ಕಂಗನಾ ರಣಾವತ್​-ತಾಪ್ಸೀ ಪನ್ನು ಈಗ ಫ್ರೆಂಡ್ಸ್​! ಜಗಳ ಅಂತ್ಯ ಆಗಿದ್ದಕ್ಕೆ ಕಾರಣ ಏನು?

ರಾಜಕೀಯದಲ್ಲಿ ಯಾರಿಗೆ ಯಾರೂ ಮಿತ್ರರಲ್ಲ, ಶತ್ರುವೂ ಅಲ್ಲ ಎಂಬ ಮಾತಿದೆ. ಅದು ಸಿನಿಮಾ ಕ್ಷೇತ್ರದ ರಾಜಕೀಯಕ್ಕೂ ಅನ್ವಯ ಆಗಬಹುದೇನೋ. ಕಂಗನಾ ಮತ್ತು ತಾಪ್ಸೀ ನಡುವೆ ಸ್ನೇಹ ಚಿಗುರಿರುವುದು ಕಂಡು ಸಿನಿಪ್ರಿಯರು ಅಚ್ಚರಿಪಟ್ಟಿದ್ದಾರೆ.

ಕಂಗನಾ ರಣಾವತ್​-ತಾಪ್ಸೀ ಪನ್ನು ಈಗ ಫ್ರೆಂಡ್ಸ್​! ಜಗಳ ಅಂತ್ಯ ಆಗಿದ್ದಕ್ಕೆ ಕಾರಣ ಏನು?
ಕಂಗನಾ ರಣಾವತ್​-ತಾಪ್ಸೀ ಪನ್ನು

Updated on: Apr 11, 2021 | 8:27 AM

ಬಾಲಿವುಡ್​ ನಟಿ ಕಂಗನಾ ರಣಾವತ್​ ಅವರು ಅನೇಕರ ವಿರೋಧ ಕಟ್ಟಿಕೊಂಡಿದ್ದಾರೆ. ತಮ್ಮ ಅನಿಸಿಕೆಯನ್ನು ನೇರವಾಗಿ ಹೇಳುವ ಭರದಲ್ಲಿ ಹಲವು ಸೆಲೆಬ್ರಿಟಿಗಳ ಜೊತೆ ಅವರು ಜಗಳ ಮಾಡಿಕೊಂಡಿದ್ದಾರೆ. ಸಿದ್ಧಾಂತದ ಕಾರಣದಿಂದಲೂ ಕಂಗನಾ ಆಗಾಗ ಕಿರಿಕ್​ ಮಾಡಿಕೊಳ್ಳುತ್ತ ಇರುತ್ತಾರೆ. ಅದರಲ್ಲೂ ನಟಿ ತಾಪ್ಸೀ ಪನ್ನು ಜೊತೆ ಕಂಗನಾ ಹಲವು ಬಾರಿ ಕಿತ್ತಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇಬ್ಬರ ನಡುವೆ ಎಷ್ಟೋ ಸಲ ಜಗಳ ಆಗಿದೆ. ಆದರೆ ಈಗ ಏಕಾಏಕಿ ಇಬ್ಬರೂ ಫ್ರೆಂಡ್ಸ್​ ಆಗಿದ್ದಾರೆ!

ರಾಜಕೀಯದಲ್ಲಿ ಯಾರಿಗೆ ಯಾರೂ ಮಿತ್ರರಲ್ಲ, ಶತ್ರುವೂ ಅಲ್ಲ ಎಂಬ ಮಾತಿದೆ. ಅದು ಸಿನಿಮಾ ಕ್ಷೇತ್ರದ ರಾಜಕೀಯಕ್ಕೂ ಅನ್ವಯ ಆಗಬಹುದೇನೋ. ಕಂಗನಾ ರಣಾವತ್​ ಮತ್ತು ತಾಪ್ಸೀ ಪನ್ನು ನಡುವಿನ ಮಾತುತೆ ಗಮನಿಸಿದರೆ ಹಾಗೇ ಅನಿಸುತ್ತದೆ. ಇಷ್ಟು ದಿನಗಳ ಕಾಲ ಬಹಿರಂಗವಾಗಿ ಬೈಯ್ದುಕೊಂಡಿದ್ದ ಈ ನಟಿಯರು ಈಗ ಒಬ್ಬರನ್ನೊಬ್ಬರು ಹೊಗಳಿಕೊಂಡಿದ್ದಾರೆ.

