AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟಾರ್​ ನಟಿ ತಮನ್ನಾಗೆ ಸಂಭಾವನೆ ಕೊಡದೆ ಮೋಸ; ಹೀಗಾದ್ರೆ ಉಳಿದವರ ಕಥೆ ಏನು?

ತೆಲುಗಿನ ಜನಪ್ರಿಯ ವಾಹಿನಿ ಜೆಮಿನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಡುಗೆ ಶೋ ‘ಮಾಸ್ಟರ್​ ಶೆಫ್’​ಅನ್ನು ತಮನ್ನಾ ನಡೆಸಿಕೊಡುತ್ತಿದ್ದರು. ಈ ಶೋ ನಿರೂಪಣೆಗೆ ತಮನ್ನಾ ಕೋಟಿ ಮೊತ್ತದ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು.

ಸ್ಟಾರ್​ ನಟಿ ತಮನ್ನಾಗೆ ಸಂಭಾವನೆ ಕೊಡದೆ ಮೋಸ; ಹೀಗಾದ್ರೆ ಉಳಿದವರ ಕಥೆ ಏನು?
ತಮನ್ನಾ
TV9 Web
| Edited By: |

Updated on: Oct 25, 2021 | 3:10 PM

Share

ನಟಿ ತಮನ್ನಾ ಭಾಟಿಯಾಗೆ ದೇಶಾದ್ಯಂತ ಫ್ಯಾನ್ಸ್​ ಇದ್ದಾರೆ. ಅವರ ಮೈಮಾಟ ಹಾಗೂ ನಟನೆಗೆ ಫಿದಾ ಆಗದವರೇ ಇಲ್ಲ. ಹಲವು ಸ್ಟಾರ್ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ತಮನ್ನಾಗೆ ಇದೆ. ಇಷ್ಟೊಂದು ಸ್ಟಾರ್ ಗಿರಿ ಇಟ್ಟುಕೊಂಡ ಹೊರತಾಗಿಯೂ ಅವರಿಗೆ ಮೋಸ ಆಗಿದೆ. ಈ ಕುರಿತಂತೆ ಅವರು ಕೋರ್ಟ್​ ಮೆಟ್ಟಿಲು ಹತ್ತೋಕೆ ನಿರ್ಧರಿಸಿದ್ದಾರೆ.

ತೆಲುಗಿನ ಜನಪ್ರಿಯ ವಾಹಿನಿ ಜೆಮಿನಿ ಟಿವಿಯಲ್ಲಿ ಪ್ರಸಾರವಾಗುತ್ತಿರುವ ಅಡುಗೆ ಶೋ ‘ಮಾಸ್ಟರ್​ ಶೆಫ್’​ಅನ್ನು ತಮನ್ನಾ ನಡೆಸಿಕೊಡುತ್ತಿದ್ದರು. ಈ ಶೋ ನಿರೂಪಣೆಗೆ ತಮನ್ನಾ ಕೋಟಿ ಮೊತ್ತದ ಸಂಭಾವನೆ ತೆಗೆದುಕೊಳ್ಳುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ, ಈಗ ಅವರಿಗೆ ಸಂಭಾವನೆ ಸರಿಯಾಗಿ ಸಿಕ್ಕಿಲ್ಲ. ಇದರ ಜತೆಗೆ ಸೆಟ್​ನಲ್ಲಿ ಅವರ ಜತೆಗೆ ಯಾರೂ ಸರಿಯಾಗಿ ನಡೆದುಕೊಂಡಿಲ್ಲ. ಈ ಕಾರಣಕ್ಕೆ ಅವರು ಕೋರ್ಟ್​ ಮೆಟ್ಟಿಲು ಹತ್ತುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಆಗಸ್ಟ್​ 27ರಂದು ಈ ಶೋ ಆರಂಭಗೊಂಡಿತ್ತು. 20ಕ್ಕೂ ಹೆಚ್ಚು ಎಪಿಸೋಡ್​ಗಳಲ್ಲಿ ತಮನ್ನಾ ಕಾಣಿಸಿಕೊಂಡಿದ್ದಾರೆ. ಆದರೆ, ಈಗ ವಾಹಿನಿಯವರು ತಮನ್ನಾಗೆ ಸರಿಯಾದ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿಲ್ಲ. ಇನ್ನು, ಅವರಿಗೆ ಬರಬೇಕಾದ ಸಂಭಾವನೆ ಕೂಡ ಬಂದಿಲ್ಲ. ಈ ಎಲ್ಲಾ ಕಾರಣಕ್ಕೆ ಅವರು ಶೋನಿಂದ ಹೊರ ಬಂದಿದ್ದಾರೆ. ಖ್ಯಾತ ಆ್ಯಂಕರ್​ ಅನುಸೂಯಾ ಭಾರದ್ವಾಜ್​ ಈ ಶೋ ಮುನ್ನಡೆಸಿಕೊಡುತ್ತಿದ್ದಾರೆ. ಸ್ಟಾರ್​ ನಟಿಗೆ ಈ ರೀತಿ ಮೋಸ ಆದರೆ, ಯುವ ಕಲಾವಿದರ ಕಥೆ ಏನು ಎಂದು ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ.

