AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ; ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು

ಬಹಿರಂಗವಾಗಿ ಜಾತಿನಿಂದನೆ ಮಾಡಿರುವುದಕ್ಕೆ ಮುನ್​ಮುನ್​ ದತ್ತ ಅವರನ್ನು ಅರೆಸ್ಟ್​ ಮಾಡಬೇಕು ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. #ArrestMunmunDutta ಎಂಬ ಹ್ಯಾಷ್​ ಟ್ಯಾಗ್​ ಮೂಲಕ ಟ್ರೆಂಡ್​ ಮಾಡಲಾಗುತ್ತಿದೆ.

ಜಾತಿನಿಂದನೆ ಮಾಡಿದ ಖ್ಯಾತ ಕಿರುತೆರೆ ನಟಿ; ಹಿಗ್ಗಾಮುಗ್ಗಾ ಕ್ಲಾಸ್​ ತೆಗೆದುಕೊಂಡ ನೆಟ್ಟಿಗರು
ಮುನ್ ಮುನ್ ದತ್ತ
ಮದನ್​ ಕುಮಾರ್​
|

Updated on: May 11, 2021 | 11:27 AM

Share

ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಮಾತನಾಡುವಾಗ ಎಷ್ಟು ಹುಷಾರಾಗಿದ್ದರೂ ಸಾಲದು. ಅಪ್ಪಿತಪ್ಪಿ ಒಂದು ಮಾತು ಬೇರೆ ಅರ್ಥ ಪಡೆದುಕೊಂಡರೆ ದೊಡ್ಡ ವಿವಾದವೇ ಆಗಿ ಹೋಗುತ್ತದೆ. ಅಂಥದ್ದರಲ್ಲಿ ನೇರಾನೇರವಾಗಿ ಒಂದು ಜಾತಿಯ ಬಗ್ಗೆ ಕೀಳಾಗಿ ಮಾತನಾಡಿದರೆ ಜನರು ಬಿಡುತ್ತಾರಾ? ಖಂಡಿತಾ ಇಲ್ಲ. ಹಿಂದಿ ಕಿರುತೆರೆಯ ಖ್ಯಾತ ನಟಿ ಮುನ್​ಮುನ್​ ದತ್ತ ಅವರು ಇಂಥ ಒಂದು ಯಡವಟ್ಟು ಮಾಡಿಕೊಂಡಿದ್ದಾರೆ.

ಲಾಕ್​ಡೌನ್​ ಇರುವ ಕಾರಣ ಈಗ ಆನ್​ಲೈನ್​ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿ ಇರಲು ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ಹಿಂದಿಯ ‘ತಾರಕ್​ ಮೆಹ್ತಾ ಕಾ ಉಲ್ಟಾ ಚಸ್ಮಾ’ ಸೀರಿಯಲ್​ ಖ್ಯಾತಿಯ ನಟಿ ಮುನ್​ಮುನ್​ ದತ್ತ​ ಕೂಡ ಇತ್ತೀಚೆಗೆ ಒಂದು ವಿಡಿಯೋ ಮಾಡಿ ಯೂಟ್ಯೂಬ್​ನಲ್ಲಿ ಹಂಚಿಕೊಂಡರು. ಆ ಸಂದರ್ಭದಲ್ಲಿ ಅವರು ಆಡಿದ ಒಂದು ಮಾತು ತೀವ್ರ ವಿವಾದಕ್ಕೆ ಕಾರಣ ಆಗಿದೆ. ಏನನ್ನೋ ಮಾತನಾಡುವ ಭರದಲ್ಲಿ ಅವರು ಜಾತಿ ನಿಂದನೆ ಮಾಡಿದ್ದಾರೆ.