ಇತ್ತೀಚೆಗೆ ತಾಪ್ಸೀ ಪನ್ನು ಅವರಿಗೆ ಫಿಲ್ಮ್​ ಫೇರ್​ ಪ್ರಶಸ್ತಿ ಸಿಕ್ಕಿತು. ತಪ್ಪಡ್​ ಸಿನಿಮಾದಲ್ಲಿನ ನಟನೆಗಾಗಿ ಅವರು ‘ಅತ್ಯುತ್ತಮ ನಟಿ’ ಎಂಬ ಮನ್ನಣೆಗೆ ಪಾತ್ರರಾದರು. ಈ ಪ್ರಶಸ್ತಿಯನ್ನು ಸ್ವೀಕರಿಸಲು ವೇದಿಕೆ ಏರಿದ ಸಂದರ್ಭದಲ್ಲಿ ಕಂಗನಾಗೆ ತಾಪ್ಸೀ ಧನ್ಯವಾದ ಹೇಳಿದ್ದಾರೆ! ಇದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ‘ಗಡಿಗಳನ್ನು ಮೀರಿ ಬೆಳೆಯುವಂತೆ ಮಾಡಿದ್ದಕ್ಕಾಗಿ ಕಂಗನಾ ನಿಮಗೆ ಧನ್ಯವಾದಗಳು. ಪ್ರತಿ ವರ್ಷ ನಿಮ್ಮ ನಟನೆ ಅತ್ಯುತ್ತಮ ಆಗುತ್ತಲೇ ಇದೆ’ ಎಂದು ತಾಪ್ಸೀ ಹೇಳಿದ್ದಾರೆ.

ಈ ವಿಡಿಯೋ ಅನೇಕರಿಗೆ ಇಷ್ಟ ಆಗಿದೆ. ಹಾಗಾಗಿ ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ಅದು ಕಂಗನಾ ರಣಾವತ್​ ಅವರ ಗಮನಕ್ಕೂ ಬಂದಿದೆ. ತಾಪ್ಸೀ ಮಾತಿಗೆ ಕಂಗನಾ ಅಷ್ಟೇ ಸ್ನೇಹಪೂರ್ವಕವಾಗಿ ಉತ್ತರಿಸಿದ್ದಾರೆ. ‘ಧನ್ಯವಾದಗಳು… ಫಿಲ್ಮ್​ ಫೇರ್​ ಪ್ರಶಸ್ತಿಗೆ ಬೇರೆ ಯಾರೂ ನಿಮಗಿಂತ ಹೆಚ್ಚು ಅರ್ಹರಿಲ್ಲ’ ಎಂದು ಕಂಗನಾ ಪ್ರತಿಕ್ರಿಯಿಸಿದ್ದಾರೆ. ಒಟ್ಟಿನಲ್ಲಿ ಇಬ್ಬರ ನಡುವೆ ಸ್ನೇಹ ಚಿಗುರಿರುವುದು ಕಂಡು ಸಿನಿಪ್ರಿಯರು ಅಚ್ಚರಿಪಟ್ಟಿದ್ದಾರೆ.

ಬಾಲಿವುಡ್​ನಲ್ಲಿ ಬೇರೂರಿರುವ ನೆಪೋಟಿಸಂ, ಸುಶಾಂತ್​ ಆತ್ಮಹತ್ಯೆ ಪ್ರಕರಣ, ನಿರ್ದೇಶಕ ಅನುರಾಗ್​ ಕಶ್ಯಪ್​ ಮೇಲಿನ ಮೀಟೂ ಆರೋಪ, ದೆಹಲಿಯಲ್ಲಿ ನಡೆದ ರೈತರ ಪ್ರತಿಭಟನೆ ಮುಂತಾದ ಎಲ್ಲ ವಿಚಾರಗಳಲ್ಲೂ ತಾಪ್ಸೀ ಪನ್ನು ಮತ್ತು ಕಂಗನಾ ರಣಾವತ್​ ಭಿನ್ನಾಭಿಪ್ರಾಯ ಹೊಂದಿದ್ದರು ಹಾಗೂ ಪರಸ್ಪರ ವಾಗ್ವಾದ ಮಾಡಿಕೊಂಡಿದ್ದರು.

ಇದನ್ನೂ ಓದಿ: ಜ್ಚರ ಇದ್ದರೂ ಲೆಕ್ಕಿಸದೆ ಶೂಟಿಂಗ್ ಮಾಡಿದ ನಟಿ ಕಂಗನಾ

ಜ್ಚರ ಇದ್ದರೂ ಲೆಕ್ಕಿಸದೆ ಶೂಟಿಂಗ್ ಮಾಡಿದ ನಟಿ ಕಂಗನಾ

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us