡಿಲೀಟ್ ಮಾಡಿಕೊಂಡಿದ್ದಾರೆ. ಇದನ್ನು ನೋಡಿದ ಅನೇಕರು ವಿಚ್ಛೇದನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಯಾವುದೇ ಸ್ಟಾರ್ ಸೆಲೆಬ್ರಿಟಿಗಳು ತಮ್ಮ ವೈವಾಹಿಕ ಸಂಬಂಧವನ್ನು ಕೊನೆಗಾಣಿಸಲು ಬಯಸಿದರೆ ಅವರು ಮೊದಲು ಮಾಡೋದು ಫೋಟೋ ಡಿಲೀಟ್ ಮಾಡುವ ಕೆಲಸ. ಸಮಂತಾ-ನಾಗ ಚೈತನ್ಯ ಮತ್ತು ನಿಹಾರಿಕಾ-ಚೈತನ್ಯ ಜೊನ್ನಲಗಡ್ಡ ವಿಚ್ಛೇದನಕ್ಕೂ ಮೊದಲು ಮಾಡಿದ್ದು ಇದನ್ನೇ. ಈಗ ಸ್ವಾತಿ ರೆಡ್ಡಿ ವಿಚಾರದಲ್ಲೂ ಹಾಗೆಯೇ ಆಗುತ್ತದೆ ಎಂದು ಕೆಲವರು ಊಹಿಸುತ್ತಿದ್ದಾರೆ.

ಇದನ್ನೂ ಓದಿ: Niharika Konidela: ಚಿರಂಜೀವಿ ಮನೆ ಮಗಳು ನಿಹಾರಿಕಾ ವಿಚ್ಛೇದನಕ್ಕೆ ಇದುವೇ ಕಾರಣ..

ಸ್ವಾತಿ ವಿಚ್ಛೇದನದ ಬಗ್ಗೆ ಈ ರೀತಿ ಸುದ್ದಿ ಹರಿದಾಡಿದ್ದು ಇದೇ ಮೊದಲಲ್ಲ. ಎರಡು ವರ್ಷಗಳ ಹಿಂದೆಯೂ ಸ್ವಾತಿ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ವೇಳೆ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದರು. ಈಗ ಮತ್ತದೇ ವಿಚಾರಕ್ಕೆ ಅವರು ಸುದ್ದಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