ಹಿಂದಿಯಲ್ಲಿ ತೆರೆಗೆ ಬಂದಿದ್ದ ಸೂಪರ್​ ಹಿಟ್​ ಚಿತ್ರ ‘ಅಂಧಾಧುನ್​’ ಸಿನಿಮಾದ ತೆಲುಗು ರಿಮೇಕ್​ನಲ್ಲಿ ತಮನ್ನಾ ನಟಿಸಿದ್ದರು. ಈ ಸಿನಿಮಾ ಇತ್ತೀಚೆಗೆ ತೆರೆಗೆ ಬಂದಿತ್ತು. ಹಿಂದಿಯಲ್ಲಿ ಟಬು ಮಾಡಿದ್ದ ಪಾತ್ರವನ್ನು ತೆಲುಗಿನಲ್ಲಿ ತಮನ್ನಾ ಮಾಡಿದ್ದರು. ರಾಧಿಕಾ ಆಪ್ಟೆ ಮಾಡಿದ ಪಾತ್ರಕ್ಕೆ ನಭಾ ನಟೇಶ್​ ಜೀವ ತುಂಬಿದ್ದರು. ​ ಆಯುಷ್ಮಾನ್​ ಖುರಾನಾ ಮಾಡಿದ ಪಾತ್ರದಲ್ಲಿ ನಿತೀನ್ ಕಾಣಿಸಿಕೊಂಡಿದ್ದರು. ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ ಸದ್ದು ಮಾಡಿಲ್ಲ. ತಮನ್ನಾ ಸದ್ಯ, ‘ಎಫ್​3: ಫನ್​ ಆ್ಯಂಡ್​ ಫ್ರಸ್ಟ್ರೇಷನ್​’  ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅನಿಲ್​ ರವಿಪುಡಿ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಬೆತ್ತಲೆ ದೃಶ್ಯವನ್ನು ಏಳು ಬಾರಿ ಶೂಟ್​ ಮಾಡಿಸಿದ್ದರು, ನಾನು ನೆಲದಮೇಲೆ ಬಿಕ್ಕಿಬಿಕ್ಕಿ ಅತ್ತಿದೆ’; ಕುಬ್ರಾ ಸೇಠ್​

ಆರ್ಯನ್​ ಖಾನ್​ ವಿರುದ್ಧದ ತನಿಖೆಗೆ ತೊಂದರೆ ಕೊಡುವವರಿಗೆ ಪಾಠ ಕಲಿಸೋಕೆ ಮುಂದಾದ ಸಮೀರ್​ ವಾಂಖೆಡೆ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?