ಯೂಟ್ಯೂಬ್​ ವಿಡಿಯೋದಲ್ಲಿ ತಮ್ಮ ಮೇಕಪ್ ಬಗ್ಗೆ ಮುನ್​ಮುನ್​ ದತ್ತ ಮಾಹಿತಿ ನೀಡುತ್ತಿದ್ದರು. ‘ಯೂಟ್ಯೂಬ್​ನಲ್ಲಿ ಎಲ್ಲರ ಎದುರಿಗೆ ಬರುತ್ತಿದ್ದೇನೆ. ಚೆನ್ನಾಗಿ ಕಾಣಬೇಕು ಅಂತ ಸ್ವಲ್ಪ ಮೇಕಪ್​ ಮಾಡಿಕೊಂಡಿದ್ದೇನೆ. ಆ ಜಾತಿಯವರ ರೀತಿ ಕಾಣಲು ನನಗೆ ಇಷ್ಟ ಇಲ್ಲ’ ಎಂದು ಒಂದು ನಿರ್ದಿಷ್ಟ ಜಾತಿಯ ಹೆಸರು ಹೇಳಿದ್ದಾರೆ. ಅದೇ ಈಗ ವಿವಾದಕ್ಕೆ ಕಾರಣ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ಮುನ್​ಮುನ್​ ದತ್ತ ಅವರನ್ನು ಜನರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೀಗೆ ಬಹಿರಂಗವಾಗಿ ಜಾತಿ ನಿಂದನೆ ಮಾಡಿರುವುದಕ್ಕೆ ಮುನ್​ಮುನ್​ ದತ್ತ ಅವರನ್ನು ಅರೆಸ್ಟ್​ ಮಾಡಬೇಕು ಎಂದು ಎಲ್ಲರೂ ಒತ್ತಾಯ ಮಾಡುತ್ತಿದ್ದಾರೆ. #ArrestMunmunDutta ಎಂಬ ಹ್ಯಾಷ್​ ಟ್ಯಾಗ್​ ಮೂಲಕ ಟ್ರೆಂಡ್​ ಮಾಡಲಾಗುತ್ತಿದೆ. ‘ಈಕೆ ತನ್ನನ್ನು ತಾನು ಪ್ರಾಣಿ ಪ್ರಿಯೆ ಎಂದು ಕರೆದುಕೊಂಡಿದ್ದಾಳೆ. ಆದರೆ ಮನುಷ್ಯರನ್ನು ಪ್ರೀತಿಸುವುದನ್ನು ಮರೆತಿದ್ದಾಳೆ’ ಎಂದು ಜನರು ಟ್ರೋಲ್​ ಮಾಡುತ್ತಿದ್ದಾರೆ.

ವಿಷಯ ಇಷ್ಟು ಸೀರಿಯಸ್​ ಆದ ಬಳಿಕ ಟ್ವಿಟರ್​ ಮೂಲಕ ಮುನ್​ಮುನ್​ ದತ್ತ ಕ್ಷಮೆ ಕೇಳಿದ್ದಾರೆ. ‘ಯಾರಿಗೂ ನೋವು ಮಾಡಬೇಕು ಎಂಬ ಉದ್ದೇಶದಿಂದ ನಾನು ಆ ಪದ ಬಳಸಿರಲಿಲ್ಲ. ನನ್ನ ಭಾಷೆಯ ಮಿತಿಯಿಂದಾಗಿ ಆ ಪದದ ಸರಿಯಾದ ಅರ್ಥ ನನಗೆ ತಿಳಿದಿರಲಿಲ್ಲ. ಎಲ್ಲರ ಜಾತಿ, ಧರ್ಮ, ಜನಾಂಗದ ಬಗ್ಗೆ ನಾನು ಗೌರವ ಹೊಂದಿದ್ದೇನೆ. ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ’ ಎಂದು ಮುನ್​ಮುನ್​ ದತ್ತ ಟ್ವಿಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 

ದೌರ್ಜನ್ಯದಲ್ಲಿ ನೊಂದ ಪರಿಶಿಷ್ಟ ಜಾತಿ-ಪಂಗಡದ ಸಂತ್ರಸ್ತರಿಗೆ 75.36 ಲಕ್ಷ ರೂ. ಪರಿಹಾರ ಧನ ವಿತರಣೆ ಮಾಡಿದ ವಿಜಯಪುರ ಜಿಲ್ಲಾಡಳಿತ

ಲಕ್ಷ್ಮೀನಾರಾಯಣ ಭಟ್ಟ​ ಭಾವನಮನ: ಜಾತಿ ನೋಡಿ ಪಾಠ ಮಾಡುವವರು ಎಂದಾದರೂ ಮೇಷ್ಟ್ರಾಗಲು ಸಾಧ್ಯ ಇದೆಯಾ?

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು